AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕಾನ್ಸ್‌ಟೇಬಲ್‌ಗೆ ಕಾಟ ಕೊಟ್ಟ ಖದೀಮ ಅರೆಸ್ಟ್.. ಖೇಲ್ ಖತಂ ನಾಟಕ್ ಬಂದ್!

ಮಹಿಳಾ ಕಾನ್ಸ್​ಟೇಬಲ್​ಗೆ ತೊಂದರೆ ಕೊಡುತ್ತಿದ್ದ ಸ್ನೇಹಿತನನ್ನು ಬಂಧಿಸಲಾಗಿದೆ. ಯಲಹಂಕ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮಹಿಳಾ ಕಾನ್ಸ್‌ಟೇಬಲ್‌ಗೆ ಕಾಟ ಕೊಟ್ಟ ಖದೀಮ ಅರೆಸ್ಟ್.. ಖೇಲ್ ಖತಂ ನಾಟಕ್ ಬಂದ್!
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Dec 23, 2020 | 12:45 PM

Share

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್​ ಕಾನ್ಸ್‌ಟೇಬಲ್‌​ಗೆ ಕಾಟ ಕೊಡುತ್ತಿದ್ದ ಕಿಡಿಗೇಡಿಯನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ಮೂಲದ ಸತೀಶ್​ ಇಂತಹ ಕೃತ್ಯ ಮಾಡಿರುವುದಾಗಿ ತಿಳಿದು ಬಂದಿದೆ.

ಕಾನ್ಸ್‌ಟೇಬಲ್‌ ಮತ್ತು ಸತೀಶ್ ಸಹಪಾಠಿಯಾಗಿದ್ದರು. ಮೊದಲಿನಿಂದಲೂ ಸ್ನೇಹಿತರು. ಸತೀಶ್ ಕಾನ್ಸ್​ಟೇಬಲ್​ಗೆ ಪದೇ ಪದೇ ಕರೆಮಾಡಿ ಕಿರಿ ಕಿರಿ ಮಾಡುತ್ತಿದ್ದ. ಇದನ್ನು ಸಹಿಸದ ಕಾನ್ಸ್‌ಟೇಬಲ್, ತಮ್ಮ ಸ್ನೇಹಿತರ ಗ್ರೂಪಿನಿಂದ ಸತೀಶನನ್ನು ತೆಗೆದು ಹಾಕಿದ್ದರು.

ಇದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದ ಸತೀಶ್, ಕಡೂರು ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳಾ ಕಾನ್ಸ್‌ಟೇಬಲ್‌ ಫೋನ್ ನಂಬರ್​ಅನ್ನು ದೊಡ್ಡದಾಗಿ ಬರೆದಿದ್ದ. ಇದರ ಬಳಿಕ ಮಹಿಳಾ ಕಾನ್ಸ್‌ಟೇಬಲ್‌​ಗೆ ಅಶ್ಲೀಲ ಕರೆಗಳು ಬರಲಾರಂಭಿಸಿದವು. ಈ ಕುರಿತು ತನಿಖೆ ಆರಂಭಿಸಿದಾಗ ಸತೀಶ್ ಸಿಕ್ಕಿ ಬಿದ್ದಿದ್ದಾನೆ.

ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಶೌಚಾಲಯದಲ್ಲಿ ನಂಬರ್ ಬರೆದಿರುವುದು ಸತೀಶ್ ಎಂಬುದು ಬೆಳಕಿಗೆ ಬಂದಿದೆ.

ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ