ಚಾರ್ಮಾಡಿ ಘಾಟ್‌ ವಾಹನ ಸಂಚಾರಕ್ಕೆ ಮುಕ್ತ, ಆದರೆ?

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆಗಳು ಮುಚ್ಚಿ ಹೋಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆ ಮಾರ್ಗದಲ್ಲಿ ಐದು ದಿನಗಳ ಕಾಲ ವಾಹನ ಸಂಚಾರವನ್ನು ನಿಷೇಧಿಸಿತ್ತು. ಇದೀಗ, ಚಾರ್ಮಾಡಿ ಘಾಟ್​ನ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಬಂಡೆಗಳನ್ನ ತೆರವುಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7ರಿಂದ ಸಂಜೆ 7 ರವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಾಳೆಯಿಂದಲೇ ವಾಹನ ಸಂಚಾರಕ್ಕೆ ಪ್ರಾರಂಭವಾಗುವುದು ಎಂದು ಜಿಲ್ಲಾಧಿಕಾರಿ ಡಾಕ್ಟರ್ […]

ಚಾರ್ಮಾಡಿ ಘಾಟ್‌ ವಾಹನ ಸಂಚಾರಕ್ಕೆ ಮುಕ್ತ, ಆದರೆ?
ಸಾಧು ಶ್ರೀನಾಥ್​

Updated on: Aug 11, 2020 | 7:19 PM

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆಗಳು ಮುಚ್ಚಿ ಹೋಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆ ಮಾರ್ಗದಲ್ಲಿ ಐದು ದಿನಗಳ ಕಾಲ ವಾಹನ ಸಂಚಾರವನ್ನು ನಿಷೇಧಿಸಿತ್ತು.

ಇದೀಗ, ಚಾರ್ಮಾಡಿ ಘಾಟ್​ನ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಬಂಡೆಗಳನ್ನ ತೆರವುಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬೆಳಿಗ್ಗೆ 7ರಿಂದ ಸಂಜೆ 7 ರವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಾಳೆಯಿಂದಲೇ ವಾಹನ ಸಂಚಾರಕ್ಕೆ ಪ್ರಾರಂಭವಾಗುವುದು ಎಂದು ಜಿಲ್ಲಾಧಿಕಾರಿ ಡಾಕ್ಟರ್ ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us