AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!

ಕಳೆದ ಮೂರು ತಿಂಗಳಿಂದ ಜಿಎಸ್​ಟಿ ಸಂಗ್ರಹಣೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಅಕ್ಟೋಬರ್​, ನವೆಂಬರ್​ ಹಾಗೂ ಡಿಸೆಂಬರ್​ ತಿಂಗಳಲ್ಲಿ ಜಿಎಸ್​ಟಿ ಸಂಗ್ರಹಣೆ 1 ಲಕ್ಷ ಕೋಟಿಯ ಗಡಿ ದಾಟಿದೆ ಎಂದು ಹಣಕಾಸು ಸಚಿವಾಲಯ ಖುಷಿ ವ್ಯಕ್ತಪಡಿಸಿದೆ.

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 01, 2021 | 4:57 PM

Share

ನವದೆಹಲಿ: ಡಿಸೆಂಬರ್​ ತಿಂಗಳ ಜಿಎಸ್​ಟಿ ಸಂಗ್ರಹಣೆ 1.15 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂಬುದರ ಸಂಕೇತ ಇದು ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಕಳೆದ ಮೂರು ತಿಂಗಳಿಂದ ಜಿಎಸ್​ಟಿ ಸಂಗ್ರಹಣೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಅಕ್ಟೋಬರ್​, ನವೆಂಬರ್​ ಹಾಗೂ ಡಿಸೆಂಬರ್​ ತಿಂಗಳಲ್ಲಿ ಜಿಎಸ್​ಟಿ ಸಂಗ್ರಹಣೆ 1 ಲಕ್ಷ ಕೋಟಿ ರೂ. ಗಡಿ ದಾಟಿದೆ ಎಂದು ಹಣಕಾಸು ಸಚಿವಾಲಯ ಖುಷಿ ವ್ಯಕ್ತಪಡಿಸಿದೆ.

2020ರ ಡಿಸೆಂಬರ್​ನಲ್ಲಿ ಒಟ್ಟು 1,15,174 ಕೋಟಿ ಜಿಎಸ್​ಟಿ ಸಂಗ್ರಹವಾಗಿದೆ. ನವೆಂಬರ್​ನಲ್ಲಿ ಇದರ ಪ್ರಮಾಣ 1.04 ಲಕ್ಷ ಕೋಟಿ ಇತ್ತು. ನವೆಂಬರ್​ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.12 ​ ಏರಿಕೆ ಕಂಡಂತೆ ಆಗಿದೆ ಎಂದು ಸರ್ಕಾರ ತಿಳಿಸಿದೆ.

ಕಳೆದ 21 ತಿಂಗಳುಗಳಿಂದ ಮಾಸಿಕ ಆದಾಯದಲ್ಲಿ ಇದು ಅತ್ಯಧಿಕ ಸಂಗ್ರಹಣೆ ಆಗಿದೆ. ಕೊರೊನಾ ವೈರಸ್​, ನಕಲಿ ಬಿಲ್​ಗಳು ಸೇರಿದಂತೆ ಅನೇಕ ಕಾರಣಗಳಿಂದ ಜಿಎಸ್​ಟಿ ಸಂಗ್ರಹದಲ್ಲಿ ಕುಸಿತ ಕಂಡಿತ್ತು. ಜಿಎಸ್​ಟಿ ಪ್ರಕ್ರಿಯೆಲ್ಲಿ ನಾವು ಸಾಕಷ್ಟು ಬದಲಾವಣೆ ಮಾಡಿದ್ದೇವೆ ಎಂದು ಹಣಕಾಸು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.

2017ರ ಜುಲೈನಲ್ಲಿ ಜಿಎಸ್​ಟಿ ಜಾರಿಗೆ ಬಂದಿತ್ತು. ಡಿಸೆಂಬರ್​ 2020ರ ಜಿಎಸ್​ಟಿ ಸಂಗ್ರಹಣೆ ಅತ್ಯಂತ ಹೆಚ್ಚಿನ ಸಂಗ್ರಹಣೆ ಆಗಿದೆ. 2019ರ ಏಪ್ರಿಲ್​ನಲ್ಲಿ 1,13,866 ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು. ಇದು ಇತಿಹಾಸದಲ್ಲೇ ಅತ್ಯಧಿಕ ಜಿಎಸ್​ಟಿ ಕಲೆಕ್ಷನ್​ ಆಗಿದೆ. ಕಳೆದ ಏಪ್ರಿಲ್​ನಲ್ಲಿ ಕೇವಲ 32 ಸಾವಿರ ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ