AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೇ! ಯಾವ ಮಹಾಪರಾಧಕ್ಕೆ ಈ ಶಿಕ್ಷೆ? ಕರುಳ ಕುಡಿಗೇ 10 ವರ್ಷದಿಂದ ಬೇಡಿ ಹಾಕಿದ್ದಾರೆ!

ಬೆಳಗಾವಿ: ಛೇ! ಯಾವ ತಪ್ಪಿಗೆ ಈ ಶಿಕ್ಷೆ? ಕರುಳ ಕಂದನಿಗೇ 10 ವರ್ಷದಿಂದ ಬೇಡಿ ಹಾಕಿದ್ದಾರಂತೆ! ಇನ್ನೂ ಯಾವ ಕಾಲದಲ್ಲಿದ್ದಾರೆ ಈ ಜನ. ಮಾನಸಿಕ ಅಸ್ವಸ್ಥ ಎಂದು ಹಣೆಪಟ್ಟಿ ಹಚ್ಚಿ ಸ್ವಂತ ಪುತ್ರನಿಗೆ 10 ವರ್ಷಗಳಿಂದ ಕಾಲಿಗೆ ಬೇಡಿ ಹಾಕಿರುವ ಅಮಾನವೀಯ ಪ್ರಸಂಗ ಇದೀಗ ಬೆಳಕಿಗೆ ಬಂದಿದೆ. ಯಾವ ಮಹಾಪರಾಧಕ್ಕೆ? ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಇಂತಹ ಅಮಾನವೀಯ ಘಟನೆ ನಡೆದಿದೆ. ವಿಠ್ಠಲ್ ಬಳಗಣ್ಣವರ್​ ಎಂಬ ವ್ಯಕ್ತಿಗೆ ಪೋಷಕರೇ ಬೇಡಿ ತೊಡಿಸಿದ್ದಾರೆ. ಇಷ್ಟಕ್ಕೂ ಬೇಡಿ […]

ಛೇ! ಯಾವ ಮಹಾಪರಾಧಕ್ಕೆ ಈ ಶಿಕ್ಷೆ? ಕರುಳ ಕುಡಿಗೇ 10 ವರ್ಷದಿಂದ ಬೇಡಿ ಹಾಕಿದ್ದಾರೆ!
ಸಾಧು ಶ್ರೀನಾಥ್​
| Edited By: |

Updated on: Jun 24, 2020 | 9:11 AM

Share

ಬೆಳಗಾವಿ: ಛೇ! ಯಾವ ತಪ್ಪಿಗೆ ಈ ಶಿಕ್ಷೆ? ಕರುಳ ಕಂದನಿಗೇ 10 ವರ್ಷದಿಂದ ಬೇಡಿ ಹಾಕಿದ್ದಾರಂತೆ! ಇನ್ನೂ ಯಾವ ಕಾಲದಲ್ಲಿದ್ದಾರೆ ಈ ಜನ. ಮಾನಸಿಕ ಅಸ್ವಸ್ಥ ಎಂದು ಹಣೆಪಟ್ಟಿ ಹಚ್ಚಿ ಸ್ವಂತ ಪುತ್ರನಿಗೆ 10 ವರ್ಷಗಳಿಂದ ಕಾಲಿಗೆ ಬೇಡಿ ಹಾಕಿರುವ ಅಮಾನವೀಯ ಪ್ರಸಂಗ ಇದೀಗ ಬೆಳಕಿಗೆ ಬಂದಿದೆ.

ಯಾವ ಮಹಾಪರಾಧಕ್ಕೆ? ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಇಂತಹ ಅಮಾನವೀಯ ಘಟನೆ ನಡೆದಿದೆ. ವಿಠ್ಠಲ್ ಬಳಗಣ್ಣವರ್​ ಎಂಬ ವ್ಯಕ್ತಿಗೆ ಪೋಷಕರೇ ಬೇಡಿ ತೊಡಿಸಿದ್ದಾರೆ. ಇಷ್ಟಕ್ಕೂ ಬೇಡಿ ತೆಗೆದರೆ ಇವನು ಮಾಡುವ ಮಹಾಪರಾಧ ಏನೂ ಅಂತ ಕೇಳಿದಾಗ.  ಏನಿಲ್ಲ ಎದುರಿಗೆ ಸಿಕ್ಕಿದವರಿಗೆಲ್ಲ ಕಲ್ಲಿನಿಂದ ಹೊಡೆಯುತ್ತಾನೆ ಎಂದು ಅವನ ಹೆತ್ತವರೇ ಆರೋಪಿಸಿದ್ದಾರೆ.

ವಿಠ್ಠಲ್ ಬಳಗಣ್ಣವರ್​ 10 ವರ್ಷಗಳ ಹಿಂದೆ ಬೆಳಗಾವಿಯ ಹೋಟೆಲ್‌ನಲ್ಲಿದ್ದ. ಬಳಿಕ ಊರಿಗೆ ಬಂದ ಮೇಲೆ ಮಾನಸಿಕ ಅಸ್ವಸ್ಥನಾಗಿದ್ದ. ಆಸ್ಪತ್ರೆಗೆ ತೋರಿಸಿದರೂ ಗುಣಮುಖನಾಗದ ಹಿನ್ನೆಲೆಯಲ್ಲಿ ಅವನನ್ನು ಮನೆಯಲ್ಲಿ ಕೂಡಿ ಹಾಕಿದ್ದೇವೆ ಎಂದು ಪೋಷಕರು ಹೇಳುತ್ತಾರೆ. ಇದೀಗ ನೇಸರಗಿ ಪಿಎಸ್‌ಐ ವೈ ಎಲ್ ಶೀಗಿಹಳ್ಳಿ ವಿಠ್ಠಲ್ ಬಳಗಣ್ಣವರ್​ ಮನೆಗೆ ಭೇಟಿಕೊಟ್ಟು, ಪರಿಶೀಲನೆ ನಡೆಸಿದ್ದಾರೆ.

ಬೇರೆಯವರೆಗೆ ತೊಂದರೆ ಆಗಬಾರದು, ಅಲ್ವಾ? -ಅಮ್ಮನ ಕರುಳು ಬೇರೆಯವರೆಗೆ ತೊಂದರೆ ಆಗಬಾರದೆಂದು ಮಗನನ್ನು ಮನೆಯಲ್ಲಿ ಕೂಡಿಹಾಕಿದ್ದೇವೆ ಎಂದು ಮಗ ವಿಠ್ಠಲನ ದುಃಸ್ಥಿತಿ ನೆನೆದು ತಾಯಿ ಭೀಮವ್ವಾ ಬಳಗಣ್ಣವರ್ ಕಣ್ಣೀರು ಹಾಕುತ್ತಾರೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ