AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇತುವೆ ಎತ್ತರಿಸದೆ ಗ್ರಾಮಸ್ಥರ ಪರದಾಟ, ಭಾರೀ ಮಳೆಯಾದರೆ ಸಾಕು ಎಲ್ಲಿಲ್ಲದ ಸಂಕಷ್ಟ: ಎಲ್ಲಿ?

ಹಾವೇರಿ: ಭರಪೂರ ಮಳೆಯಾದರೆ ಸಾಕು ಹಾವೇರಿ ಮತ್ತು ಸವಣೂರು ತಾಲೂಕಿನ ಕೆಲವು ಗ್ರಾಮಗಳ ಜನರಿಗೆ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತದೆ. ಭರ್ಜರಿ ಮಳೆ ಬಂದು ನದಿಗೆ ನೀರು ಬಂದರಂತೂ ಕೆಲವು ಗ್ರಾಮಗಳಿಗೆ ಸಂಪರ್ಕವೆ ಕಡಿತಗೊಳ್ಳುತ್ತದೆ. ಎರಡ್ಮೂರು ಕಿ.ಮೀ ಇರುವ ಊರುಗಳಿಗೆ ಹೋಗಲು ಹತ್ತಿಪ್ಪತ್ತು ಕಿ.ಮೀ ಸುತ್ತು ಹಾಕಿ ಹೋಗಬೇಕಾಗುತ್ತದೆ. ಇದು ಹತ್ತಾರು ಗ್ರಾಮಗಳ ಜನರಿಗೆ ಎಲ್ಲಿಲ್ಲದ ಸಮಸ್ಯೆ ತಂದೊಡ್ಡುತ್ತಿದೆ. ಇಷ್ಟಕ್ಕೂ ಹಾವೇರಿ ತಾಲೂಕಿನ ನಾಗನೂರು, ಸವಣೂರು ತಾಲೂಕಿನ ಕಳಸೂರು, ಹಿರೇಮರಳಿಹಳ್ಳಿ ಗ್ರಾಮಗಳ ಬಳಿ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ […]

ಸೇತುವೆ ಎತ್ತರಿಸದೆ ಗ್ರಾಮಸ್ಥರ ಪರದಾಟ, ಭಾರೀ ಮಳೆಯಾದರೆ ಸಾಕು ಎಲ್ಲಿಲ್ಲದ ಸಂಕಷ್ಟ: ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 06, 2020 | 6:21 PM

Share

ಹಾವೇರಿ: ಭರಪೂರ ಮಳೆಯಾದರೆ ಸಾಕು ಹಾವೇರಿ ಮತ್ತು ಸವಣೂರು ತಾಲೂಕಿನ ಕೆಲವು ಗ್ರಾಮಗಳ ಜನರಿಗೆ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತದೆ. ಭರ್ಜರಿ ಮಳೆ ಬಂದು ನದಿಗೆ ನೀರು ಬಂದರಂತೂ ಕೆಲವು ಗ್ರಾಮಗಳಿಗೆ ಸಂಪರ್ಕವೆ ಕಡಿತಗೊಳ್ಳುತ್ತದೆ. ಎರಡ್ಮೂರು ಕಿ.ಮೀ ಇರುವ ಊರುಗಳಿಗೆ ಹೋಗಲು ಹತ್ತಿಪ್ಪತ್ತು ಕಿ.ಮೀ ಸುತ್ತು ಹಾಕಿ ಹೋಗಬೇಕಾಗುತ್ತದೆ. ಇದು ಹತ್ತಾರು ಗ್ರಾಮಗಳ ಜನರಿಗೆ ಎಲ್ಲಿಲ್ಲದ ಸಮಸ್ಯೆ ತಂದೊಡ್ಡುತ್ತಿದೆ.

ಇಷ್ಟಕ್ಕೂ ಹಾವೇರಿ ತಾಲೂಕಿನ ನಾಗನೂರು, ಸವಣೂರು ತಾಲೂಕಿನ ಕಳಸೂರು, ಹಿರೇಮರಳಿಹಳ್ಳಿ ಗ್ರಾಮಗಳ ಬಳಿ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಗಳನ್ನು ನಿರ್ಮಾಣ ಮಾಡಲಾಗಿದೆ. ಸುಮಾರು ವರ್ಷಗಳ ಹಿಂದೆಯೇ ಬ್ರಿಡ್ಜ್ ಕಂ ಬ್ಯಾರೇಜ್ ಗಳು ನಿರ್ಮಾಣವಾಗಿವೆ. ಕಳಸೂರು ಗ್ರಾಮದಿಂದ ದೇವಗಿರಿ, ಹಾವೇರಿ, ಹಿರೇಮರಳಿಹಳ್ಳಿ ಗ್ರಾಮದಿಂದ ಕೋಣನಬಗಿ, ಡಂಬರಮತ್ತೂರು, ನಾಗನೂರು ಗ್ರಾಮದಿಂದ ಕೂಡಲ ಗ್ರಾಮಗಳಿಗೆ ತೆರಳಲು ವರದಾ ನದಿ ದಾಟಿಕೊಂಡು ಹೋಗಬೇಕು.

ಶಿವಮೊಗ್ಗ, ಕಾರವಾರ ಜಿಲ್ಲೆಗಳಲ್ಲಿ ಮಳೆಯಾದರೆ.. ಈ ಊರುಗಳಿಗೆ ಹೋಗಿಬರಲು ನದಿಗಳಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಗಳಿವೆ. ಆದರೆ ಜಿಲ್ಲೆಯಲ್ಲಿ ಹಾಗೂ ಶಿವಮೊಗ್ಗ, ಕಾರವಾರ ಜಿಲ್ಲೆಗಳಲ್ಲಿ ಮಳೆಯಾದರೆ ಸಾಕು ಬ್ರಿಡ್ಜ್ ಕಂ ಬ್ಯಾರೇಜ್ ಗಳು ಸಂಪೂರ್ಣ ಮುಳುಗಡೆ ಆಗುತ್ತವೆ.

ಬ್ರಿಡ್ಜ್ ಕಂ ಬ್ಯಾರೇಜ್ ಗಳು ವರದಾ ನದಿಗೆ ನೀರು ಬಂದಾಗೊಮ್ಮೆ ಸಂಪೂರ್ಣ ಜಲಾವೃತಗೊಳ್ಳುತ್ತವೆ. ಆಗ ಬ್ರಿಡ್ಜ್ ಮಾರ್ಗವಾಗಿ ಒಂದೆರಡು ಕಿ.ಮೀ‌ಗಳಲ್ಲಿ ತಲುಪಬಹುದಾದ ಊರುಗಳಿಗೆ ಹತ್ತು, ಇಪ್ಪತ್ತು ಕಿ.ಮೀ ದೂರ ಸುತ್ತು ಹಾಕಿ ಹೋಗಬೇಕಾಗುತ್ತದೆ.

ಹೀಗಾಗಿ ಈ ಗ್ರಾಮಗಳ ಜನರು ಬ್ರಿಡ್ಜ್ ಎತ್ತರಿಸಿ ಎಂದು ಸ್ಥಳೀಯ ಜನಪ್ರತಿನಿಧಿಗಳು, ಸಚಿವರು ಅಧಿಕಾರಿಗಳಿಗೂ ಮನವಿಗಳ‌ ಮೇಲೆ ಮನವಿ ಸಲ್ಲಿಸಿದ್ದಾರೆ. ಆದರೂ ಈ ಗ್ರಾಮಗಳ ಜನರ ಕೂಗು ಮಾತ್ರ ಯಾರಿಗೂ ಕೇಳುತ್ತಿಲ್ಲ. ಇದರ ಜೊತೆ ನದಿ ಪಾತ್ರದಲ್ಲಿನ ರೈತರ ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದ ಬೆಳೆಗಳು ಸಹ ನೀರಿನಿಂದ ಜಲಾವೃತಗೊಂಡು ಬೆಳೆಗಳು ಹಾಳಾಗುತ್ತಿವೆ.

ಅನಾಹುತಗಳು ಸಂಭವಿಸಿವೆ : ಭರಪೂರ ಮಳೆ ಬಂದು ನದಿಗಳಿಗೆ ನೀರು ಬಂದಾಗೊಮ್ಮೆ ಈ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಜಲಾವೃತಗೊಳ್ಳುತ್ತವೆ. ಆಗ ಕೆಲವರು ನೀರು ಹರಿಯುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ‌ ಓಡಾಡಲು ಹೋಗಿ ನೀರು ಪಾಲಾದ ಉದಾಹರಣೆಗಳು ಇವೆ.

ನಾಗನೂರು ಗ್ರಾಮದ ಬಳಿ ಕಳೆದೆರಡು ವರ್ಷಗಳ ಹಿಂದೆ ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ಚಲಿಸುತ್ತಿದ್ದ ಲಾರಿಯೊಂದು ನದಿಗೆ ಉರುಳಿ ಲಾರಿಯಲ್ಲಿದ್ದ ಇಬ್ಬರು ಮೃತಪಟ್ಟಿದ್ದರು.

ಮಳೆ ಬಂದಾಗೊಮ್ಮೆ ಇಲ್ಲಿನ ಜನರು ಅನುಭವಿಸುವ ಸಂಕಷ್ಟಕ್ಕೆ ಫುಲ್ ಸ್ಟಾಪ್ ಹಾಕುವ ಸಲುವಾಗಿ ಜಿಲ್ಲಾಡಳಿತ ಮತ್ತು ಸರಕಾರ ಬ್ರಿಡ್ಜ್ ಕಂ ಬ್ಯಾರೇಜ್ ಗಳನ್ನು ಎತ್ತರಿಸುವ ಕೆಲಸ ಮಾಡಬೇಕಿದೆ. -ಪ್ರಭುಗೌಡ ಎನ್. ಪಾಟೀಲ

Published On - 6:20 pm, Thu, 6 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ