Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!

ಕಳೆದ ಮೂರು ತಿಂಗಳಿಂದ ಜಿಎಸ್​ಟಿ ಸಂಗ್ರಹಣೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಅಕ್ಟೋಬರ್​, ನವೆಂಬರ್​ ಹಾಗೂ ಡಿಸೆಂಬರ್​ ತಿಂಗಳಲ್ಲಿ ಜಿಎಸ್​ಟಿ ಸಂಗ್ರಹಣೆ 1 ಲಕ್ಷ ಕೋಟಿಯ ಗಡಿ ದಾಟಿದೆ ಎಂದು ಹಣಕಾಸು ಸಚಿವಾಲಯ ಖುಷಿ ವ್ಯಕ್ತಪಡಿಸಿದೆ.

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Jan 01, 2021 | 4:57 PM

ನವದೆಹಲಿ: ಡಿಸೆಂಬರ್​ ತಿಂಗಳ ಜಿಎಸ್​ಟಿ ಸಂಗ್ರಹಣೆ 1.15 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂಬುದರ ಸಂಕೇತ ಇದು ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಕಳೆದ ಮೂರು ತಿಂಗಳಿಂದ ಜಿಎಸ್​ಟಿ ಸಂಗ್ರಹಣೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಅಕ್ಟೋಬರ್​, ನವೆಂಬರ್​ ಹಾಗೂ ಡಿಸೆಂಬರ್​ ತಿಂಗಳಲ್ಲಿ ಜಿಎಸ್​ಟಿ ಸಂಗ್ರಹಣೆ 1 ಲಕ್ಷ ಕೋಟಿ ರೂ. ಗಡಿ ದಾಟಿದೆ ಎಂದು ಹಣಕಾಸು ಸಚಿವಾಲಯ ಖುಷಿ ವ್ಯಕ್ತಪಡಿಸಿದೆ.

2020ರ ಡಿಸೆಂಬರ್​ನಲ್ಲಿ ಒಟ್ಟು 1,15,174 ಕೋಟಿ ಜಿಎಸ್​ಟಿ ಸಂಗ್ರಹವಾಗಿದೆ. ನವೆಂಬರ್​ನಲ್ಲಿ ಇದರ ಪ್ರಮಾಣ 1.04 ಲಕ್ಷ ಕೋಟಿ ಇತ್ತು. ನವೆಂಬರ್​ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.12 ​ ಏರಿಕೆ ಕಂಡಂತೆ ಆಗಿದೆ ಎಂದು ಸರ್ಕಾರ ತಿಳಿಸಿದೆ.

ಕಳೆದ 21 ತಿಂಗಳುಗಳಿಂದ ಮಾಸಿಕ ಆದಾಯದಲ್ಲಿ ಇದು ಅತ್ಯಧಿಕ ಸಂಗ್ರಹಣೆ ಆಗಿದೆ. ಕೊರೊನಾ ವೈರಸ್​, ನಕಲಿ ಬಿಲ್​ಗಳು ಸೇರಿದಂತೆ ಅನೇಕ ಕಾರಣಗಳಿಂದ ಜಿಎಸ್​ಟಿ ಸಂಗ್ರಹದಲ್ಲಿ ಕುಸಿತ ಕಂಡಿತ್ತು. ಜಿಎಸ್​ಟಿ ಪ್ರಕ್ರಿಯೆಲ್ಲಿ ನಾವು ಸಾಕಷ್ಟು ಬದಲಾವಣೆ ಮಾಡಿದ್ದೇವೆ ಎಂದು ಹಣಕಾಸು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.

2017ರ ಜುಲೈನಲ್ಲಿ ಜಿಎಸ್​ಟಿ ಜಾರಿಗೆ ಬಂದಿತ್ತು. ಡಿಸೆಂಬರ್​ 2020ರ ಜಿಎಸ್​ಟಿ ಸಂಗ್ರಹಣೆ ಅತ್ಯಂತ ಹೆಚ್ಚಿನ ಸಂಗ್ರಹಣೆ ಆಗಿದೆ. 2019ರ ಏಪ್ರಿಲ್​ನಲ್ಲಿ 1,13,866 ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು. ಇದು ಇತಿಹಾಸದಲ್ಲೇ ಅತ್ಯಧಿಕ ಜಿಎಸ್​ಟಿ ಕಲೆಕ್ಷನ್​ ಆಗಿದೆ. ಕಳೆದ ಏಪ್ರಿಲ್​ನಲ್ಲಿ ಕೇವಲ 32 ಸಾವಿರ ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ

ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ