AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ […]

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Nov 23, 2020 | 10:06 AM

Share

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸದ್ಯ ಈಗ ಹೆಚ್‌.ಡಿ.ದೇವೇಗೌಡ ಜನರ ಮನವಿಗೆ ಸ್ಪಂದಿಸಿದ್ದಾರೆ. ದೇವೆಗೌಡರು ತಮ್ಮ ಅಪ್ತ ಕಾರ್ಯದರ್ಶಿ, ಎಂಎಲ್‌ಸಿ ತಿಪ್ಪೇಸ್ವಾಮಿ ಮೂಲಕ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು, ಸಿಬ್ಬಂದಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಣ ಹಸ್ತಾಂತರಿಸಲಾಗಿದೆ. ಸೀಗಲಹಳ್ಳಿ ಗ್ರಾಮಸ್ಥರು ಶಾಲೆಗೆ ಧನಸಹಾಯ ಮಾಡಿದ ಹೆಚ್‌.ಡಿ.ದೇವೇಗೌಡರಿಗೂ ಹಾಗೂ ಎಂ.ಎಲ್‌.ಸಿ ತಿಪ್ಪೆಸ್ವಾಮಿಯವರಿಗೂ ಧನ್ಯವಾದ ತಿಳಿಸಿದ್ದಾರೆ.

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ