ನಗರದಲ್ಲಿ ದಿಢೀರನೆ ಆಲಿಕಲ್ಲು ಮಳೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರನೆ ಗುಡುಗು, ಬಿರುಗಾಳಿ ‌ಸಹಿತ ಆಲಿಕಲ್ಲು ಮಳೆಯಾಗಿದೆ. ಯಶವಂತಪುರ, ಯಲಹಂಕ, ಪೀಣ್ಯ, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಮೈಸೂರು ರಸ್ತೆ, ಬ್ಯಾಟರಾಯನಪುರ, ವಿಜಯನಗರ, ಮಾಗಡಿ ರಸ್ತೆ ಮುಂತಾದ ಕಡೆ ಸಂಚಾರ ದಟ್ಟಣೆ ಹೆಚ್ಚಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿದೆ. 7 ಗಂಟೆಗೆ ಬಿಎಂಟಿಸಿ ಬಸ್ ಸಂಚಾರ ಅಂತ್ಯ ಹಿನ್ನೆಲೆಯಲ್ಲಿ […]

ನಗರದಲ್ಲಿ ದಿಢೀರನೆ ಆಲಿಕಲ್ಲು ಮಳೆ
ಸಾಧು ಶ್ರೀನಾಥ್​ Edited By:

Updated on: May 26, 2020 | 6:44 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರನೆ ಗುಡುಗು, ಬಿರುಗಾಳಿ ‌ಸಹಿತ ಆಲಿಕಲ್ಲು ಮಳೆಯಾಗಿದೆ. ಯಶವಂತಪುರ, ಯಲಹಂಕ, ಪೀಣ್ಯ, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಮೈಸೂರು ರಸ್ತೆ, ಬ್ಯಾಟರಾಯನಪುರ, ವಿಜಯನಗರ, ಮಾಗಡಿ ರಸ್ತೆ ಮುಂತಾದ ಕಡೆ ಸಂಚಾರ ದಟ್ಟಣೆ ಹೆಚ್ಚಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿದೆ. 7 ಗಂಟೆಗೆ ಬಿಎಂಟಿಸಿ ಬಸ್ ಸಂಚಾರ ಅಂತ್ಯ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ತಮ್ಮ ಮನೆಗೆ ತೆರಳಲು ಮಳೆಯಲ್ಲೇ ಬಸ್ ಹತ್ತುತ್ತಿದ್ದಾರೆ.

Published On - 6:16 pm, Tue, 26 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us