ಕೊಲೆಯಲ್ಲಿ ಅಂತ್ಯವಾದ ಗ್ರಾ.ಪಂ. ಚುನಾವಣಾ ವಿಜಯೋತ್ಸವ: ಗೆದ್ದ ಅಭ್ಯರ್ಥಿಯ ಸಂಬಂಧಿ ಸಾವು

ಗ್ರಾಮ ಪಂಚಾಯಿತಿ ಚುನಾವಣಾ ವಿಜಯೋತ್ಸವ ಕೊಲೆಯಲ್ಲಿ ಅಂತ್ಯವಾಗಿದೆ. ಗೆದ್ದ ಅಭ್ಯರ್ಥಿಯ ಸಂಬಂಧಿ ಮೃತಪಟ್ಟಿದ್ದಾನೆ.

ಕೊಲೆಯಲ್ಲಿ ಅಂತ್ಯವಾದ ಗ್ರಾ.ಪಂ. ಚುನಾವಣಾ ವಿಜಯೋತ್ಸವ: ಗೆದ್ದ ಅಭ್ಯರ್ಥಿಯ ಸಂಬಂಧಿ ಸಾವು
ಸಂಗ್ರಹ ಚಿತ್ರ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Dec 31, 2020 | 1:09 PM

ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣಾ ವಿಜಯೋತ್ಸವ ಕೊಲೆಯಲ್ಲಿ ಅಂತ್ಯವಾಗಿದೆ. ಗೆದ್ದ ಅಭ್ಯರ್ಥಿಯ ಸಂಬಂಧಿ ಮೃತಪಟ್ಟಿದ್ದಾನೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾಪುರ ಗ್ರಾಮದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಮತ್ತು ತದನಂತರ ನಿನ್ನೆಯ ಫಲಿತಾಂಶ ಘೋಷಣೆ ಸಂದರ್ಭದಲ್ಲಿ ಈ ದುರಂತ ಘಟನೆ ನಡೆದಿದ್ದು, ರೊಚ್ಚಿಗೆದ್ದ ಪರಸ್ಪರ ಗುಂಪುಗಳು ಬಡಿದಾಟದಲ್ಲಿ ತೊಡಗಿ, ಒಬ್ಬ ವ್ಯಕ್ತಿಯ ಸಾವಿನಲ್ಲಿ ಅಂತ್ಯವಾಗಿದೆ.

ಬಶೀರ ಮುಲ್ಲಾ, ಶಬ್ಬೀರ ಮುಲ್ಲಾ ಗ್ರಾ. ಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು. ಚುನಾಚಣೆಯಲ್ಲಿ ಬಶೀರ ಮುಲ್ಲಾ ಗೆಲುವು ಸಾಧಿಸಿದ್ದು, ಶಬ್ಬೀರ ಮುಲ್ಲಾಗೆ ಸೋಲುಂಟಾಗಿತ್ತು. ಗೆದ್ದ ಅಭ್ಯರ್ಥಿಯು ಸೋತ ಅಭ್ಯರ್ಥಿ ಮನೆ ಮುಂದೆ ವಿಜಯೋತ್ಸವ ಮಾಡಿದ್ದ. ಈ ವಿಜಯೋತ್ಸವ ಹಿನ್ನೆಲೆ ಪರಸ್ಪರ ಗುಂಪುಗಳು ಮಾರಕಾಸ್ತ್ರಗಳಿಂದ ತೀವ್ರವಾಗಿ ಕಾದಾಟದಲ್ಲಿ ತೊಡಗಿದ್ದವು. ಆ ವೇಳೆ, ಗೆದ್ದ ಬಶೀರ ಮುಲ್ಲಾನ ಸಹೋದರ ಶಾನೂರ ಮುಲ್ಲಾ(50) ಸಾವಿಗೀಡಾಗಿದ್ದಾನೆ.

ಶಬ್ಬೀರ ಮುಲ್ಲಾ ಸಂಬಂಧಿಕರು ಮಾರಕಾಸ್ತ್ರಗಳಿಂದ ಶಾನೂರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 6 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದ ಒಂದು ಗಂಟೆಯಲ್ಲಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾ.ಪಂ. ಚುನಾವಣೆ: ಸೋತ ಅಭ್ಯರ್ಥಿ ಮನೆ ಮುಂದೆ ಪಟಾಕಿ ಹಚ್ಚಿ ಸಂಭ್ರಮ.. ಬೆಂಬಲಿಗರು, ಕುಟುಂಬಸ್ಥರ ನಡುವೆ ಮಾರಾಮಾರಿ

Published On - 1:08 pm, Thu, 31 December 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us