
ಚಿಕ್ಕಮಗಳೂರು: ಮನೆಯ ಸೌಂದರ್ಯಕ್ಕೆ ಧಕ್ಕೆಯಾಗುತ್ತೆ ಎಂದು ಸರ್ಕಾರಿ ಬಸ್ ನಿಲ್ದಾಣವನ್ನು ಧ್ವಂಸಗೊಳಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದರ್ಪ ಮೆರೆದಿದ್ದಾರೆ. ಕಡೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅಧ್ಯಕ್ಷೆಯ ಮಕ್ಕಳಾದ ಪ್ರಭಾಕರ್ ಮತ್ತು ಜಗದೀಶ್ ತೆರವು ಕಾರ್ಯದಲ್ಲಿ ಭಾಗಿಯಾಗಿದ್ದರು. ಬಸ್ ನಿಲ್ದಾಣವಿಲ್ಲದೆ ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
Published On - 10:24 am, Mon, 22 June 20