Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ […]

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Nov 23, 2020 | 10:06 AM

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸದ್ಯ ಈಗ ಹೆಚ್‌.ಡಿ.ದೇವೇಗೌಡ ಜನರ ಮನವಿಗೆ ಸ್ಪಂದಿಸಿದ್ದಾರೆ. ದೇವೆಗೌಡರು ತಮ್ಮ ಅಪ್ತ ಕಾರ್ಯದರ್ಶಿ, ಎಂಎಲ್‌ಸಿ ತಿಪ್ಪೇಸ್ವಾಮಿ ಮೂಲಕ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು, ಸಿಬ್ಬಂದಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಣ ಹಸ್ತಾಂತರಿಸಲಾಗಿದೆ. ಸೀಗಲಹಳ್ಳಿ ಗ್ರಾಮಸ್ಥರು ಶಾಲೆಗೆ ಧನಸಹಾಯ ಮಾಡಿದ ಹೆಚ್‌.ಡಿ.ದೇವೇಗೌಡರಿಗೂ ಹಾಗೂ ಎಂ.ಎಲ್‌.ಸಿ ತಿಪ್ಪೆಸ್ವಾಮಿಯವರಿಗೂ ಧನ್ಯವಾದ ತಿಳಿಸಿದ್ದಾರೆ.

Loading...
Unable to load recommendations.
Follow Us