AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ ತಿಂಗಳಲ್ಲಿ 1.13 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ

2021ರ ಫೆಬ್ರವರಿಯಲ್ಲಿ ಒಟ್ಟು 1,13,143 ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹವಾಗಿದೆ. ಜನವರಿ ತಿಂಗಳಲ್ಲಿ ಇದರ ಪ್ರಮಾಣ 1.19 ಲಕ್ಷ ಕೋಟಿ ಇತ್ತು.

ಫೆಬ್ರವರಿ ತಿಂಗಳಲ್ಲಿ 1.13 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 01, 2021 | 7:29 PM

Share

ನವದೆಹಲಿ: ಕೊರೊನಾ ಸೋಂಕಿನ ಅಬ್ಬರ ಕಡಿಮೆ ಆಗುತ್ತಿದೆ. ದೇಶಾದ್ಯಂತ ಕೊರೊನಾ ಲಸಿಕೆ ಕೂಡ ನೀಡಲಾಗುತ್ತಿದೆ. ಇದರ ಜತೆ ಜತೆಗೆ ಎಲ್ಲಾ ಆರ್ಥಿಕ ಚಟುವಟಿಕೆಗಳು ರೀ-ಓಪನ್​ ಆಗಿದೆ. ಹೀಗಾಗಿ, ಜಿಎಸ್​ಟಿ ಸಂಗ್ರಹ ಹೆಚ್ಚುತ್ತಿದೆ. ಅಕ್ಟೋಬರ್​​​​ ತಿಂಗಳಿಂದ ಇಲ್ಲಿಯವರೆಗೆ ಪ್ರತಿ ತಿಂಗಳು 1 ಲಕ್ಷ ಕೋಟಿಗೂ ಮೀರಿ ಜಿಎಸ್​ಟಿ ಸಂಗ್ರಹವಾಗುತ್ತಿದೆ. ಅಂತೆಯೇ ಫೆಬ್ರವರಿ​ ತಿಂಗಳಲ್ಲೂ ಜಿಎಸ್​ಟಿ ಸಂಗ್ರಹಣೆ 1.13 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂಬುದರ ಸಂಕೇತ ಇದು ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

2021ರ ಫೆಬ್ರವರಿಯಲ್ಲಿ ಒಟ್ಟು 1,13,143 ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹವಾಗಿದೆ. ಜನವರಿ ತಿಂಗಳಲ್ಲಿ ಇದರ ಪ್ರಮಾಣ 1.19 ಲಕ್ಷ ಕೋಟಿ ಇತ್ತು. ಕಳೆದ​ ತಿಂಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಜಿಎಸ್​ಟಿ ಸಂಗ್ರಗ ಕೊಂಚ ಇಳಿಕೆ ಆಗಿದೆ.

ಕೊರೊನಾ ವೈರಸ್​, ನಕಲಿ ಬಿಲ್​ಗಳು ಸೇರಿದಂತೆ ಅನೇಕ ಕಾರಣಗಳಿಂದ ಜಿಎಸ್​ಟಿ ಸಂಗ್ರಹದಲ್ಲಿ ಕುಸಿತ ಕಂಡಿತ್ತು. ಆದರೆ, ಜಿಎಸ್​ಟಿ ಪ್ರಕ್ರಿಯೆಲ್ಲಿ ಸರ್ಕಾರ ಸಾಕಷ್ಟು ಬದಲಾವಣೆ ತಂದಿತ್ತು. ಹೀಗಾಗಿ, ಜಿಎಸ್​ಟಿ ಸಂಗ್ರಹದಲ್ಲಿ ಏರಿಕೆ ಕಂಡಿದೆ ಹಣಕಾಸು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.

2017ರ ಜುಲೈನಲ್ಲಿ ಜಿಎಸ್​ಟಿ ಜಾರಿಗೆ ಬಂದಿತ್ತು. ಜನವರಿ​ 2021ರಲ್ಲಿ ಜಿಎಸ್​ಟಿ ಸಂಗ್ರಹಣೆ ಅತ್ಯಂತ ಹೆಚ್ಚಿನ ಸಂಗ್ರಹಣೆ ಆಗಿತ್ತು. ಡಿಸೆಂಬರ್​ನಲ್ಲಿ 1.15 ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು. ಇದು ಇತಿಹಾಸದಲ್ಲೇ ಅತ್ಯಧಿಕ ಜಿಎಸ್​ಟಿ ಕಲೆಕ್ಷನ್​ ಆಗಿದೆ. ಕಳೆದ ಏಪ್ರಿಲ್​ನಲ್ಲಿ ಕೇವಲ 32 ಸಾವಿರ ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು.

ಇದನ್ನೂ ಓದಿ: GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್