ಚುನಾವಣೆ ವೇಳೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ತಪ್ಪು: JDS ಶಾಸಕ ಜಿ.ಟಿ. ದೇವೇಗೌಡ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಹಿನ್ನೆಲೆಯಲ್ಲಿ  ಬೆಂಗಳೂರಿನಲ್ಲಿಂದು JDS ಶಾಸಕ ಜಿ.ಟಿ. ದೇವೇಗೌಡ ಅವರು ಡಿಕೆ ಶಿವಕುಮಾರ್ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಜಿ.ಟಿ. ದೇವೇಗೌಡ, ಚುನಾವಣೆಯ ಸಂದರ್ಭದಲ್ಲಿ ದಾಳಿಗಳು ಆಗಬಾರದು. ಸಿಬಿಐ ದಾಳಿ ಮಾಡಿದ್ದು ತಪ್ಪು, ಇದು ನನ್ನ ಅಭಿಪ್ರಾಯ ಎಂದು ಹೇಳಿದರು. ರೈಡ್ ಆದ ಸಂದರ್ಭದಲ್ಲಿ ಅವರಿಗೆ ಮೀಟ್ ಮಾಡಬೇಕು. ಏಕೆಂದರೆ ಅವರು ನನ್ನ ಸ್ನೇಹಿತ. ನಾನು ಮತ್ತು ಡಿಕೆಶಿ ಬಹಳ ವರ್ಷಗಳಿಂದ […]

ಚುನಾವಣೆ ವೇಳೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಾಡಿದ್ದು ತಪ್ಪು: JDS ಶಾಸಕ ಜಿ.ಟಿ. ದೇವೇಗೌಡ
ಸಾಧು ಶ್ರೀನಾಥ್​

Updated on: Oct 07, 2020 | 12:10 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಹಿನ್ನೆಲೆಯಲ್ಲಿ  ಬೆಂಗಳೂರಿನಲ್ಲಿಂದು JDS ಶಾಸಕ ಜಿ.ಟಿ. ದೇವೇಗೌಡ ಅವರು ಡಿಕೆ ಶಿವಕುಮಾರ್ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದರು.

ಬಳಿಕ ಮಾತನಾಡಿದ ಜಿ.ಟಿ. ದೇವೇಗೌಡ, ಚುನಾವಣೆಯ ಸಂದರ್ಭದಲ್ಲಿ ದಾಳಿಗಳು ಆಗಬಾರದು. ಸಿಬಿಐ ದಾಳಿ ಮಾಡಿದ್ದು ತಪ್ಪು, ಇದು ನನ್ನ ಅಭಿಪ್ರಾಯ ಎಂದು ಹೇಳಿದರು.

ರೈಡ್ ಆದ ಸಂದರ್ಭದಲ್ಲಿ ಅವರಿಗೆ ಮೀಟ್ ಮಾಡಬೇಕು. ಏಕೆಂದರೆ ಅವರು ನನ್ನ ಸ್ನೇಹಿತ. ನಾನು ಮತ್ತು ಡಿಕೆಶಿ ಬಹಳ ವರ್ಷಗಳಿಂದ ಸ್ನೇಹಿತರು. ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸಿದ್ದವರು. ಬಾಂಬೆಗೆ ಸಹ ಹೋಗಿದ್ವಿ. ಡಿಕೆಶಿ ಅವರ ಶ್ರೀಮತಿ ನಮ್ಮ ಮೈಸೂರಿನವರು ಎಂದು  ಜಿ.ಟಿ.ಡಿ. ಹೇಳಿದರು.

ನಾನು ನೋವಿನಲ್ಲಿದ್ದೇನೆಂದು ನನ್ನ ಹಿತೈಷಿಗಳಾದ ಜಿ.ಟಿ.ದೇವೇಗೌಡರು ನನ್ನನ್ನು ಭೇಟಿಯಾಗಿದ್ದಾರೆ. ರಾಜಕಾರಣವೇ ಬೇರೆ. ಸ್ನೇಹ, ವಿಶ್ವಾಸವೇ ಬೇರೆ. ನನಗೆ ಸಾಂತ್ವನ ಹೇಳಲು ಬಂದಿದ್ದರು ಎಂದು ಜಿ.ಟಿ. ದೇವೇಗೌಡರ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us