AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವನ್ಯಾವನ್ರಿ ಸಾ.ರಾ ಮಹೇಶ್?.. ಆ ಕೊಚ್ಚೆ ಗುಂಡಿಗೆ ಕಲ್ಲು ಎಸೆದು ನಾನು ಕೊಳಕು ಮಾಡಿಕೊಳ್ಳಲ್ಲ’

ಅವನ್ಯಾವೋನ್ರೀ ಸಾ.ರಾ. ಮಹೇಶ್. ಅವನ ಬಗ್ಗೆ ನಾನು ಏನೂ ಮಾತಾಡಲ್ಲ. ಆ ಕೊಚ್ಚೆ ಗುಂಡಿಗೆ ಕಲ್ಲು ಎಸೆದು ನಾನು ಕೊಳಕು ಮಾಡಿಕೊಳ್ಳಲ್ಲ. ಕೆಲವರು ಅನಾವಶ್ಯಕ ಮಾತಾಡ್ತಿದ್ದಾರೆ, ಮಾತಾಡ್ಲಿ, ತೊಂದ್ರೆ ಇಲ್ಲ ಎಂದು ಹೆಚ್.ವಿಶ್ವನಾಥ್ ಕಿಡಿ ಕಾರಿದ್ದಾರೆ.

‘ಅವನ್ಯಾವನ್ರಿ ಸಾ.ರಾ ಮಹೇಶ್?.. ಆ ಕೊಚ್ಚೆ ಗುಂಡಿಗೆ ಕಲ್ಲು ಎಸೆದು ನಾನು ಕೊಳಕು ಮಾಡಿಕೊಳ್ಳಲ್ಲ’
ಹೆಚ್.ವಿಶ್ವನಾಥ್
ಆಯೇಷಾ ಬಾನು
|

Updated on:Dec 01, 2020 | 12:14 PM

Share

ಬೆಂಗಳೂರು: ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ನಿನ್ನೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿತ್ತು. ಹೈಕೋರ್ಟ್ ತೀರ್ಪಿಗೆ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಈ ವಿಚಾರವಾಗಿ ಸುಮ್ಮನೆ ಕೂರಲ್ಲ, ಬದಲಿಗೆ ಸುಪ್ರೀಂಕೊರ್ಟ್ ಮೊರೆ ಹೋಗುತ್ತೇನೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ.

ಪರಿಷತ್ ಆಯ್ಕೆಗೆ ನನ್ನ ಹೆಸರನ್ನು ಮೊದಲು ಕಳಿಸಲಾಗಿತ್ತು. ನನ್ನ ಹೆಸರು ಕೈಬಿಟ್ಟು ಹೈಕಮಾಂಡ್ ಬೇರೆಯವರಿಗೆ ನೀಡಿದೆ. ಕೊನೆಗೆ ಈ ಬಗ್ಗೆ ಪ್ರಸ್ತಾಪವಾಗಿ ನಾನು ಪ್ರಶ್ನೆ ಮಾಡಿದ್ದೆ. ರಾಜ್ಯದ ಜನತೆಗೆ ಇದೆಲ್ಲಾ ಗೊತ್ತಾಗಬೇಕಿದೆ. ನಾನು ರಾಜಕಾರಣವನ್ನು ಲಾಭ, ನಷ್ಟ, ಸೋಲು, ವ್ಯವಹಾರವಾಗಿ ತಗೊಂಡಿಲ್ಲ. ರಾಜಕೀಯ ನನಗೆ ಸಾಂಸ್ಕ್ರತಿಕವಾಗಿ ಸಮವಾಗಿದೆ. ಏನೋ ದೊಡ್ಡ ದುರಂತ ಆಗಿದೆ ಅಂತ ಭಾವಿಸಿಲ್ಲ ನಾನು. ತೀರ್ಪನ್ನು ಗೌರವದಿಂದ ಕಾಣ್ತೇನೆ. ಮುಂದೆ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅಪೀಲ್ ಹಾಕ್ತೇನೆ ಎಂದರು.

ಸಾ.ರಾ. ಮಹೇಶ್ ವಿರುದ್ಧ ವಿಶ್ವನಾಥ್ ಗರಂ: ರಾಜ್ಯದಲ್ಲಿದ್ದ ರಾಕ್ಷಸ ರಾಜಕಾರಣ, ಕುಟುಂಬ ರಾಜಕಾರಣ ಕೊನೆಗೊಳಿಸಲು ಬಿಜೆಪಿಗೆ ಬಂದ್ವಿ. ಕ್ಷಿಪ್ರ ಕ್ರಾಂತಿ ನಡೆದು ಬಿಜೆಪಿ ಸರ್ಕಾರ ಬಂತು. ನಾವು ಮಂತ್ರಿ ಆಗಬೇಕು ಅಂತ ಅಂದು ಬಯಸಿರಲಿಲ್ಲ. ಅವನ್ಯಾವೋನ್ರೀ ಸಾ.ರಾ. ಮಹೇಶ್. ಅವನ ಬಗ್ಗೆ ನಾನು ಏನೂ ಮಾತಾಡಲ್ಲ. ಆ ಕೊಚ್ಚೆ ಗುಂಡಿಗೆ ಕಲ್ಲು ಎಸೆದು ನಾನು ಕೊಳಕು ಮಾಡಿಕೊಳ್ಳಲ್ಲ. ಕೆಲವರು ಅನಾವಶ್ಯಕ ಮಾತಾಡ್ತಿದ್ದಾರೆ, ಮಾತಾಡ್ಲಿ, ತೊಂದ್ರೆ ಇಲ್ಲ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಹೆಚ್.ವಿಶ್ವನಾಥ್ ಅಸಮಾಧಾನ: ರಾಜ್ಯದಲ್ಲಿ ನಮ್ಮಿಂದ ಸರ್ಕಾರ ಬಂದರೂ ನಮ್ಮ ಜತೆ ನಿಲ್ಲಲಿಲ್ಲ. ನನ್ನ ಹೆಸರು ಪರಿಷತ್ ಚುನಾವಣೆ ವೇಳೆ ಯಾಕೆ ತೆಗೆದರು? ನನ್ನ ಅನುಭವ ಬಳಸಿಕೊಳ್ಳಬಹುದಿತ್ತು ಎಂದು ಬಿಜೆಪಿ ನಾಯಕರ ವಿರುದ್ಧ ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಾನು ಹಾಕಿದ್ದ ಕಣ್ಣೀರಿಗೆ ಶಕ್ತಿದೇವತೆ ಉತ್ತರ ಕೊಟ್ಟಿದ್ದಾಳೆ: ವಿಶ್ವನಾಥ್ ಅನರ್ಹತೆ ತೀರ್ಪಿಗೆ ಸಾ.ರಾ.ಮಹೇಶ್​ ಪ್ರತಿಕ್ರಿಯೆ

Published On - 12:05 pm, Tue, 1 December 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು