AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಲುವು ಸಡಿಲಿಸಿದ ಜಿಲ್ಲಾಡಳಿತ: ಇಂದು ಬಂದ‌ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ

ಹಾಸನ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲುಗಳನ್ನು ಒಂದು ವರ್ಷದ ನಂತರ ಇಂದು ತೆರೆಯಲಾಯಿತು. ವಿಶೇಷ ಪೂಜೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ದೇವಸ್ಥಾನದ ದ್ವಾರವನ್ನು ತೆರೆಯಲಾಯಿತು. ದೇವಸ್ಥಾನದ ಬಾಗಿಲು ಇಂದಿನಿಂದ 12 ದಿನಗಳ ಕಾಲ ತೆರೆದಿರಲಾಗುವುದು. ಒಂದು ವರ್ಷದ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನ ಪಡೆಯಲು ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ದೇವಾಲಯದ ಒಳಗೆ ಉರಿಯುತ್ತಿರೋ ದೀಪವನ್ನು ನೋಡಲು ಜನರು ಮುಗಿಬಿದ್ದರು. ಸಾರ್ವಜನಿಕರಿಗೆ ದರ್ಶನ ಪಡೆಯುವ […]

ನಿಲುವು ಸಡಿಲಿಸಿದ ಜಿಲ್ಲಾಡಳಿತ: ಇಂದು ಬಂದ‌ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ
ಹಾಸನಾಂಬೆ ದೇವಾಲಯ
KUSHAL V
|

Updated on:Nov 05, 2020 | 1:40 PM

Share

ಹಾಸನ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದ ಬಾಗಿಲುಗಳನ್ನು ಒಂದು ವರ್ಷದ ನಂತರ ಇಂದು ತೆರೆಯಲಾಯಿತು. ವಿಶೇಷ ಪೂಜೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮ್ಮುಖದಲ್ಲಿ ದೇವಸ್ಥಾನದ ದ್ವಾರವನ್ನು ತೆರೆಯಲಾಯಿತು.

ದೇವಸ್ಥಾನದ ಬಾಗಿಲು ಇಂದಿನಿಂದ 12 ದಿನಗಳ ಕಾಲ ತೆರೆದಿರಲಾಗುವುದು. ಒಂದು ವರ್ಷದ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನ ಪಡೆಯಲು ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ದೇವಾಲಯದ ಒಳಗೆ ಉರಿಯುತ್ತಿರೋ ದೀಪವನ್ನು ನೋಡಲು ಜನರು ಮುಗಿಬಿದ್ದರು. ಸಾರ್ವಜನಿಕರಿಗೆ ದರ್ಶನ ಪಡೆಯುವ ನಿರ್ಬಂಧವಿದ್ದರೂ ನೂರಾರು ಜನರು ಆಗಮಿಸಿದ ಕಾರಣ ಕೆಲ ಕಾಲ ನೂಕುನುಗ್ಗಲು ಉಂಟಾಯಿತು. ಅಂತಿಮವಾಗಿ ಜಿಲ್ಲಾಡಳಿತ ತನ್ನ ನಿಲುವು ಸಡಿಲಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿತು. ಇಂದು ದರ್ಶನಕ್ಕೆ ಬಂದ‌ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿತು. ಸರತಿ ಸಾಲಿನಲ್ಲಿ ಬಂದು ದೇವಿ ದರ್ಶನ ಪಡೆಯಲು ಅಧಿಕಾರಿಗಳು ಅವಕಾಶ ನೀಡಿದರು. ಈ ನಡುವೆ, ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಭಕ್ತರು ಯಾವುದೇ ಸಾಮಾಜಿಕ ಅಂತರ ಇಲ್ಲದೆ ದರ್ಶನಕ್ಕೆ ಮುಂದಾದರು.

Published On - 1:08 pm, Thu, 5 November 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್