AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್​ಶಾಪ್ ಬಂದ್ ಆದ್ರೆ ಏನಂತೆ? ಮಾಸ್ಕ್​ ಅಪ್ಪೋ ಮಾಸ್ಕು ಅಂತಾ ಹೊರಟೇಬಿಟ್ಟ ಇವ..

ಧಾರವಾಡ: ಕೊರೊನಾ ಮಹಾಮಾರಿಯಿಂದಾಗಿ ಲಾಕ್​ಡೌನ್ ಆಗಿ ಬಹುತೇಕ ಉದ್ಯಮಗಳು ಸಂಪೂರ್ಣವಾಗಿ ನೆಲಕಚ್ಚಿ ಹೋಗಿವೆ. ಅದರಲ್ಲೂ ಸಣ್ಣ ಸಣ್ಣ ಅಂಗಡಿಕಾರರಂತೂ ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಸರ್ಕಾರ ಏನೆಲ್ಲಾ ಪ್ಯಾಕೇಜ್​ಗಳನ್ನು ಘೋಷಿಸಿದರೂ ಅವೆಲ್ಲ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವಂತಾಗಿದೆ. ಇದೀಗ ಲಾಕ್​ಡೌನ್ ಸಡಿಲಿಕೆಯಾದರೂ ಅದರಿಂದ ಹೆಚ್ಚೇನೂ ಪರಿಣಾಮ ಬೀರಿಲ್ಲ. ಆತ್ಮನಿರ್ಭರ ಪರಿಕಲ್ಪನೆ ಸಾಕಾರಗೊಳಿಸಿದ ವಿಶೇಷ ಚೇತನ ಏಕೆಂದರೆ ಜನರಿಗೆ ಉದ್ಯೋಗವೇ ಇಲ್ಲದ್ದಕ್ಕೆ ಹಣ ಖರ್ಚು ಮಾಡಲು ಹೊರಗೆ ಬಾರದೇ ಹೋಟೆಲ್, ಪಾನ್ ಶಾಪ್ ಸೇರಿದಂತೆ ಅನೇಕ ವ್ಯಾಪಾರಗಳು ನೆಲಕಚ್ಚಿವೆ. […]

ಪಾನ್​ಶಾಪ್ ಬಂದ್ ಆದ್ರೆ ಏನಂತೆ? ಮಾಸ್ಕ್​ ಅಪ್ಪೋ ಮಾಸ್ಕು ಅಂತಾ ಹೊರಟೇಬಿಟ್ಟ ಇವ..
ಸಾಧು ಶ್ರೀನಾಥ್​
|

Updated on: Jun 29, 2020 | 3:09 PM

Share

ಧಾರವಾಡ: ಕೊರೊನಾ ಮಹಾಮಾರಿಯಿಂದಾಗಿ ಲಾಕ್​ಡೌನ್ ಆಗಿ ಬಹುತೇಕ ಉದ್ಯಮಗಳು ಸಂಪೂರ್ಣವಾಗಿ ನೆಲಕಚ್ಚಿ ಹೋಗಿವೆ. ಅದರಲ್ಲೂ ಸಣ್ಣ ಸಣ್ಣ ಅಂಗಡಿಕಾರರಂತೂ ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಸರ್ಕಾರ ಏನೆಲ್ಲಾ ಪ್ಯಾಕೇಜ್​ಗಳನ್ನು ಘೋಷಿಸಿದರೂ ಅವೆಲ್ಲ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವಂತಾಗಿದೆ. ಇದೀಗ ಲಾಕ್​ಡೌನ್ ಸಡಿಲಿಕೆಯಾದರೂ ಅದರಿಂದ ಹೆಚ್ಚೇನೂ ಪರಿಣಾಮ ಬೀರಿಲ್ಲ.

ಆತ್ಮನಿರ್ಭರ ಪರಿಕಲ್ಪನೆ ಸಾಕಾರಗೊಳಿಸಿದ ವಿಶೇಷ ಚೇತನ ಏಕೆಂದರೆ ಜನರಿಗೆ ಉದ್ಯೋಗವೇ ಇಲ್ಲದ್ದಕ್ಕೆ ಹಣ ಖರ್ಚು ಮಾಡಲು ಹೊರಗೆ ಬಾರದೇ ಹೋಟೆಲ್, ಪಾನ್ ಶಾಪ್ ಸೇರಿದಂತೆ ಅನೇಕ ವ್ಯಾಪಾರಗಳು ನೆಲಕಚ್ಚಿವೆ. ಇಂಥ ವೇಳೆಯಲ್ಲಿ ಕೊರೊನಾ ಮಹಾಮಾರಿಯನ್ನೇ ಮುಂದಿಟ್ಟುಕೊಂಡು ಪ್ರಧಾನಿ ಮೋದಿಯವರು ಹೇಳಿರೋ ಆತ್ಮನಿರ್ಭರ ಪರಿಕಲ್ಪನೆಯನ್ನು ಧಾರವಾಡದ ವಿಶೇಷಚೇತನ ವ್ಯಕ್ತಿಯೊಬ್ಬ ಸಾಕಾರಗೊಳಿಸಿದ್ದಾರೆ.

ಪಾನ್​ಶಾಪ್ ಸಂಪೂರ್ಣವಾಗಿ ಬಂದ್ ಧಾರವಾಡದ ಟಿಕಾರೆ ರಸ್ತೆಯ ನಿಜಾಮುದ್ದೀನ್ ಬಟ್ಲರ್ ಅನ್ನೋ 36 ವರ್ಷ ವಯಸ್ಸಿನ ವಿಶೇಷ ಚೇತನ ವ್ಯಕ್ತಿ ಹಲವಾರು ವರ್ಷಗಳಿಂದ ನಗರದ ಸುಭಾಷ್ ರಸ್ತೆಯಲ್ಲಿ ಚಿಕ್ಕದೊಂದು ಪಾನ್ ಶಾಪ್ ಹಾಕಿಕೊಂಡು ಜೀವನ ಸಾಗಿಸುತ್ತಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದ ನಿಜಾಮುದ್ದೀನ್ ಕುಟುಂಬಕ್ಕೆ ಕೊರೊನಾ ಮಹಾಮಾರಿ ದೊಡ್ಡ ಹೊಡೆದ ನೀಡಿತು. ಪಾನ್​ಶಾಪ್ ಸಂಪೂರ್ಣವಾಗಿ ಬಂದ್ ಆಗಿ ಕುಟುಂಬ ನಿರ್ವಹಣೆಯೇ ಕಷ್ಟವಾಯಿತು.

ಮೊದಲೇ ವಿಶೇಷ ಚೇತನ. ಅಂಥದ್ದರಲ್ಲಿ ಪಾನ್ ಶಾಪ್ ಬಂದ್ ಆಗಿದ್ದು ಮತ್ತೊಂದು ಹೊಡೆತ. ಇದೇ ವೇಳೆ ಜಾಣತನ ಮೆರೆದ ನಿಜಾಮುದ್ದೀನ್ ಕೊರೊನಾ ಸಂದರ್ಭದಲ್ಲಿ ಅತಿ ಹೆಚ್ಚು ಬೇಡಿಕೆ ಇರೋ ಮಾಸ್ಕ್​ಗಳನ್ನು ಮನೆಯಲ್ಲಿಯೇ ತಯಾರಿಸಿದರು. ಸರ್ಕಾರದಿಂದ ನೀಡಲಾಗಿದ್ದ ಮೂರು ಗಾಲಿಯ ಬೈಕ್​ನ ಹಿಂದಿನ ಭಾಗದಲ್ಲಿ ಸ್ಟ್ಯಾಂಡ್ ಕಟ್ಟಿದರು. ಆ ಸ್ಟ್ಯಾಂಡ್​ಗೆ ಮಾಸ್ಕ್​ಗಳನ್ನು ತೂಗು ಹಾಕಿಕೊಂಡು ನಗರದಲ್ಲಿ ತಿರುಗಾಡಲು ಶುರು ಮಾಡಿದರು.

ಇದನ್ನು ಗಮನಿಸಿದ ಸಾರ್ವಜನಿಕರು ಇವರ ಬಳಿ ಮಾಸ್ಕ್ ಖರೀದಿಸಲು ಶುರು ಮಾಡಿದರು. ಒಂದೆರಡು ದಿನಗಳು ಕಳೆಯುತ್ತಿದ್ದಂತೆಯೇ ಸಾಕಷ್ಟು ಪ್ರಮಾಣದಲ್ಲಿ ಮಾಸ್ಕ್​ಗಳು ಮಾರಾಟವಾಗಿ, ನಿಜಾಮುದ್ದೀನ್ ಅವರ ಆತ್ಮವಿಶ್ವಾಸ ಹೆಚ್ಚಾಗತೊಡಗಿತು. ಆಗ ಬಗೆ ಬಗೆಯ ಮಾಸ್ಕ್​ಗಳನ್ನು ತಯಾರಿಸಿ ಮಾರುಕಟ್ಟೆಗೆ ತಂದರು. ಪಾನ್​ಶಾಪ್​ನಲ್ಲಿ ನಿತ್ಯವೂ ಎರಡು ಸಾವಿರ ರೂಪಾಯಿ ಗಳಿಸುತ್ತಿದ್ದ ನಿಜಾಮುದ್ದೀನ್ ಅವರಿಗೆ ಇದೀಗ ಅದರ ಅರ್ಧ ಭಾಗದಷ್ಟು ಆದಾಯ ಮಾಸ್ಕ್​ನಿಂದ ಬರತೊಡಗಿದೆ.

ಸದ್ಯಕ್ಕೆ ಮನೆಯನ್ನು ನಡೆಸುವಷ್ಟು ಆದಾಯದಿಂದಾಗಿ ಮತ್ತೆ ನೆಮ್ಮದಿ ಕಂಡುಕೊಂಡಿದ್ದಾರೆ. ಕೊಂಚ ಜಾಣತನದೊಂದಿಗೆ ಆತ್ಮವಿಶ್ವಾಸವನ್ನು ಬೆಳೆಸಿಕೊಂಡರೆ ಹೇಗೆ ಬದುಕನ್ನು ರೂಪಿಸಿಕೊಳ್ಳಬಹುದು ಅನ್ನೋದಕ್ಕೆ ಈ ನಿಜಾಮುದ್ದೀನ್ ಅವರೇ ಸಾಕ್ಷಿ. -ನರಸಿಂಹಮೂರ್ತಿ ಪ್ಯಾಟಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ