AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಆರಂಭಿಸೋದ್ಯಾವಾಗ ಎಂದಿದ್ದೇ ತಪ್ಪಾಯ್ತು, ರೌಡಿಗಳ ಜೊತೆ ಬಂದು ಮನೆ ಮೇಲೆ ಅಟ್ಯಾಕ್..

ಹುಬ್ಬಳ್ಳಿ: ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಕ್ಷುಲ್ಲಕ ಕಾರಣಕ್ಕೆ ಮಚ್ಚು ಲಾಂಗುಗಳು ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಹಾಡಗಲೇ ಗುಂಡಿನ ದಾಳಿ ನಡೆದಿದ್ದು, ಇನ್ನೂ ಹಸಿಯಾಗಿರುವಾಗ್ಲೇ ಈಗ ಮತ್ತೋಂದು ಗುಂಪು ದಾದಾಗಿರಿ ನಡೆಸಿದೆ. ಇತ್ತೀಚೆಗೆ ಅವಳಿನಗರದಲ್ಲಿ ಎಲ್ಲವೂ ಸರಿಯಿಲ್ಲಾ ಅನ್ನೋದಕ್ಕೆ ಸಾಕಷ್ಟು ದುರ್ಘಟನೆಗಳು ಸಾಕ್ಷಿಯಾಗುತ್ತಿವೆ. ಹಾಡಹಗಲೇ ಫೈರಿಂಗ್. ಜನರ ಶಾಂತಿ ಕದಡುತ್ತಿರುವ ಕೊಲೆಗಳು. ಹೀಗೆ ಹುಬ್ಬಳ್ಳಿಯಲ್ಲಿ ಜನರು ನಡುಗುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ರೌಡಿಗಳ […]

ಕೆಲಸ ಆರಂಭಿಸೋದ್ಯಾವಾಗ ಎಂದಿದ್ದೇ ತಪ್ಪಾಯ್ತು, ರೌಡಿಗಳ ಜೊತೆ ಬಂದು ಮನೆ ಮೇಲೆ ಅಟ್ಯಾಕ್..
ಆಯೇಷಾ ಬಾನು
|

Updated on: Nov 16, 2020 | 6:59 AM

Share

ಹುಬ್ಬಳ್ಳಿ: ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಕ್ಷುಲ್ಲಕ ಕಾರಣಕ್ಕೆ ಮಚ್ಚು ಲಾಂಗುಗಳು ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಹಾಡಗಲೇ ಗುಂಡಿನ ದಾಳಿ ನಡೆದಿದ್ದು, ಇನ್ನೂ ಹಸಿಯಾಗಿರುವಾಗ್ಲೇ ಈಗ ಮತ್ತೋಂದು ಗುಂಪು ದಾದಾಗಿರಿ ನಡೆಸಿದೆ.

ಇತ್ತೀಚೆಗೆ ಅವಳಿನಗರದಲ್ಲಿ ಎಲ್ಲವೂ ಸರಿಯಿಲ್ಲಾ ಅನ್ನೋದಕ್ಕೆ ಸಾಕಷ್ಟು ದುರ್ಘಟನೆಗಳು ಸಾಕ್ಷಿಯಾಗುತ್ತಿವೆ. ಹಾಡಹಗಲೇ ಫೈರಿಂಗ್. ಜನರ ಶಾಂತಿ ಕದಡುತ್ತಿರುವ ಕೊಲೆಗಳು. ಹೀಗೆ ಹುಬ್ಬಳ್ಳಿಯಲ್ಲಿ ಜನರು ನಡುಗುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ರೌಡಿಗಳ ಗುಂಪು ಅಮಾಯಕರ ಮೇಲೆ ಮನಸ್ಸಿಗೆ ಬಂದಂತೆ ಹಲ್ಲೆ ನಡೆಸಿದೆ. ರಾಡ್‌, ಕಲ್ಲುಗಳಿಂದ ಮೂವರ ಮೇಲೆ ದಾಳಿ ಮಾಡಿದ್ದಾರೆ.

₹15 ಸಾವಿರ ಹಣ ಪಡೆದು ಎಸ್ಕೇಪ್! ಅಷ್ಟಕ್ಕೂ ಹುಬ್ಬಳ್ಳಿಯ ಮಂಟೂರು ರಸ್ತೆಯ ದಾವಲಸಾಬ್‌ ಅನ್ನೋರು ಮನೆ ನಿರ್ಮಾಣ ಮಾಡುತ್ತಿದ್ರು. ಆದ್ರೆ ಮನೆ ನಿರ್ಮಾಣದ ಗುತ್ತಿಗೆಗೆ ಪಡೆದಿದ್ದ ಸಿರಾಜ್ ಬಡಗಿ ಅನ್ನೋ ಪಾತಕಿ, ಮುಂಗಡ ಹಣವಾಗಿ 15 ಸಾವಿರ ರೂಪಾಯಿ ಪಡೆದು ಮಾಯವಾಗಿದ್ದ. ಸುಮಾರು ದಿನ ಕಳೆದ್ರು ಕೆಲಸಕ್ಕೆ ಬಂದಿರಲಿಲ್ಲಾ. ನಿನ್ನೆ ಆಕಸ್ಮಿಕವಾಗಿ ಮನೆ ಬಳಿಯೇ ಸಿರಾಜ್ ಸಿಕ್ಕಿಬಿದ್ದಿದ್ದ. ದಾವಲ್​ಸಾಬ್‌ ಮತ್ತು ಮನೆಯವರು ಯಾಕಪ್ಪ ಇನ್ನೂ ಮನೆ ಕೆಲ್ಸ ಪ್ರಾರಂಭ ಮಾಡಲಿಲ್ಲಾ ಅಂತಾ ಕೇಳಿದ್ದಕ್ಕೆ ಬಾಯಿಗೆ ಬಂದಂತೆ ಬೈದು ಹೋಗಿದ್ದ್ದ. ದುಡ್ಡು ಕಳ್ಕೊಂಡು ತಲೆ ಮೇಲೆ ಕೈ ಹೋತ್ತು ಕೂತಿದ್ದ ದಾವಲ್‌ಸಾಬ್‌ ಕುಟುಂಬಕ್ಕೆ ಸಂಜೆ ಶಾಕ್‌ ಕಾದಿತ್ತು. 8ರಿಂದ 10 ರೌಡಿಗಳನ್ನ ಕರ್ಕೊಂಡು ಬಂದ ಸಿರಾಜ್, ದಾವಲ್​ಸಾಬ್​ ಮನೆ ಮಂದಿ ಮೇಲೆ ದಾಳಿ ಮಾಡಿದ್ದ.

ಕ್ಷುಲ್ಲಕ ಕಾರಣಕ್ಕೆ ರೌಡಿ ಗ್ಯಾಂಗ್‌ ಹಲ್ಲೆ ಮಾಡಿರೋದು ಹುಬ್ಬಳ್ಳಿ ಜನರನ್ನ ಮತ್ತೊಮ್ಮೆ ಬೆಚ್ಚಿಬೀಳಿಸಿದೆ. ಈ ಕೇಸ್‌ನ್ನು ಗಂಭೀರವಾಗಿ ಪರಿಗಣಿಸಿದ ಬೆಂಡಿಗೇರಿ ಪೋಲಿಸರು ಸಿರಾಜ್‌ ಹೆಡೆಮುರಿ ಕಟ್ಟೋದ್ರಲ್ಲಿ ಸಕ್ಸಸ್ ಕಂಡಿದ್ದಾರೆ. ಇಬ್ಬರನ್ನ ಬಂಧಿಸಿದ್ದು ಇನ್ನೂ 6 ಮಂದಿ ನಾಪತ್ತೆಯಾಗಿದ್ದಾರೆ. ಪದೇಪದೆ ಅವಳಿ ನಗರದಲ್ಲಿ ನಡೀತಿರೋ ಅಪರಾಧ ಚಟುವಟಿಕೆಗಳು ಜನರ ನೆಮ್ಮದಿ ಹಾಳುಮಾಡಿವೆ. ಕಳೆದ ಕೆಲ ತಿಂಗಳಿಂದ ಮಹಾನಗರ ಡಿಸಿಪಿ ಹುದ್ದೆ ಖಾಲಿಯಿರೋದು ಆಕ್ರೋಶಕ್ಕೆ ಕಾರಣವಾಗಿದೆ. ಪರಿಣಾಮ ಚೋಟಾ ಮುಂಬೈಯಲ್ಲಿ ಅಪರಾಧಗಳು ಬಡಾ ಮುಂಬೈ ಅನ್ನೂ ನಾಚಿಸುವಂತೆ ಹೆಚ್ಚಿವೆ. ಕೂಡಲೇ ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಇಲ್ಲವಾದ್ರೆ ಪುಡಿ ರೌಡಿಗಳು ಹಾಗೂ ಖತರ್ನಾಕ್​ಗಳ ಆಟಾಟೋಪಕ್ಕೆ ಬ್ರೇಕ್ ಹಾಕೋದು ಕಷ್ಟವಾಗಲಿದೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ