AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ […]

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು
ಆಯೇಷಾ ಬಾನು
| Edited By: |

Updated on: Nov 23, 2020 | 10:06 AM

Share

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸದ್ಯ ಈಗ ಹೆಚ್‌.ಡಿ.ದೇವೇಗೌಡ ಜನರ ಮನವಿಗೆ ಸ್ಪಂದಿಸಿದ್ದಾರೆ. ದೇವೆಗೌಡರು ತಮ್ಮ ಅಪ್ತ ಕಾರ್ಯದರ್ಶಿ, ಎಂಎಲ್‌ಸಿ ತಿಪ್ಪೇಸ್ವಾಮಿ ಮೂಲಕ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು, ಸಿಬ್ಬಂದಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಣ ಹಸ್ತಾಂತರಿಸಲಾಗಿದೆ. ಸೀಗಲಹಳ್ಳಿ ಗ್ರಾಮಸ್ಥರು ಶಾಲೆಗೆ ಧನಸಹಾಯ ಮಾಡಿದ ಹೆಚ್‌.ಡಿ.ದೇವೇಗೌಡರಿಗೂ ಹಾಗೂ ಎಂ.ಎಲ್‌.ಸಿ ತಿಪ್ಪೆಸ್ವಾಮಿಯವರಿಗೂ ಧನ್ಯವಾದ ತಿಳಿಸಿದ್ದಾರೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ