AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ ತಿಂಗಳಲ್ಲಿ 1.13 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ

2021ರ ಫೆಬ್ರವರಿಯಲ್ಲಿ ಒಟ್ಟು 1,13,143 ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹವಾಗಿದೆ. ಜನವರಿ ತಿಂಗಳಲ್ಲಿ ಇದರ ಪ್ರಮಾಣ 1.19 ಲಕ್ಷ ಕೋಟಿ ಇತ್ತು.

ಫೆಬ್ರವರಿ ತಿಂಗಳಲ್ಲಿ 1.13 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 01, 2021 | 7:29 PM

Share

ನವದೆಹಲಿ: ಕೊರೊನಾ ಸೋಂಕಿನ ಅಬ್ಬರ ಕಡಿಮೆ ಆಗುತ್ತಿದೆ. ದೇಶಾದ್ಯಂತ ಕೊರೊನಾ ಲಸಿಕೆ ಕೂಡ ನೀಡಲಾಗುತ್ತಿದೆ. ಇದರ ಜತೆ ಜತೆಗೆ ಎಲ್ಲಾ ಆರ್ಥಿಕ ಚಟುವಟಿಕೆಗಳು ರೀ-ಓಪನ್​ ಆಗಿದೆ. ಹೀಗಾಗಿ, ಜಿಎಸ್​ಟಿ ಸಂಗ್ರಹ ಹೆಚ್ಚುತ್ತಿದೆ. ಅಕ್ಟೋಬರ್​​​​ ತಿಂಗಳಿಂದ ಇಲ್ಲಿಯವರೆಗೆ ಪ್ರತಿ ತಿಂಗಳು 1 ಲಕ್ಷ ಕೋಟಿಗೂ ಮೀರಿ ಜಿಎಸ್​ಟಿ ಸಂಗ್ರಹವಾಗುತ್ತಿದೆ. ಅಂತೆಯೇ ಫೆಬ್ರವರಿ​ ತಿಂಗಳಲ್ಲೂ ಜಿಎಸ್​ಟಿ ಸಂಗ್ರಹಣೆ 1.13 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂಬುದರ ಸಂಕೇತ ಇದು ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

2021ರ ಫೆಬ್ರವರಿಯಲ್ಲಿ ಒಟ್ಟು 1,13,143 ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹವಾಗಿದೆ. ಜನವರಿ ತಿಂಗಳಲ್ಲಿ ಇದರ ಪ್ರಮಾಣ 1.19 ಲಕ್ಷ ಕೋಟಿ ಇತ್ತು. ಕಳೆದ​ ತಿಂಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಜಿಎಸ್​ಟಿ ಸಂಗ್ರಗ ಕೊಂಚ ಇಳಿಕೆ ಆಗಿದೆ.

ಕೊರೊನಾ ವೈರಸ್​, ನಕಲಿ ಬಿಲ್​ಗಳು ಸೇರಿದಂತೆ ಅನೇಕ ಕಾರಣಗಳಿಂದ ಜಿಎಸ್​ಟಿ ಸಂಗ್ರಹದಲ್ಲಿ ಕುಸಿತ ಕಂಡಿತ್ತು. ಆದರೆ, ಜಿಎಸ್​ಟಿ ಪ್ರಕ್ರಿಯೆಲ್ಲಿ ಸರ್ಕಾರ ಸಾಕಷ್ಟು ಬದಲಾವಣೆ ತಂದಿತ್ತು. ಹೀಗಾಗಿ, ಜಿಎಸ್​ಟಿ ಸಂಗ್ರಹದಲ್ಲಿ ಏರಿಕೆ ಕಂಡಿದೆ ಹಣಕಾಸು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.

2017ರ ಜುಲೈನಲ್ಲಿ ಜಿಎಸ್​ಟಿ ಜಾರಿಗೆ ಬಂದಿತ್ತು. ಜನವರಿ​ 2021ರಲ್ಲಿ ಜಿಎಸ್​ಟಿ ಸಂಗ್ರಹಣೆ ಅತ್ಯಂತ ಹೆಚ್ಚಿನ ಸಂಗ್ರಹಣೆ ಆಗಿತ್ತು. ಡಿಸೆಂಬರ್​ನಲ್ಲಿ 1.15 ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು. ಇದು ಇತಿಹಾಸದಲ್ಲೇ ಅತ್ಯಧಿಕ ಜಿಎಸ್​ಟಿ ಕಲೆಕ್ಷನ್​ ಆಗಿದೆ. ಕಳೆದ ಏಪ್ರಿಲ್​ನಲ್ಲಿ ಕೇವಲ 32 ಸಾವಿರ ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು.

ಇದನ್ನೂ ಓದಿ: GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು