AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್​ ತಯಾರಿಸುವ ತಾಕತ್ತು HALಗೆ ಇದೆ, ಆದರೆ..

ಹೆಚ್‌ಎಎಲ್‌ ತನ್ನ ಹೆಲಿಕಾಪ್ಟರ್ ತಯಾರಿಕೆ ಬಲಪಡಿಸಿದೆ. ಇದರ ಜತೆ ಈ ವರ್ಷ ನಾವು ದೇಶೀಯ ತಯಾರಿಕೆಗೆ ಹೆಚ್ಚು ಒತ್ತು ನೀಡಿದ್ದೇವೆ. HAL ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಬಂದಿದೆ ಎಂದು HAL ಸಿಎಂಡಿಆರ್‌ ಮಾಧವನ್ ತಿಳಿಸಿದ್ದಾರೆ.

ರಫೇಲ್​ ತಯಾರಿಸುವ ತಾಕತ್ತು HALಗೆ ಇದೆ, ಆದರೆ..
HAL ಸಿಎಂಡಿಆರ್‌ ಮಾಧವನ್
ಆಯೇಷಾ ಬಾನು
| Edited By: |

Updated on: Feb 04, 2021 | 7:39 PM

Share

ಬೆಂಗಳೂರು: ರಫೇಲ್​ ತಯಾರಿಸುವ ತಾಕತ್ತು HALಗೆ ಇದೆ. ಆದರೆ, ಡಾಸಲ್ಟ್​ ಸಂಸ್ಥೆ ಕೋರ್​ ಟೆಕ್ನಾಲಜಿಯನ್ನು ನಮಗೆ ನೀಡಲು ಸಿದ್ಧವಿರಲಿಲ್ಲ. ಕೇವಲ ರಫೇಲ್​ ಅಸ್ಸೆಂಬ್ಲಿ ಮಾಡೋಕೆ ​​ನಾವು ಸಿದ್ಧರಿರಲಿಲ್ಲ ಎಂದು HAL ಮುಖ್ಯಸ್ಥರಾದ (ಸಿಎಂಡಿಆರ್​) ಮಾಧವನ್​ ಹೇಳಿದ್ದಾರೆ.

ಇಂದು (ಫೆ.4) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಧವನ್​, ಕೊರೊನಾ ಸಮಯದಲ್ಲಿ ಸಂಕಷ್ಟ ಆಗಿತ್ತು. ಕೊವಿಡ್​​ ಮಧ್ಯೆಯೂ 150ನೇ ಡಾನಿಯರ್ ಹೆಲಿಕಾಪ್ಟರ್ ಸಿದ್ಧವಾಗಿದೆ. ಈ ಬಾರಿ ವಹಿವಾಟು ಹೆಚ್ಚಿಸಿಕೊಳ್ಳುವುದು ನಮ್ಮ ಮುಖ್ಯ ಉದ್ದೇಶ. HAL ವಿನ್ಯಾಸ​ ಹಾಗೂ ಉತ್ಪಾದನೆಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದರು.

ಎಚ್‌ಎಎಲ್‌ ತನ್ನ ಹೆಲಿಕಾಪ್ಟರ್ ತಯಾರಿಕೆ ಸಾಮರ್ಥ್ಯವನ್ನು ಸುಧಾರಿಸಿಕೊಂಡಿದೆ.  ಇದರ ಜತೆ ಈ ವರ್ಷ ನಾವು ದೇಶೀಯ ತಯಾರಿಕೆಗೆ ಹೆಚ್ಚು ಒತ್ತು ನೀಡಿದ್ದೇವೆ. HAL ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಬಂದಿದೆ. ಈ ಬಾರಿ 16 ಲಘು ಯುದ್ಧ ವಿಮಾನ ತಯಾರಿಕೆಗೆ ಆರ್ಡರ್​ ಬಂದಿದೆ. ಇದರ ಮೌಲ್ಯ ಸುಮಾರು 36 ಸಾವಿರ ಕೋಟಿ ರೂಪಾಯಿ. 36 ತಿಂಗಳ ನಂತರ ಮೊದಲ ಲಘು ಯುದ್ಧ ವಿಮಾನವನ್ನು ಡೆಲಿವರಿ ಮಾಡಿದ್ದೇವೆ. ಮುಂದಿನ 9 ವರ್ಷಗಳಲ್ಲಿ ಅಷ್ಟೂ ಯುದ್ಧ ವಿಮಾನವನ್ನು ತಯಾರಿಸಿ ಪೂರೈಸುತ್ತೇವೆ ಎಂದು ಮಾಧವನ್ ಮಾಹಿತಿ ನೀಡಿದರು.

ಎಚ್​​ಎಎಲ್​ ಭಾರತೀಯ ವಾಯುಪಡೆಗೆ 83 ತೇಜಸ್​ ವಿಮಾನಗಳನ್ನು ನೀಡುತ್ತಿದೆ. ಆಗ್ನೇಯ ಏಷ್ಯಾ ರಾಷ್ಟ್ರಗಳು ತೇಜಸ್​ ಕೊಳ್ಳಲು ಆಸಕ್ತಿ ತೋರಿವೆ. ಸದ್ಯ, 12 ಲೈಟ್ ಯುಟಿಲಿಟಿ ಹೆಲಿಕಾಪ್ಟರ್ ತಯಾರಿಕೆಗೆ ಆರ್ಡರ್​ ಬಂದಿದೆ ಎಂದು ಮಾಧವನ್​ ತಿಳಿಸಿದರು.

HAL ನಲ್ಲಿ LCA ತೇಜಸ್ ಡಿವಿಷನ್ ಪ್ಲಾಂಟ್- 2 ಉದ್ಘಾಟಿಸಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ