AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್​ ತಯಾರಿಸುವ ತಾಕತ್ತು HALಗೆ ಇದೆ, ಆದರೆ..

ಹೆಚ್‌ಎಎಲ್‌ ತನ್ನ ಹೆಲಿಕಾಪ್ಟರ್ ತಯಾರಿಕೆ ಬಲಪಡಿಸಿದೆ. ಇದರ ಜತೆ ಈ ವರ್ಷ ನಾವು ದೇಶೀಯ ತಯಾರಿಕೆಗೆ ಹೆಚ್ಚು ಒತ್ತು ನೀಡಿದ್ದೇವೆ. HAL ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಬಂದಿದೆ ಎಂದು HAL ಸಿಎಂಡಿಆರ್‌ ಮಾಧವನ್ ತಿಳಿಸಿದ್ದಾರೆ.

ರಫೇಲ್​ ತಯಾರಿಸುವ ತಾಕತ್ತು HALಗೆ ಇದೆ, ಆದರೆ..
HAL ಸಿಎಂಡಿಆರ್‌ ಮಾಧವನ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Feb 04, 2021 | 7:39 PM

Share

ಬೆಂಗಳೂರು: ರಫೇಲ್​ ತಯಾರಿಸುವ ತಾಕತ್ತು HALಗೆ ಇದೆ. ಆದರೆ, ಡಾಸಲ್ಟ್​ ಸಂಸ್ಥೆ ಕೋರ್​ ಟೆಕ್ನಾಲಜಿಯನ್ನು ನಮಗೆ ನೀಡಲು ಸಿದ್ಧವಿರಲಿಲ್ಲ. ಕೇವಲ ರಫೇಲ್​ ಅಸ್ಸೆಂಬ್ಲಿ ಮಾಡೋಕೆ ​​ನಾವು ಸಿದ್ಧರಿರಲಿಲ್ಲ ಎಂದು HAL ಮುಖ್ಯಸ್ಥರಾದ (ಸಿಎಂಡಿಆರ್​) ಮಾಧವನ್​ ಹೇಳಿದ್ದಾರೆ.

ಇಂದು (ಫೆ.4) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಧವನ್​, ಕೊರೊನಾ ಸಮಯದಲ್ಲಿ ಸಂಕಷ್ಟ ಆಗಿತ್ತು. ಕೊವಿಡ್​​ ಮಧ್ಯೆಯೂ 150ನೇ ಡಾನಿಯರ್ ಹೆಲಿಕಾಪ್ಟರ್ ಸಿದ್ಧವಾಗಿದೆ. ಈ ಬಾರಿ ವಹಿವಾಟು ಹೆಚ್ಚಿಸಿಕೊಳ್ಳುವುದು ನಮ್ಮ ಮುಖ್ಯ ಉದ್ದೇಶ. HAL ವಿನ್ಯಾಸ​ ಹಾಗೂ ಉತ್ಪಾದನೆಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದರು.

ಎಚ್‌ಎಎಲ್‌ ತನ್ನ ಹೆಲಿಕಾಪ್ಟರ್ ತಯಾರಿಕೆ ಸಾಮರ್ಥ್ಯವನ್ನು ಸುಧಾರಿಸಿಕೊಂಡಿದೆ.  ಇದರ ಜತೆ ಈ ವರ್ಷ ನಾವು ದೇಶೀಯ ತಯಾರಿಕೆಗೆ ಹೆಚ್ಚು ಒತ್ತು ನೀಡಿದ್ದೇವೆ. HAL ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಬಂದಿದೆ. ಈ ಬಾರಿ 16 ಲಘು ಯುದ್ಧ ವಿಮಾನ ತಯಾರಿಕೆಗೆ ಆರ್ಡರ್​ ಬಂದಿದೆ. ಇದರ ಮೌಲ್ಯ ಸುಮಾರು 36 ಸಾವಿರ ಕೋಟಿ ರೂಪಾಯಿ. 36 ತಿಂಗಳ ನಂತರ ಮೊದಲ ಲಘು ಯುದ್ಧ ವಿಮಾನವನ್ನು ಡೆಲಿವರಿ ಮಾಡಿದ್ದೇವೆ. ಮುಂದಿನ 9 ವರ್ಷಗಳಲ್ಲಿ ಅಷ್ಟೂ ಯುದ್ಧ ವಿಮಾನವನ್ನು ತಯಾರಿಸಿ ಪೂರೈಸುತ್ತೇವೆ ಎಂದು ಮಾಧವನ್ ಮಾಹಿತಿ ನೀಡಿದರು.

ಎಚ್​​ಎಎಲ್​ ಭಾರತೀಯ ವಾಯುಪಡೆಗೆ 83 ತೇಜಸ್​ ವಿಮಾನಗಳನ್ನು ನೀಡುತ್ತಿದೆ. ಆಗ್ನೇಯ ಏಷ್ಯಾ ರಾಷ್ಟ್ರಗಳು ತೇಜಸ್​ ಕೊಳ್ಳಲು ಆಸಕ್ತಿ ತೋರಿವೆ. ಸದ್ಯ, 12 ಲೈಟ್ ಯುಟಿಲಿಟಿ ಹೆಲಿಕಾಪ್ಟರ್ ತಯಾರಿಕೆಗೆ ಆರ್ಡರ್​ ಬಂದಿದೆ ಎಂದು ಮಾಧವನ್​ ತಿಳಿಸಿದರು.

HAL ನಲ್ಲಿ LCA ತೇಜಸ್ ಡಿವಿಷನ್ ಪ್ಲಾಂಟ್- 2 ಉದ್ಘಾಟಿಸಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!