AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರ ಅಂತ್ಯಕ್ರಿಯೆ ಹೀಗೆ ನಡೆಯಬೇಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗ್ತಿದೆ. ಈ ಮಧ್ಯೆ ಆರೋಗ್ಯಾಧಿಕಾರಿಗಳಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಅದುವೇ ಸೋಂಕಿತರ ಮೃತದೇಹದ ಅಂತ್ಯಕ್ರಿಯೆ. ಈಗಾಗಲೇ ಬಳ್ಳಾರಿಯಲ್ಲಿ ಸೋಂಕಿತರ ಮೃತದೇಹವನ್ನು ಗುಂಡಿಗೆ ಎಸೆದ ದೃಶ್ಯಗಳನ್ನು ರಾಜ್ಯದ ಜನರು ಸ್ವತಃ ವೀಕ್ಷಿಸಿದ್ದಾರೆ. ಜೊತೆಗೆ ಬೆಂಗಳೂರಿನ ಹೃದಯ ಭಾಗದ ಜೆ.ಸಿ.ನಗರದ ಸ್ಮಶಾನದಲ್ಲಿ ಇತ್ತೀಚೆಗೆ ನಡೆದ ಮೃತ ಸೋಂಕಿತನ ಅಂತ್ಯಕ್ರಿಯೆಯ ವೇಳೆ ಸಿಬ್ಬಂದಿ ಧರಿಸಿದ್ದ PPE ಕಿಟ್​ಗಳನ್ನು ಅಲ್ಲೇ ಬಿಸಾಡಿದ್ದನ್ನು ಸಹ ಕಂಡಿದ್ದೇವೆ. ಹಾಗಾಗಿ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ. […]

ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರ ಅಂತ್ಯಕ್ರಿಯೆ ಹೀಗೆ ನಡೆಯಬೇಕು
KUSHAL V
| Updated By: ಸಾಧು ಶ್ರೀನಾಥ್​|

Updated on:Jul 01, 2020 | 12:28 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗ್ತಿದೆ. ಈ ಮಧ್ಯೆ ಆರೋಗ್ಯಾಧಿಕಾರಿಗಳಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಅದುವೇ ಸೋಂಕಿತರ ಮೃತದೇಹದ ಅಂತ್ಯಕ್ರಿಯೆ.

ಈಗಾಗಲೇ ಬಳ್ಳಾರಿಯಲ್ಲಿ ಸೋಂಕಿತರ ಮೃತದೇಹವನ್ನು ಗುಂಡಿಗೆ ಎಸೆದ ದೃಶ್ಯಗಳನ್ನು ರಾಜ್ಯದ ಜನರು ಸ್ವತಃ ವೀಕ್ಷಿಸಿದ್ದಾರೆ. ಜೊತೆಗೆ ಬೆಂಗಳೂರಿನ ಹೃದಯ ಭಾಗದ ಜೆ.ಸಿ.ನಗರದ ಸ್ಮಶಾನದಲ್ಲಿ ಇತ್ತೀಚೆಗೆ ನಡೆದ ಮೃತ ಸೋಂಕಿತನ ಅಂತ್ಯಕ್ರಿಯೆಯ ವೇಳೆ ಸಿಬ್ಬಂದಿ ಧರಿಸಿದ್ದ PPE ಕಿಟ್​ಗಳನ್ನು ಅಲ್ಲೇ ಬಿಸಾಡಿದ್ದನ್ನು ಸಹ ಕಂಡಿದ್ದೇವೆ.

ಹಾಗಾಗಿ ನಗರದಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಂತಿಲ್ಲ. ಇದಕ್ಕಾಗಿಯೇ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ನಡೆಸಲು ನಗರದ ಹೊರವಲಯದಲ್ಲಿ 2 ಎಕರೆ ಜಾಗವನ್ನ ಮೀಸಲಿಡುತ್ತೇವೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟಿವಿ9ಗೆ ಹೇಳಿರುವುದು ಸಮಾಧಾನಕರ. ಇದಲ್ಲದೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಂಕಿತರ ಅಂತ್ಯಸಂಸ್ಕಾರ ನಡೆಸಲು ಇರುವ ಮಾರ್ಗಸೂಚಿಯನ್ನು ಬಿಬಿಎಂಪಿ ಸಿಬ್ಬಂದಿ ಟಿವಿ9 ಜೊತೆ ಹಂಚಿಕೊಂಡಿದೆ. ಅವುಗಳು ಹೀಗಿದೆ.

ಸೋಂಕಿತರ ಅಂತ್ಯಕ್ರಿಯೆ ವಿಧಾನದ ಮಾರ್ಗಸೂಚಿ 1. 12 ಅಡಿ ಆಳ, 3 ಅಡಿ ಅಗಲ ಹಾಗೂ 6 ಅಡಿ ಉದ್ದದ ಗುಂಡಿಯನ್ನು ತೋಡಬೇಕು 2. ಅದಕ್ಕೆ ಮೊದಲು ಎರಡು ಅಡಿಯವೆರೆಗೂ ಬ್ಲೀಚಿಂಗ್ ಪೌಡರ್ ಹಾಕಬೇಕು 3. ಬಳಿಕ ಸೋಂಕಿತರ ಮೃತದೇಹವನ್ನ ಗುಂಡಿಯೊಳಕ್ಕೆ ಇರಿಸಬೇಕು 4. ನಂತರ ಮೃತದೇಹದ ಮೇಲೆ 2 ಅಡಿ ಮಣ್ಣು ಹಾಕಬೇಕು 5. ಅದಾದ ಮೇಲೆ ಮಣ್ಣಿನ ಮೇಲೆ 2 ಅಡಿ ಬ್ಲೀಚಿಂಗ್ ಪೌಡರ್ ಹಾಕಬೇಕು 6.ಕೊನೆಯಲ್ಲಿ ಗುಂಡಿಯನ್ನು ಮಣ್ಣಿನಿಂದ ಸಂಪೂರ್ಣವಾಗಿ ಸಮತಟ್ಟಾಗಿ ಮುಚ್ಚಬೇಕು 7.ಜೊತೆಗೆ ಬಹಳ ಮುಖ್ಯವಾಗಿ PPE ಕಿಟ್​ಗಳನ್ನ ಪೆಟ್ರೋಲ್ ಸುರಿದು ಅಲ್ಲಿಯೇ ಸುಡಬೇಕು 8. ನಂತರ ಇಡೀ ಸ್ಥಳಕ್ಕೆ ಕೆಮಿಕಲ್ ಸ್ಪ್ರೇ ಹಾಗೂ ಬ್ಲೀಚಿಂಗ್ ಪೌಡರ್ ಸಿಂಪಡಿಸಬೇಕು 9.ಅಂತ್ಯಕ್ರಿಯೆ ಕಾರ್ಯವನ್ನ ಸಂಪೂರ್ಣವಾಗಿ ವಿಡಿಯೋ ಕಾಲ್ ಮೂಲಕ ಸ್ಥಳೀಯ ವೈದ್ಯಕೀಯ ಅಧಿಕಾರಿ ವೀಕ್ಷಿಸಿ OK ಮಾಡಬೇಕು

ಇದರ ಜೊತೆ ಮುಖ್ಯವಾಗಿ ಯಾವುದೇ ಕಾರಣಕ್ಕೂ ಪಿಪಿಇ ಕಿಟ್​ಗಳನ್ನ ಬಿಸಾಡುವಂತಿಲ್ಲ ಎಂದು ಕಟ್ಟುನಿಟ್ಟಾದ ನಿರ್ದೇಶನವನ್ನು ಸಹ ನೀಡಿದೆ.

Published On - 12:11 pm, Wed, 1 July 20

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?