AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲುವು ಸಡಿಲಿಸಿದ ಜಿಲ್ಲಾಡಳಿತ: ಇಂದು ಬಂದ‌ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ

ಹಾಸನ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲುಗಳನ್ನು ಒಂದು ವರ್ಷದ ನಂತರ ಇಂದು ತೆರೆಯಲಾಯಿತು. ವಿಶೇಷ ಪೂಜೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ದೇವಸ್ಥಾನದ ದ್ವಾರವನ್ನು ತೆರೆಯಲಾಯಿತು. ದೇವಸ್ಥಾನದ ಬಾಗಿಲು ಇಂದಿನಿಂದ 12 ದಿನಗಳ ಕಾಲ ತೆರೆದಿರಲಾಗುವುದು. ಒಂದು ವರ್ಷದ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನ ಪಡೆಯಲು ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ದೇವಾಲಯದ ಒಳಗೆ ಉರಿಯುತ್ತಿರೋ ದೀಪವನ್ನು ನೋಡಲು ಜನರು ಮುಗಿಬಿದ್ದರು. ಸಾರ್ವಜನಿಕರಿಗೆ ದರ್ಶನ ಪಡೆಯುವ […]

ನಿಲುವು ಸಡಿಲಿಸಿದ ಜಿಲ್ಲಾಡಳಿತ: ಇಂದು ಬಂದ‌ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ
ಹಾಸನಾಂಬೆ ದೇವಾಲಯ
KUSHAL V
|

Updated on:Nov 05, 2020 | 1:40 PM

Share

ಹಾಸನ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲುಗಳನ್ನು ಒಂದು ವರ್ಷದ ನಂತರ ಇಂದು ತೆರೆಯಲಾಯಿತು. ವಿಶೇಷ ಪೂಜೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ದೇವಸ್ಥಾನದ ದ್ವಾರವನ್ನು ತೆರೆಯಲಾಯಿತು.

ದೇವಸ್ಥಾನದ ಬಾಗಿಲು ಇಂದಿನಿಂದ 12 ದಿನಗಳ ಕಾಲ ತೆರೆದಿರಲಾಗುವುದು. ಒಂದು ವರ್ಷದ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನ ಪಡೆಯಲು ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ದೇವಾಲಯದ ಒಳಗೆ ಉರಿಯುತ್ತಿರೋ ದೀಪವನ್ನು ನೋಡಲು ಜನರು ಮುಗಿಬಿದ್ದರು. ಸಾರ್ವಜನಿಕರಿಗೆ ದರ್ಶನ ಪಡೆಯುವ ನಿರ್ಬಂಧವಿದ್ದರೂ ನೂರಾರು ಜನರು ಆಗಮಿಸಿದ ಕಾರಣ ಕೆಲ ಕಾಲ ನೂಕುನುಗ್ಗಲು ಉಂಟಾಯಿತು. ಅಂತಿಮವಾಗಿ ಜಿಲ್ಲಾಡಳಿತ ತನ್ನ ನಿಲುವು ಸಡಿಲಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿತು. ಇಂದು ದರ್ಶನಕ್ಕೆ ಬಂದ‌ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿತು. ಸರತಿ ಸಾಲಿನಲ್ಲಿ ಬಂದು ದೇವಿ ದರ್ಶನ ಪಡೆಯಲು ಅಧಿಕಾರಿಗಳು ಅವಕಾಶ ನೀಡಿದರು. ಈ ನಡುವೆ, ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಭಕ್ತರು ಯಾವುದೇ ಸಾಮಾಜಿಕ ಅಂತರ ಇಲ್ಲದೆ ದರ್ಶನಕ್ಕೆ ಮುಂದಾದರು.

Published On - 1:08 pm, Thu, 5 November 20

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು