AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಪೀಠವನ್ನು ಹಿಂದೂಗಳಿಗೆ ವಹಿಸುವ ಬುದ್ಧಿ ಬಿಜೆಪಿಗೆ ಬರಲಿ: ಪ್ರಮೋದ್​ ಮುತಾಲಿಕ್

ದತ್ತಪೀಠ ಹಿಂದೂಗಳಿಗೆ ಹಸ್ತಾಂತರಿಸಲು ಶ್ರೀ ರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹುಕ್ಕೇರಿ ಪಟ್ಟಣದ ದತ್ತ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದತ್ತಪೀಠವನ್ನು ಹಿಂದೂಗಳಿಗೆ ವಹಿಸುವ ಬುದ್ಧಿ ಬಿಜೆಪಿಗೆ ಬರಲಿ: ಪ್ರಮೋದ್​ ಮುತಾಲಿಕ್
ದತ್ತ ಮಂದಿರದಲ್ಲಿ ಪ್ರಮೋದ್ ಮುತಾಲಿಕ್ ವಿಶೇಷ ಪೂಜೆ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 26, 2020 | 1:07 PM

Share

ಬೆಳಗಾವಿ: ಚಿಕ್ಕಮಗಳೂರು ತಾಲ್ಲೂಕು ಬಾಬಾಬುಡನ್​ಗಿರಿಯಲ್ಲಿರುವ ದತ್ತಪೀಠವನ್ನು ಶೀಘ್ರ ಹಿಂದೂಗಳಿಗೆ ಹಸ್ತಾಂತರಿಸಬೇಕೆಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ದತ್ತಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸುವ ಬುದ್ದಿ ಬಿಜೆಪಿ ಪಕ್ಷಕ್ಕೆ ಬೇಗನೇ ಬರಲಿ ಎಂದು ಪ್ರಾರ್ಥಿಸಿದರು.

ದತ್ತಾತ್ರೇಯ ಅನುಗ್ರಹದಿಂದ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯವಹಿಸಿದರೆ ಅದಕ್ಕೆ ದತ್ತನ ಶಾಪ ತಟ್ಟಲಿ ಎಂದು ಕಿಡಿಕಾರಿದರು.

ದತ್ತಪೀಠದ ಹೋರಾಟದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂತು. ಸಿ.ಟಿ. ರವಿ‌, ಸುನಿಲ್ ಕುಮಾರ್ ದತ್ತಪೀಠದ ಹೋರಾಟದಿಂದಲೇ ಶಾಸಕರು, ಸಚಿವರಾದವರು. ಆದರೆ ದತ್ತಪೀಠಕ್ಕೆ ಮುಕ್ತಿ ಕೊಡುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿಲ್ಲ ಎಂದು ವಿಷಾದಿಸಿದರು.

ದತ್ತಪೀಠವನ್ನ ಹಿಂದೂಗಳಿಗೆ ಕೊಡಬೇಕು, ಅಲ್ಲಿರುವ ಸಮಾಧಿಗಳನ್ನು ಸ್ಥಳಾಂತರಿಸಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು.

Published On - 1:03 pm, Thu, 26 November 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು