AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್‌ ನರ್ಸ್ ಮೇಲೆ ಗುಂಪು ಕಟ್ಟಿಕೊಂಡು ಬಂದು ಹಲ್ಲೆ

ಬಾಗಲಕೋಟೆ: ಕೊರೊನಾ ವಾರಿಯರ್‌ ನರ್ಸ್ ಮೇಲೆ ಗುಂಪಿನಿಂದ ಹಲ್ಲೆ ನಡೆದಿರುವ ಘಟನೆ ಬಾದಾಮಿ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿದ ಪರಿಣಾಮ ನರ್ಸ್ ರಾಜೇಶ್ವರಿ ಮ್ಯಾಗಿನಮನಿ (47) ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೆರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ಮಹಿಳಾ ಕಿರಿಯ ಆರೋಗ್ಯ ಸಹಾಯಕಿಯಾಗಿ ರಾಜೇಶ್ವರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊವಿಡ್ ಟೆಸ್ಟ್‌ ವರದಿಯಲ್ಲಿ ಇಂದ್ರವ್ವಗೆ ನೆಗೆಟಿವ್ ಬಂದಿತ್ತು. ಆದರೆ ಇಂದ್ರವ್ವ ಅರಹುಣಶಿ ಎಂಬುವರಿಗೆ ಕೊವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಲ್ಲಿ ಕ್ವಾರಂಟೈನ್ ಆಗಲು […]

ಕೊರೊನಾ ವಾರಿಯರ್‌ ನರ್ಸ್ ಮೇಲೆ ಗುಂಪು ಕಟ್ಟಿಕೊಂಡು ಬಂದು ಹಲ್ಲೆ
ಆಯೇಷಾ ಬಾನು
| Edited By: |

Updated on: Oct 22, 2020 | 1:23 PM

Share

ಬಾಗಲಕೋಟೆ: ಕೊರೊನಾ ವಾರಿಯರ್‌ ನರ್ಸ್ ಮೇಲೆ ಗುಂಪಿನಿಂದ ಹಲ್ಲೆ ನಡೆದಿರುವ ಘಟನೆ ಬಾದಾಮಿ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿದ ಪರಿಣಾಮ ನರ್ಸ್ ರಾಜೇಶ್ವರಿ ಮ್ಯಾಗಿನಮನಿ (47) ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕೆರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ಮಹಿಳಾ ಕಿರಿಯ ಆರೋಗ್ಯ ಸಹಾಯಕಿಯಾಗಿ ರಾಜೇಶ್ವರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊವಿಡ್ ಟೆಸ್ಟ್‌ ವರದಿಯಲ್ಲಿ ಇಂದ್ರವ್ವಗೆ ನೆಗೆಟಿವ್ ಬಂದಿತ್ತು. ಆದರೆ ಇಂದ್ರವ್ವ ಅರಹುಣಶಿ ಎಂಬುವರಿಗೆ ಕೊವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಲ್ಲಿ ಕ್ವಾರಂಟೈನ್ ಆಗಲು ನರ್ಸ್‌ ರಾಜೇಶ್ವರಿ ಹೇಳಿದ್ದರು.

ಆದರೆ ಕುಟುಂಬಸ್ಥರು ಊರಲ್ಲಿ ನಮ್ಮ ಮರ್ಯಾದೆ ಹಾಳು ಮಾಡಿದೆ ಎಂದು ನರ್ಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಗುಂಪಿನ ಜೊತೆ ಬಂದು ದೊಣ್ಣೆ ಹಿಡಿದು ಹೊಡೆದಿದ್ದಾರೆ. ಈ ವೇಳೆ ನರ್ಸ್ ರಾಜೇಶ್ವರಿ ಕುಟುಂಬದವರು ವಿಡಿಯೋ ಮಾಡಲು ಮುಂದಾದ್ರು. ಅದನ್ನು ಗಮನಿಸಿದ ಆರೋಪಿಗಳು ವಿಡಿಯೋ ಮಾಡುತ್ತೀರಾ ಎಂದು ಹಲ್ಲೆ ನಡೆಸಿದ್ದಾರೆ.

ನಾಲ್ವರ ವಿರುದ್ಧ ಎಫ್‌ಐಆರ್ ನರ್ಸ್‌ ರಾಜೇಶ್ವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದ್ರವ್ವ ಅರಹುಣಶಿ, ಪರಶುರಾಮ ನಾಯ್ಕರ್, ದೇವಕೆವ್ವ ನಾಯ್ಕರ್, ಗೋಪಾಲ ನಾಯ್ಕರ್‌ ಹಲ್ಲೆ ಮಾಡಿದವರು ಎಂದು ಗುರುತಿಸಲಾಗಿದ್ದು ನಾಲ್ವರ ವಿರುದ್ಧ ಕೆರೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ