AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah Donald Trump ವಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್: ಹೆಚ್.ವಿಶ್ವನಾಥ್ ವಾಗ್ದಾಳಿ

Siddaramaiah Donald Trump ಅಚಾನಕ್ ಆಗಿ ಸಿದ್ದರಾಮಯ್ಯರನ್ನು ಕಾಂಗ್ರೆಸ್​ಗೆ ಕರೆತಂದೆ ಎಂದು ಮಾತನಾಡಿದ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ಅದೃಷ್ಟದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ತಮ್ಮ ಸಮುದಾಯದ ಸ್ವಾಮೀಜಿ ಹೋರಾಟ ಸಹ ಸಹಿಸಲ್ಲ. ಇವರಿಗೆ ಸ್ವಾರ್ಥ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ಹೇಳಿದರು.

Siddaramaiah Donald Trump ವಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್: ಹೆಚ್.ವಿಶ್ವನಾಥ್ ವಾಗ್ದಾಳಿ
MLC ಹೆಚ್​.ವಿಶ್ವನಾಥ್​
sandhya thejappa
| Edited By: |

Updated on: Feb 12, 2021 | 11:53 AM

Share

ಮೈಸೂರು: ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಅವರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನೋಡಿದಾಗ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಪಡೆಯಬೇಕೆಂದು ಚಡಪಡಿಸುತ್ತಾರೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಾರೆ ಎಂದು ಎಂಎಲ್​ಸಿ ಹೆಚ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ (Donald Trump) ಇದ್ದಂತೆ. ಟ್ರಂಪಾಯಣದಂತೆ ಸಿದ್ದರಾಮಾಯಣ (Siddaramaiah) ನಡೆಯುತ್ತಿದೆ. ಸೋಲನ್ನು ಒಪ್ಪಿಕೊಳ್ಳುವುದಕ್ಕೆ ಸಿದ್ದರಾಮಯ್ಯ ಸಿದ್ಧರಿಲ್ಲ. ಅವರದು ಕಾಂಗ್ರೆಸ್ ಸಂಸ್ಕಾರ; ಸಂಸ್ಕೃತಿ ಇಲ್ಲದ ಮನುಷ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಚಾನಕ್ ಆಗಿ ಸಿದ್ದರಾಮಯ್ಯರನ್ನು ಕಾಂಗ್ರೆಸ್​ಗೆ ಕರೆತಂದೆ ಎಂದು ಮಾತನಾಡಿದ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ಅದೃಷ್ಟದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಅವರು ಯಾರ ಯಶಸ್ಸನ್ನೂ ಸಹಿಸುವುದಿಲ್ಲ. ಜೊತೆಗೆ ತಮ್ಮ ಸಮುದಾಯದ ಸ್ವಾಮೀಜಿ ಹೋರಾಟ ಸಹ ಸಹಿಸಲ್ಲ. ಇವರಿಗೆ ಸ್ವಾರ್ಥ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ಹೇಳಿದರು.

ನಾನು ಎನ್ನುವ ಸ್ವಾರ್ಥ ಸಿದ್ದರಾಮಯ್ಯಗೆ; ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಬಲರಾಗುತ್ತಿದ್ದಾರೆ ರಾಜ್ಯದಲ್ಲಿ ಯಾವ ಅಹಿಂದ ಹೋರಾಟವೂ ಇಲ್ಲ. ಸಿದ್ದರಾಮಯ್ಯ, ಮಹದೇವಪ್ಪರ ಸ್ವಾರ್ಥದ ಹೋರಾಟ. ಸ್ವಾರ್ಥಕ್ಕಾಗಿ ಹಿಂದ, ಅಹಿಂದ ಎಂದು ಚಡಪಡಿಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯಗೆ ಅಸ್ತಿತ್ವ ಮತ್ತು ಅಭದ್ರತೆ ಕಾಡುತ್ತಿದೆ. ಅವರಿಲ್ಲದೆ ಕುರುಬರ ಎಸ್​ಟಿ ಮೀಸಲಾತಿ ಹೋರಾಟ ಲಕ್ಷಾಂತರ ಜನರನ್ನು ಸೇರಿಸಿ ಯಶಸ್ಸು ಕಂಡಿದ್ದೇವೆ. ಸಿದ್ದರಾಮಯ್ಯಗೆ ನಾನು ಎನ್ನುವ ಸ್ವಾರ್ಥ ಇತ್ತು. ಆದರೆ ಈಗ ಸಮುದಾಯ ಅವರ ಜೊತೆ ಇಲ್ಲವೆಂದು ಅನಿಸುತ್ತಿದೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಬಲರಾಗುತ್ತಿದ್ದಾರೆ. ಪಕ್ಷ, ಸಮುದಾಯ ಎರಡರಲ್ಲೂ ಏಕಾಂಗಿಯಾಗುತ್ತಿದ್ದಾರೆ. ಹೀಗಾಗಿ ರಾಜಕೀಯ ಅಸ್ತಿತ್ವಕ್ಕೆ ಚಡಪಡಿಕೆ ಶುರುವಾಗಿದೆ ಎಂದು ಹೇಳಿದರು.

ನಾನು ಮತ್ತು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದವರು. ಸಿದ್ದರಾಮಯ್ಯ ಯಾವ ವಿದ್ಯಾರ್ಥಿ ಹೋರಾಟದಲ್ಲೂ ಇರಲಿಲ್ಲ. ತಮ್ಮ ಅಭದ್ರತೆ ಮುಚ್ಚಿಕೊಳ್ಳಲು ಅಹಿಂದ ಬಳಸುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಬಿಟ್ಟು ಹಿಂದ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ಅಲ್ಪಸಂಖ್ಯಾತರನ್ನು ತುಳಿದು ಹಾಕಿದ್ದಾರೆ. ಅಲ್ಲದೇ ಮುಸ್ಲಿಂರನ್ನು ಸಾಕಷ್ಟು ಬಾರಿ ಸೋಲಿಸಲು ಕಾರಣರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ | ಕುರುಬ ರ‍್ಯಾಲಿಗೆ ಬೆದರಿ ತಪ್ಪು ನಡೆ ಇಡಲು ಮುಂದಾಗಿದ್ದಾರಾ ಸಿದ್ದರಾಮಯ್ಯ?

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?