AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೇಶ್ವರ್‌ಗೆ ಸಚಿವ ಸ್ಥಾನ ಕೊಡದಂತೆ ಹೇಳಿದ್ದೆವು; ದೆಹಲಿಯಲ್ಲಿ ರೇಣುಕಾಚಾರ್ಯ ಬಹಿರಂಗ ಹೇಳಿಕೆ

ಯೋಗೇಶ್ವರ್‌ರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತೆಂದು ಒಪ್ಪಲ್ಲ. ಹೀಗಾಗಿ, ಈ ಬಗ್ಗೆ ನಾನು ಅಸಮಾಧಾನ ವ್ಯಕ್ತಪಡಿಸಿದ್ದೇನೆ.

ಯೋಗೇಶ್ವರ್‌ಗೆ ಸಚಿವ ಸ್ಥಾನ ಕೊಡದಂತೆ ಹೇಳಿದ್ದೆವು; ದೆಹಲಿಯಲ್ಲಿ ರೇಣುಕಾಚಾರ್ಯ ಬಹಿರಂಗ ಹೇಳಿಕೆ
ಎಂ.ಪಿ.ರೇಣುಕಾಚಾರ್ಯ
ಸಾಧು ಶ್ರೀನಾಥ್​
|

Updated on: Jan 19, 2021 | 11:55 AM

Share

ನವದೆಹಲಿ: ಸಿ.ಪಿ.ಯೋಗೇಶ್ವರ್‌ಗೆ ಸಚಿವ ಸ್ಥಾನ ಕೊಡದಂತೆ ಹೇಳಿದ್ದೆವು. ಹಲವು ಶಾಸಕರು ಮತ್ತು ಸಚಿವರು ಕೂಡ ಈ ಮಾತನ್ನು ಹೇಳಿದ್ದರು. ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಹಾಗೂ ವರಿಷ್ಠರಿಗೂ ಈ ಮಾತನ್ನು ಹೇಳಿದ್ದೆವು. ಯೋಗೇಶ್ವರ್‌ರನ್ನು ಸಚಿವ ಸ್ಥಾನದಿಂದ ತೆಗೆಯಿರಿ ಎಂದು ಬಹಿರಂಗವಾಗಿ ಹೇಳಲ್ಲ. ಪಕ್ಷದ ಚೌಕಟ್ಟಿನಲ್ಲಿ ನಮ್ಮ ಅಭಿಪ್ರಾಯವನ್ನು ತಿಳಿಸುತ್ತೇವೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಟಿವಿ9ಗೆ ತಿಳಿಸಿದ್ದಾರೆ.

ಯೋಗೇಶ್ವರ್‌ರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತೆಂದು ಒಪ್ಪಲ್ಲ. ನಾವು ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದೇ ಇಲ್ಲ ಎಂದು ಎಂ.ಪಿ.ರೇಣುಕಾಚಾರ್ಯ ಮಾತನಾಡಿದ್ದಾರೆ.

ನನ್ನ ಸ್ನೇಹಿತರು 9 ಕೋಟಿ ಸಾಲ ಮಾಡಿದ್ದಾರೆ ಅಂತಾ ಅವರು (ಸಿ.ಪಿ. ಯೋಗೇಶ್ವರ್‌) ಹೇಳಿದರು. ಹೀಗಾಗಿ ಅವರು ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದರು. ಆದರೆ ಅವರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂತು ಎಂದು ಹೇಳಿದರು. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದ ರೇಣುಕಾಚಾರ್ಯ, ಸಂಘಟನೆಯಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ ಈ ರೀತಿಯಾಗಿ ಹೇಳಿರುವುದಕ್ಕೆ ಬೇಸರವಾಗಿದೆ. ರಾಜ್ಯದಲ್ಲಿ 105 ಬಿಜೆಪಿ ಶಾಸಕರು ಗೆದ್ದಿದ್ದಾರೆ. ಯೋಗೇಶ್ವರ್ ಹೇಳಿಕೆಯಿಂದ, ಮೈತ್ರಿ ಸರ್ಕಾರದಲ್ಲಿ ಕೆಲ ಶಾಸಕರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ.

ಒಬ್ಬರಿಂದ ಬಿಜೆಪಿ ಸರ್ಕಾರ ಬಂತೆಂದು ಹೇಳುತ್ತಾರೆ. ಒಬ್ಬ ವ್ಯಕ್ತಿಯಿಂದ ಅಧಿಕಾರಕ್ಕೆ ಬಂದೆವು ಅಂದರೆ ತಪ್ಪಾಗುತ್ತೆ. ರಾಜ್ಯದ ಜನರಿಗೆ ತಪ್ಪು ಸಂದೇಶ ಹೋಗುತ್ತೆ. ಹೀಗಾಗಿ ಈ ಬಗ್ಗೆ ನಾನು ಅಸಮಾಧಾನ ವ್ಯಕ್ತಪಡಿಸಿದ್ದೇನೆ ಎಂದು ಟಿವಿ9ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್