‘ಚಾಕು ಇದ್ದಿದ್ರೆ ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ. ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ […]

‘ಚಾಕು ಇದ್ದಿದ್ರೆ  ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರ ಚುಚ್ಚಿಕೊಳ್ತಿದ್ದರು’
ಸಾಧು ಶ್ರೀನಾಥ್​

Updated on: Nov 21, 2019 | 4:10 PM

ಮೈಸೂರು: ಸಮ್ಮಿಶ್ರ ಸರ್ಕಾರ ಬಿದ್ದ ನಂತರ ಸಿದ್ದರಾಮಯ್ಯ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವಿನ ಆರೋಪ-ಪ್ರತ್ಯಾರೋಪ ಆಗಾಗ ತಾರಕಕ್ಕೇರುತ್ತಿದೆ. ಈ ವಿಚಾರವಾಗಿ ಹುಣಸೂರಿನ ಹನಸೋಗೆಯಲ್ಲಿ ಅನರ್ಹ ಶಾಸಕ ಎಚ್ ವಿಶ್ವನಾಥ್ ಒಂದು ಮಾತು ಹೇಳಿದ್ದು, ಚಾಕು ಇದ್ದಿದ್ದರೆ ಅವರಿಬ್ಬರೂ ಪರಸ್ಪರ ಚುಚ್ಚಿಕೊಳ್ಳುತ್ತಿದ್ದರು ಎಂದಿದ್ದಾರೆ.

ಈಗ ಬೈ ಎಲೆಕ್ಷನ್​ ಟೈಮ್​ನಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಒಟ್ಟಿಗೆ ಅನರ್ಹರನ್ನು ಸೋಲಿಸಲು ಪಣ ತೊಟ್ಟಿದ್ದಾರಂತೆ. ಈ ಹೊಂದಾಣಿಕೆ ಮೊದಲೇ ಇದ್ದಿದ್ದರೆ ಸರ್ಕಾರ ಏಕೆ ಬೀಳುತ್ತಾ ಇತ್ತು? ನೀವೇ ಮುಷ್ಠಿಯುದ್ಧ ಮಾಡಿ ಸರ್ಕಾರ ಕೆಡವಿದವರು. ಈಗ ಗಿಣಿಗಳಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

Published On - 4:10 pm, Thu, 21 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us