AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತದೇ ರಗಳೆ.. ಮಾಸ್ಕ್ ಹಾಕದ ಗುಂಪಿಂದ ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ

ಬೆಂಗಳೂರು: ಮತ್ತದೇ ರಗಳೆ ನಡೆದಿದೆ. ಕೊರೊನಾ ವಾರಿಯರ್ಸ್​ ಮೇಲೆ ಮತ್ತೆ ರಾತ್ರೋರಾತ್ರಿ ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಸ್ಕ್ ಹಾಕದ ವ್ಯಕ್ತಿಯೊಬ್ಬ ಗುಂಪು ಕಟ್ಟಿಕೊಂಡು ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಚೀಫ್ ಮಾರ್ಷಲ್ ಆಫೀಸರ್ ರಜ್ ಬೀರ್ ಸಿಂಗ್ ದೂರು ದಾಖಲು ಮಾಡಿದ್ದಾರೆ. ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ: ನಿನ್ನೆ ರಾತ್ರಿ ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಗುಂಪುಕೂಡಿ ಈ ಪುಂಡಾಟಿಕೆ ನಡೆಸಿದ್ದಾನೆ. ಬಿಬಿಎಂಪಿ […]

ಮತ್ತದೇ ರಗಳೆ.. ಮಾಸ್ಕ್ ಹಾಕದ ಗುಂಪಿಂದ ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ
ಸಾಧು ಶ್ರೀನಾಥ್​
|

Updated on: May 04, 2020 | 5:52 PM

Share

ಬೆಂಗಳೂರು: ಮತ್ತದೇ ರಗಳೆ ನಡೆದಿದೆ. ಕೊರೊನಾ ವಾರಿಯರ್ಸ್​ ಮೇಲೆ ಮತ್ತೆ ರಾತ್ರೋರಾತ್ರಿ ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಸ್ಕ್ ಹಾಕದ ವ್ಯಕ್ತಿಯೊಬ್ಬ ಗುಂಪು ಕಟ್ಟಿಕೊಂಡು ರಾತ್ರೋರಾತ್ರಿ ಮಾರ್ಷಲ್​ಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಚೀಫ್ ಮಾರ್ಷಲ್ ಆಫೀಸರ್ ರಜ್ ಬೀರ್ ಸಿಂಗ್ ದೂರು ದಾಖಲು ಮಾಡಿದ್ದಾರೆ.

ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ: ನಿನ್ನೆ ರಾತ್ರಿ ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಗುಂಪುಕೂಡಿ ಈ ಪುಂಡಾಟಿಕೆ ನಡೆಸಿದ್ದಾನೆ. ಬಿಬಿಎಂಪಿ ಮಾರ್ಷಲ್​ಗಳು ಸಾರ್ವಜನಿಕ ಸ್ಥಳಗಳಲ್ಲಿ ಕಸ, ಪ್ರಾಣಿತ್ಯಾಜ್ಯ ಎಸೆಯದಂತೆ, ಮಾಸ್ಕ್ ಹಾಕದಂತೆ ಮೇಲ್ವಿಚಾರಣೆ ಮಾಡುತ್ತಿದ್ದಾಗ ಈ ಹಲ್ಲೆ ನಡೆದಿದೆ. ನಿನ್ನೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ಮಾರ್ಷಲ್ ಗಳ ಮೇಲೆ ಅಬ್ದುಲ್ ರಜಾಕ್ ಎಂಬ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಮಾರ್ಷಲ್​ಗಳು ಮೋದಿ ಸರ್ಕಾರದ ಕಡೆಯವರಾ?: ಅಬ್ದುಲ್ ರಜಾಕ್ ಹಾಗೂ ಗುಂಪಿನವರು ಮಾಸ್ಕ್ ಹಾಕದೇ ಓಡಾಡುತ್ತಿದ್ದರು. ಆ ವೇಳೆ ಪಾಲಿಕೆಯ ಮಾರ್ಷಲ್​ಗಳು ಅವರನ್ನ ಪ್ರಶ್ನಿಸಿ, ದಂಡ ಹಾಕಲು ಮುಂದಾಗಿದ್ದಾರೆ. ಆ ವೇಳೆ ದಂಡ ಹಾಕಲು ನೀವ್ಯಾರು, ನೀವೆಲ್ಲ ಮೋದಿ ಸರ್ಕಾರದವರು ಎಂದು ಬೈಯುವುದಕ್ಕೆ ಶುರು ಮಾಡಿದ್ದಾರೆ. ಸ್ಥಳೀಯರನ್ನೆಲ್ಲ ಕರೆದು ಹಲ್ಲೆ ಮಾಡಲು ಪ್ರೇರೇಪಿಸಿದ್ದಾನೆ. ಈ ಮಧ್ಯೆ, ದಂಡ ಹಾಕುವ ಮೆಷಿನ್, ದಂಡ ಹಾಕಿ ಸಂಗ್ರಹಿಸಿದ್ದ ಹಣವನ್ನೂ ಕೂಡಾ ಕಿತ್ತುಕೊಂಡಿದ್ದಾರೆ.

ಅಲ್ಲದೆ ಈ ವೇಳೆ ವೀಡಿಯೋ ಮಾಡುತ್ತಿದ್ದ ಮಾರ್ಷಲ್ ಕೆನ್ನೆಗೆ ಹೊಡೆದು ಪುಂಡಾಟಿಕೆ ಮಾಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿಯ ಚೀಫ್ ಮಾರ್ಷಲ್ ಆಫೀಸರ್ ರಜ್ ಬೀರ್ ಸಿಂಗ್ ದೂರು ದಾಖಲು ಮಾಡಿದ್ದಾರೆ. ಅಲ್ಲದೆ ಸರ್ಕಾರಿ ಕೆಲಸದ ಮೇಲಿದ್ದಾಗ ತೊಂದರೆ ಕೊಟ್ಟ ಕಾರಣ ಎಫ್ ಐರ್ ದಾಖಲಿಸುವಂತೆ ಮನವಿ ಮಾಡಿದ್ದಾರೆ.

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ