AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರ ಅಂತ್ಯಕ್ರಿಯೆ ಹೀಗೆ ನಡೆಯಬೇಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗ್ತಿದೆ. ಈ ಮಧ್ಯೆ ಆರೋಗ್ಯಾಧಿಕಾರಿಗಳಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಅದುವೇ ಸೋಂಕಿತರ ಮೃತದೇಹದ ಅಂತ್ಯಕ್ರಿಯೆ. ಈಗಾಗಲೇ ಬಳ್ಳಾರಿಯಲ್ಲಿ ಸೋಂಕಿತರ ಮೃತದೇಹವನ್ನು ಗುಂಡಿಗೆ ಎಸೆದ ದೃಶ್ಯಗಳನ್ನು ರಾಜ್ಯದ ಜನರು ಸ್ವತಃ ವೀಕ್ಷಿಸಿದ್ದಾರೆ. ಜೊತೆಗೆ ಬೆಂಗಳೂರಿನ ಹೃದಯ ಭಾಗದ ಜೆ.ಸಿ.ನಗರದ ಸ್ಮಶಾನದಲ್ಲಿ ಇತ್ತೀಚೆಗೆ ನಡೆದ ಮೃತ ಸೋಂಕಿತನ ಅಂತ್ಯಕ್ರಿಯೆಯ ವೇಳೆ ಸಿಬ್ಬಂದಿ ಧರಿಸಿದ್ದ PPE ಕಿಟ್​ಗಳನ್ನು ಅಲ್ಲೇ ಬಿಸಾಡಿದ್ದನ್ನು ಸಹ ಕಂಡಿದ್ದೇವೆ. ಹಾಗಾಗಿ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ. […]

ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರ ಅಂತ್ಯಕ್ರಿಯೆ ಹೀಗೆ ನಡೆಯಬೇಕು
KUSHAL V
| Edited By: |

Updated on:Jul 01, 2020 | 12:28 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗ್ತಿದೆ. ಈ ಮಧ್ಯೆ ಆರೋಗ್ಯಾಧಿಕಾರಿಗಳಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಅದುವೇ ಸೋಂಕಿತರ ಮೃತದೇಹದ ಅಂತ್ಯಕ್ರಿಯೆ.

ಈಗಾಗಲೇ ಬಳ್ಳಾರಿಯಲ್ಲಿ ಸೋಂಕಿತರ ಮೃತದೇಹವನ್ನು ಗುಂಡಿಗೆ ಎಸೆದ ದೃಶ್ಯಗಳನ್ನು ರಾಜ್ಯದ ಜನರು ಸ್ವತಃ ವೀಕ್ಷಿಸಿದ್ದಾರೆ. ಜೊತೆಗೆ ಬೆಂಗಳೂರಿನ ಹೃದಯ ಭಾಗದ ಜೆ.ಸಿ.ನಗರದ ಸ್ಮಶಾನದಲ್ಲಿ ಇತ್ತೀಚೆಗೆ ನಡೆದ ಮೃತ ಸೋಂಕಿತನ ಅಂತ್ಯಕ್ರಿಯೆಯ ವೇಳೆ ಸಿಬ್ಬಂದಿ ಧರಿಸಿದ್ದ PPE ಕಿಟ್​ಗಳನ್ನು ಅಲ್ಲೇ ಬಿಸಾಡಿದ್ದನ್ನು ಸಹ ಕಂಡಿದ್ದೇವೆ.

ಹಾಗಾಗಿ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ. ಇದಕ್ಕಾಗಿಯೇ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ನಡೆಸಲು ನಗರದ ಹೊರವಲಯದಲ್ಲಿ 2 ಎಕರೆ ಜಾಗವನ್ನ ಮೀಸಲಿಡುತ್ತೇವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟಿವಿ9ಗೆ ಹೇಳಿರುವುದು ಸಮಾಧಾನಕರ. ಇದಲ್ಲದೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕಿತರ ಅಂತ್ಯಸಂಸ್ಕಾರ ನಡೆಸಲು ಇರುವ ಮಾರ್ಗಸೂಚಿಯನ್ನು ಬಿಬಿಎಂಪಿ ಸಿಬ್ಬಂದಿ ಟಿವಿ9 ಜೊತೆ ಹಂಚಿಕೊಂಡಿದೆ. ಅವುಗಳು ಹೀಗಿದೆ.

ಸೋಂಕಿತರ ಅಂತ್ಯಕ್ರಿಯೆ ವಿಧಾನದ ಮಾರ್ಗಸೂಚಿ 1. 12 ಅಡಿ ಆಳ, 3 ಅಡಿ ಅಗಲ ಹಾಗೂ 6 ಅಡಿ ಉದ್ದದ ಗುಂಡಿಯನ್ನು ತೋಡಬೇಕು 2. ಅದಕ್ಕೆ ಮೊದಲು ಎರಡು ಅಡಿಯವೆರೆಗೂ ಬ್ಲೀಚಿಂಗ್ ಪೌಡರ್ ಹಾಕಬೇಕು 3. ಬಳಿಕ ಸೋಂಕಿತರ ಮೃತದೇಹವನ್ನ ಗುಂಡಿಯೊಳಕ್ಕೆ ಇರಿಸಬೇಕು 4. ನಂತರ ಮೃತದೇಹದ ಮೇಲೆ 2 ಅಡಿ ಮಣ್ಣು ಹಾಕಬೇಕು 5. ಅದಾದ ಮೇಲೆ ಮಣ್ಣಿನ ಮೇಲೆ 2 ಅಡಿ ಬ್ಲೀಚಿಂಗ್ ಪೌಡರ್ ಹಾಕಬೇಕು 6.ಕೊನೆಯಲ್ಲಿ ಗುಂಡಿಯನ್ನು ಮಣ್ಣಿನಿಂದ ಸಂಪೂರ್ಣವಾಗಿ ಸಮತಟ್ಟಾಗಿ ಮುಚ್ಚಬೇಕು 7.ಜೊತೆಗೆ ಬಹಳ ಮುಖ್ಯವಾಗಿ PPE ಕಿಟ್​ಗಳನ್ನ ಪೆಟ್ರೋಲ್ ಸುರಿದು ಅಲ್ಲಿಯೇ ಸುಡಬೇಕು 8. ನಂತರ ಇಡೀ ಸ್ಥಳಕ್ಕೆ ಕೆಮಿಕಲ್ ಸ್ಪ್ರೇ ಹಾಗೂ ಬ್ಲೀಚಿಂಗ್ ಪೌಡರ್ ಸಿಂಪಡಿಸಬೇಕು 9.ಅಂತ್ಯಕ್ರಿಯೆ ಕಾರ್ಯವನ್ನ ಸಂಪೂರ್ಣವಾಗಿ ವಿಡಿಯೋ ಕಾಲ್ ಮೂಲಕ ಸ್ಥಳೀಯ ವೈದ್ಯಕೀಯ ಅಧಿಕಾರಿ ವೀಕ್ಷಿಸಿ OK ಮಾಡಬೇಕು

ಇದರ ಜೊತೆ ಮುಖ್ಯವಾಗಿ ಯಾವುದೇ ಕಾರಣಕ್ಕೂ ಪಿಪಿಇ ಕಿಟ್​ಗಳನ್ನ ಬಿಸಾಡುವಂತಿಲ್ಲ ಎಂದು ಕಟ್ಟುನಿಟ್ಟಾದ ನಿರ್ದೇಶನವನ್ನು ಸಹ ನೀಡಿದೆ.

Published On - 12:11 pm, Wed, 1 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್