AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತದೇ ರಗಳೆ.. ಮಾಸ್ಕ್ ಹಾಕದ ಗುಂಪಿಂದ ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ

ಬೆಂಗಳೂರು: ಮತ್ತದೇ ರಗಳೆ ನಡೆದಿದೆ. ಕೊರೊನಾ ವಾರಿಯರ್ಸ್​ ಮೇಲೆ ಮತ್ತೆ ರಾತ್ರೋರಾತ್ರಿ ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಸ್ಕ್ ಹಾಕದ ವ್ಯಕ್ತಿಯೊಬ್ಬ ಗುಂಪು ಕಟ್ಟಿಕೊಂಡು ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಚೀಫ್ ಮಾರ್ಷಲ್ ಆಫೀಸರ್ ರಜ್ ಬೀರ್ ಸಿಂಗ್ ದೂರು ದಾಖಲು ಮಾಡಿದ್ದಾರೆ. ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ: ನಿನ್ನೆ ರಾತ್ರಿ ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಗುಂಪುಕೂಡಿ ಈ ಪುಂಡಾಟಿಕೆ ನಡೆಸಿದ್ದಾನೆ. ಬಿಬಿಎಂಪಿ […]

ಮತ್ತದೇ ರಗಳೆ.. ಮಾಸ್ಕ್ ಹಾಕದ ಗುಂಪಿಂದ ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ
Follow us
ಸಾಧು ಶ್ರೀನಾಥ್​
|

Updated on: May 04, 2020 | 5:52 PM

ಬೆಂಗಳೂರು: ಮತ್ತದೇ ರಗಳೆ ನಡೆದಿದೆ. ಕೊರೊನಾ ವಾರಿಯರ್ಸ್​ ಮೇಲೆ ಮತ್ತೆ ರಾತ್ರೋರಾತ್ರಿ ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಸ್ಕ್ ಹಾಕದ ವ್ಯಕ್ತಿಯೊಬ್ಬ ಗುಂಪು ಕಟ್ಟಿಕೊಂಡು ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಚೀಫ್ ಮಾರ್ಷಲ್ ಆಫೀಸರ್ ರಜ್ ಬೀರ್ ಸಿಂಗ್ ದೂರು ದಾಖಲು ಮಾಡಿದ್ದಾರೆ.

ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ: ನಿನ್ನೆ ರಾತ್ರಿ ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಗುಂಪುಕೂಡಿ ಈ ಪುಂಡಾಟಿಕೆ ನಡೆಸಿದ್ದಾನೆ. ಬಿಬಿಎಂಪಿ ಮಾರ್ಷಲ್​ಗಳು ಸಾರ್ವಜನಿಕ ಸ್ಥಳಗಳಲ್ಲಿ ಕಸ, ಪ್ರಾಣಿತ್ಯಾಜ್ಯ ಎಸೆಯದಂತೆ, ಮಾಸ್ಕ್ ಹಾಕದಂತೆ ಮೇಲ್ವಿಚಾರಣೆ ಮಾಡುತ್ತಿದ್ದಾಗ ಈ ಹಲ್ಲೆ ನಡೆದಿದೆ. ನಿನ್ನೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ಮಾರ್ಷಲ್ ಗಳ ಮೇಲೆ ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಮಾರ್ಷಲ್​ಗಳು ಮೋದಿ ಸರ್ಕಾರದ ಕಡೆಯವರಾ?: ಅಬ್ದುಲ್ ರಜಾಕ್ ಹಾಗೂ ಗುಂಪಿನವರು ಮಾಸ್ಕ್ ಹಾಕದೇ ಓಡಾಡುತ್ತಿದ್ದರು. ಆ ವೇಳೆ ಪಾಲಿಕೆಯ ಮಾರ್ಷಲ್​ಗಳು ಅವರನ್ನ ಪ್ರಶ್ನಿಸಿ, ದಂಡ ಹಾಕಲು ಮುಂದಾಗಿದ್ದಾರೆ. ಆ ವೇಳೆ ದಂಡ ಹಾಕಲು ನೀವ್ಯಾರು, ನೀವೆಲ್ಲ ಮೋದಿ ಸರ್ಕಾರದವರು ಎಂದು ಬೈಯುವುದಕ್ಕೆ ಶುರು ಮಾಡಿದ್ದಾರೆ. ಸ್ಥಳೀಯರನ್ನೆಲ್ಲ ಕರೆದು ಹಲ್ಲೆ ಮಾಡಲು ಪ್ರೇರೇಪಿಸಿದ್ದಾನೆ. ಈ ಮಧ್ಯೆ, ದಂಡ ಹಾಕುವ ಮೆಷಿನ್, ದಂಡ ಹಾಕಿ ಸಂಗ್ರಹಿಸಿದ್ದ ಹಣವನ್ನೂ ಕೂಡಾ ಕಿತ್ತುಕೊಂಡಿದ್ದಾರೆ.

ಅಲ್ಲದೆ ಈ ವೇಳೆ ವೀಡಿಯೋ ಮಾಡುತ್ತಿದ್ದ ಮಾರ್ಷಲ್ ಕೆನ್ನೆಗೆ ಹೊಡೆದು ಪುಂಡಾಟಿಕೆ ಮಾಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿಯ ಚೀಫ್ ಮಾರ್ಷಲ್ ಆಫೀಸರ್ ರಜ್ ಬೀರ್ ಸಿಂಗ್ ದೂರು ದಾಖಲು ಮಾಡಿದ್ದಾರೆ. ಅಲ್ಲದೆ ಸರ್ಕಾರಿ ಕೆಲಸದ ಮೇಲಿದ್ದಾಗ ತೊಂದರೆ ಕೊಟ್ಟ ಕಾರಣ ಎಫ್ ಐರ್ ದಾಖಲಿಸುವಂತೆ ಮನವಿ ಮಾಡಿದ್ದಾರೆ.

ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್