AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!

ಕಳೆದ ಮೂರು ತಿಂಗಳಿಂದ ಜಿಎಸ್​ಟಿ ಸಂಗ್ರಹಣೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಅಕ್ಟೋಬರ್​, ನವೆಂಬರ್​ ಹಾಗೂ ಡಿಸೆಂಬರ್​ ತಿಂಗಳಲ್ಲಿ ಜಿಎಸ್​ಟಿ ಸಂಗ್ರಹಣೆ 1 ಲಕ್ಷ ಕೋಟಿಯ ಗಡಿ ದಾಟಿದೆ ಎಂದು ಹಣಕಾಸು ಸಚಿವಾಲಯ ಖುಷಿ ವ್ಯಕ್ತಪಡಿಸಿದೆ.

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 01, 2021 | 4:57 PM

Share

ನವದೆಹಲಿ: ಡಿಸೆಂಬರ್​ ತಿಂಗಳ ಜಿಎಸ್​ಟಿ ಸಂಗ್ರಹಣೆ 1.15 ಲಕ್ಷ ಕೋಟಿ ರೂಪಾಯಿ ಆಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂಬುದರ ಸಂಕೇತ ಇದು ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಕಳೆದ ಮೂರು ತಿಂಗಳಿಂದ ಜಿಎಸ್​ಟಿ ಸಂಗ್ರಹಣೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಅಕ್ಟೋಬರ್​, ನವೆಂಬರ್​ ಹಾಗೂ ಡಿಸೆಂಬರ್​ ತಿಂಗಳಲ್ಲಿ ಜಿಎಸ್​ಟಿ ಸಂಗ್ರಹಣೆ 1 ಲಕ್ಷ ಕೋಟಿ ರೂ. ಗಡಿ ದಾಟಿದೆ ಎಂದು ಹಣಕಾಸು ಸಚಿವಾಲಯ ಖುಷಿ ವ್ಯಕ್ತಪಡಿಸಿದೆ.

2020ರ ಡಿಸೆಂಬರ್​ನಲ್ಲಿ ಒಟ್ಟು 1,15,174 ಕೋಟಿ ಜಿಎಸ್​ಟಿ ಸಂಗ್ರಹವಾಗಿದೆ. ನವೆಂಬರ್​ನಲ್ಲಿ ಇದರ ಪ್ರಮಾಣ 1.04 ಲಕ್ಷ ಕೋಟಿ ಇತ್ತು. ನವೆಂಬರ್​ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.12 ​ ಏರಿಕೆ ಕಂಡಂತೆ ಆಗಿದೆ ಎಂದು ಸರ್ಕಾರ ತಿಳಿಸಿದೆ.

ಕಳೆದ 21 ತಿಂಗಳುಗಳಿಂದ ಮಾಸಿಕ ಆದಾಯದಲ್ಲಿ ಇದು ಅತ್ಯಧಿಕ ಸಂಗ್ರಹಣೆ ಆಗಿದೆ. ಕೊರೊನಾ ವೈರಸ್​, ನಕಲಿ ಬಿಲ್​ಗಳು ಸೇರಿದಂತೆ ಅನೇಕ ಕಾರಣಗಳಿಂದ ಜಿಎಸ್​ಟಿ ಸಂಗ್ರಹದಲ್ಲಿ ಕುಸಿತ ಕಂಡಿತ್ತು. ಜಿಎಸ್​ಟಿ ಪ್ರಕ್ರಿಯೆಲ್ಲಿ ನಾವು ಸಾಕಷ್ಟು ಬದಲಾವಣೆ ಮಾಡಿದ್ದೇವೆ ಎಂದು ಹಣಕಾಸು ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ.

2017ರ ಜುಲೈನಲ್ಲಿ ಜಿಎಸ್​ಟಿ ಜಾರಿಗೆ ಬಂದಿತ್ತು. ಡಿಸೆಂಬರ್​ 2020ರ ಜಿಎಸ್​ಟಿ ಸಂಗ್ರಹಣೆ ಅತ್ಯಂತ ಹೆಚ್ಚಿನ ಸಂಗ್ರಹಣೆ ಆಗಿದೆ. 2019ರ ಏಪ್ರಿಲ್​ನಲ್ಲಿ 1,13,866 ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು. ಇದು ಇತಿಹಾಸದಲ್ಲೇ ಅತ್ಯಧಿಕ ಜಿಎಸ್​ಟಿ ಕಲೆಕ್ಷನ್​ ಆಗಿದೆ. ಕಳೆದ ಏಪ್ರಿಲ್​ನಲ್ಲಿ ಕೇವಲ 32 ಸಾವಿರ ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು