AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರ ಅಂತ್ಯಕ್ರಿಯೆ ಹೀಗೆ ನಡೆಯಬೇಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗ್ತಿದೆ. ಈ ಮಧ್ಯೆ ಆರೋಗ್ಯಾಧಿಕಾರಿಗಳಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಅದುವೇ ಸೋಂಕಿತರ ಮೃತದೇಹದ ಅಂತ್ಯಕ್ರಿಯೆ. ಈಗಾಗಲೇ ಬಳ್ಳಾರಿಯಲ್ಲಿ ಸೋಂಕಿತರ ಮೃತದೇಹವನ್ನು ಗುಂಡಿಗೆ ಎಸೆದ ದೃಶ್ಯಗಳನ್ನು ರಾಜ್ಯದ ಜನರು ಸ್ವತಃ ವೀಕ್ಷಿಸಿದ್ದಾರೆ. ಜೊತೆಗೆ ಬೆಂಗಳೂರಿನ ಹೃದಯ ಭಾಗದ ಜೆ.ಸಿ.ನಗರದ ಸ್ಮಶಾನದಲ್ಲಿ ಇತ್ತೀಚೆಗೆ ನಡೆದ ಮೃತ ಸೋಂಕಿತನ ಅಂತ್ಯಕ್ರಿಯೆಯ ವೇಳೆ ಸಿಬ್ಬಂದಿ ಧರಿಸಿದ್ದ PPE ಕಿಟ್​ಗಳನ್ನು ಅಲ್ಲೇ ಬಿಸಾಡಿದ್ದನ್ನು ಸಹ ಕಂಡಿದ್ದೇವೆ. ಹಾಗಾಗಿ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ. […]

ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರ ಅಂತ್ಯಕ್ರಿಯೆ ಹೀಗೆ ನಡೆಯಬೇಕು
KUSHAL V
| Edited By: |

Updated on:Jul 01, 2020 | 12:28 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗ್ತಿದೆ. ಈ ಮಧ್ಯೆ ಆರೋಗ್ಯಾಧಿಕಾರಿಗಳಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಅದುವೇ ಸೋಂಕಿತರ ಮೃತದೇಹದ ಅಂತ್ಯಕ್ರಿಯೆ.

ಈಗಾಗಲೇ ಬಳ್ಳಾರಿಯಲ್ಲಿ ಸೋಂಕಿತರ ಮೃತದೇಹವನ್ನು ಗುಂಡಿಗೆ ಎಸೆದ ದೃಶ್ಯಗಳನ್ನು ರಾಜ್ಯದ ಜನರು ಸ್ವತಃ ವೀಕ್ಷಿಸಿದ್ದಾರೆ. ಜೊತೆಗೆ ಬೆಂಗಳೂರಿನ ಹೃದಯ ಭಾಗದ ಜೆ.ಸಿ.ನಗರದ ಸ್ಮಶಾನದಲ್ಲಿ ಇತ್ತೀಚೆಗೆ ನಡೆದ ಮೃತ ಸೋಂಕಿತನ ಅಂತ್ಯಕ್ರಿಯೆಯ ವೇಳೆ ಸಿಬ್ಬಂದಿ ಧರಿಸಿದ್ದ PPE ಕಿಟ್​ಗಳನ್ನು ಅಲ್ಲೇ ಬಿಸಾಡಿದ್ದನ್ನು ಸಹ ಕಂಡಿದ್ದೇವೆ.

ಹಾಗಾಗಿ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ. ಇದಕ್ಕಾಗಿಯೇ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ನಡೆಸಲು ನಗರದ ಹೊರವಲಯದಲ್ಲಿ 2 ಎಕರೆ ಜಾಗವನ್ನ ಮೀಸಲಿಡುತ್ತೇವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟಿವಿ9ಗೆ ಹೇಳಿರುವುದು ಸಮಾಧಾನಕರ. ಇದಲ್ಲದೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕಿತರ ಅಂತ್ಯಸಂಸ್ಕಾರ ನಡೆಸಲು ಇರುವ ಮಾರ್ಗಸೂಚಿಯನ್ನು ಬಿಬಿಎಂಪಿ ಸಿಬ್ಬಂದಿ ಟಿವಿ9 ಜೊತೆ ಹಂಚಿಕೊಂಡಿದೆ. ಅವುಗಳು ಹೀಗಿದೆ.

ಸೋಂಕಿತರ ಅಂತ್ಯಕ್ರಿಯೆ ವಿಧಾನದ ಮಾರ್ಗಸೂಚಿ 1. 12 ಅಡಿ ಆಳ, 3 ಅಡಿ ಅಗಲ ಹಾಗೂ 6 ಅಡಿ ಉದ್ದದ ಗುಂಡಿಯನ್ನು ತೋಡಬೇಕು 2. ಅದಕ್ಕೆ ಮೊದಲು ಎರಡು ಅಡಿಯವೆರೆಗೂ ಬ್ಲೀಚಿಂಗ್ ಪೌಡರ್ ಹಾಕಬೇಕು 3. ಬಳಿಕ ಸೋಂಕಿತರ ಮೃತದೇಹವನ್ನ ಗುಂಡಿಯೊಳಕ್ಕೆ ಇರಿಸಬೇಕು 4. ನಂತರ ಮೃತದೇಹದ ಮೇಲೆ 2 ಅಡಿ ಮಣ್ಣು ಹಾಕಬೇಕು 5. ಅದಾದ ಮೇಲೆ ಮಣ್ಣಿನ ಮೇಲೆ 2 ಅಡಿ ಬ್ಲೀಚಿಂಗ್ ಪೌಡರ್ ಹಾಕಬೇಕು 6.ಕೊನೆಯಲ್ಲಿ ಗುಂಡಿಯನ್ನು ಮಣ್ಣಿನಿಂದ ಸಂಪೂರ್ಣವಾಗಿ ಸಮತಟ್ಟಾಗಿ ಮುಚ್ಚಬೇಕು 7.ಜೊತೆಗೆ ಬಹಳ ಮುಖ್ಯವಾಗಿ PPE ಕಿಟ್​ಗಳನ್ನ ಪೆಟ್ರೋಲ್ ಸುರಿದು ಅಲ್ಲಿಯೇ ಸುಡಬೇಕು 8. ನಂತರ ಇಡೀ ಸ್ಥಳಕ್ಕೆ ಕೆಮಿಕಲ್ ಸ್ಪ್ರೇ ಹಾಗೂ ಬ್ಲೀಚಿಂಗ್ ಪೌಡರ್ ಸಿಂಪಡಿಸಬೇಕು 9.ಅಂತ್ಯಕ್ರಿಯೆ ಕಾರ್ಯವನ್ನ ಸಂಪೂರ್ಣವಾಗಿ ವಿಡಿಯೋ ಕಾಲ್ ಮೂಲಕ ಸ್ಥಳೀಯ ವೈದ್ಯಕೀಯ ಅಧಿಕಾರಿ ವೀಕ್ಷಿಸಿ OK ಮಾಡಬೇಕು

ಇದರ ಜೊತೆ ಮುಖ್ಯವಾಗಿ ಯಾವುದೇ ಕಾರಣಕ್ಕೂ ಪಿಪಿಇ ಕಿಟ್​ಗಳನ್ನ ಬಿಸಾಡುವಂತಿಲ್ಲ ಎಂದು ಕಟ್ಟುನಿಟ್ಟಾದ ನಿರ್ದೇಶನವನ್ನು ಸಹ ನೀಡಿದೆ.

Published On - 12:11 pm, Wed, 1 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ