ಬಾಗಲಕೋಟೆ: ಕೊರೊನಾ ಹಿನ್ನೆಲೆ ಬಾದಾಮಿಯ ಗುಳೇದಗುಡ್ಡ ಪಟ್ಟಣ ಬಂದ್

ಬಾಗಲಕೋಟೆ: ಬಾದಾಮಿ ಪಟ್ಟಣ ಹಾಗೂ ಢಾಣಕಶಿರೂರ ಗ್ರಾಮದಲ್ಲಿ ಒಂದೇ ದಿನ 13ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಗುಳೇದಗುಡ್ಡ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದೆ. ಪಟ್ಟಣ ಪ್ರವೇಶಿಸುವ ನಾಲ್ಕೂ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅನಗತ್ಯವಾಗಿ ಯಾರೂ ಪಟ್ಟಣದಲ್ಲಿ ಸಂಚರಿಸುವಂತಿಲ್ಲ. ಹೊರಗಿನಿಂದ ಬರುವ ಎಲ್ಲರಿಗೂ ಚೆಕ್​ಪೋಸ್ಟ್​ನಲ್ಲಿ ತಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪಟ್ಟಣದ ಬಾದಾಮಿ ನಾಕಾ, ಬಜಾರ ರಸ್ತೆ, ಶಕ್ತಿಚಿತ್ರಮಂದಿರ ರಸ್ತೆ, ಪವರ್ ಕ್ರಾಸ್, ಟಿಎಂಸಿ ರೋಡ್ […]

ಬಾಗಲಕೋಟೆ: ಕೊರೊನಾ ಹಿನ್ನೆಲೆ ಬಾದಾಮಿಯ ಗುಳೇದಗುಡ್ಡ ಪಟ್ಟಣ ಬಂದ್
ಸಾಧು ಶ್ರೀನಾಥ್​

Updated on: May 07, 2020 | 12:14 PM

ಬಾಗಲಕೋಟೆ: ಬಾದಾಮಿ ಪಟ್ಟಣ ಹಾಗೂ ಢಾಣಕಶಿರೂರ ಗ್ರಾಮದಲ್ಲಿ ಒಂದೇ ದಿನ 13ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಗುಳೇದಗುಡ್ಡ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದೆ.

ಪಟ್ಟಣ ಪ್ರವೇಶಿಸುವ ನಾಲ್ಕೂ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅನಗತ್ಯವಾಗಿ ಯಾರೂ ಪಟ್ಟಣದಲ್ಲಿ ಸಂಚರಿಸುವಂತಿಲ್ಲ. ಹೊರಗಿನಿಂದ ಬರುವ ಎಲ್ಲರಿಗೂ ಚೆಕ್​ಪೋಸ್ಟ್​ನಲ್ಲಿ ತಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪಟ್ಟಣದ ಬಾದಾಮಿ ನಾಕಾ, ಬಜಾರ ರಸ್ತೆ, ಶಕ್ತಿಚಿತ್ರಮಂದಿರ ರಸ್ತೆ, ಪವರ್ ಕ್ರಾಸ್, ಟಿಎಂಸಿ ರೋಡ್ ಸಂಚಾರ ಬಂದ್ ಮಾಡಲಾಗಿದೆ. ಪಟ್ಟಣದಲ್ಲಿ ಬೆಳಗ್ಗೆ 6 ರಿಂದ 9 ಗಂಟೆ ವರೆಗೂ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಈಗಾಗಲೇ ನಿಯಮ ಮೀರಿದ್ದ ಒಂದು ಕಿರಾಣಿ ಅಂಗಡಿಯನ್ನು ತಹಶೀಲ್ದಾರ್ ಸೀಜ್ ಮಾಡಿದ್ದಾರೆ. ಕೊರೊನಾ ವೈರಸ್ ಹರಡದಂತೆ ಎಲ್ಲಾ ಕಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us