AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ […]

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Nov 23, 2020 | 10:06 AM

Share

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸದ್ಯ ಈಗ ಹೆಚ್‌.ಡಿ.ದೇವೇಗೌಡ ಜನರ ಮನವಿಗೆ ಸ್ಪಂದಿಸಿದ್ದಾರೆ. ದೇವೆಗೌಡರು ತಮ್ಮ ಅಪ್ತ ಕಾರ್ಯದರ್ಶಿ, ಎಂಎಲ್‌ಸಿ ತಿಪ್ಪೇಸ್ವಾಮಿ ಮೂಲಕ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು, ಸಿಬ್ಬಂದಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಣ ಹಸ್ತಾಂತರಿಸಲಾಗಿದೆ. ಸೀಗಲಹಳ್ಳಿ ಗ್ರಾಮಸ್ಥರು ಶಾಲೆಗೆ ಧನಸಹಾಯ ಮಾಡಿದ ಹೆಚ್‌.ಡಿ.ದೇವೇಗೌಡರಿಗೂ ಹಾಗೂ ಎಂ.ಎಲ್‌.ಸಿ ತಿಪ್ಪೆಸ್ವಾಮಿಯವರಿಗೂ ಧನ್ಯವಾದ ತಿಳಿಸಿದ್ದಾರೆ.

Follow Us
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಶಾಸಕ ಸ್ಥಾನ ಸಿಗುತ್ತಾ?
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಮೊರೆ ಹೋಗುತ್ತೇವೆಂದ ಹೋರಾಟಗಾರ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ