AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು, ಮಗನ ಸೋಲನ್ನು ನೆನೆದು ಭಾವುಕರಾದ ಹೆಚ್‌ಡಿಕೆ

ಮಂಡ್ಯ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಗನ ಸೋಲನ್ನು ಮರೆತಿಲ್ಲ. ಜಿಲ್ಲೆಯ ಮದ್ದೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಮಗನ ಸೋಲು ನೆನೆದು ಭಾವುಕರಾಗಿದ್ದಾರೆ. ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬ್ಯಾಡರಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಮಗನ ಸೋಲನ್ನು ನೆನಪಿಸಿಕೊಂಡು‌ ಭಾವುಕರಾದ್ರು. ನಿಖಿಲ್‌ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದ್ರೆ ಎಲ್ಲರೂ ಸೇರಿ ನಿಖಿಲ್‌ನನ್ನು ಚುನಾವಣೆಗೆ ನಿಲ್ಲಿಸಿದ್ರು. ಎಲ್ಲರೂ ಸೇರಿ ನಮ್ಮನ್ನ ಸೋಲಿಸಬೇಕೆಂದು ಸೋಲಿಸಿದ್ರು. ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು. ಆದರೂ ನಮಗೆ […]

ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು, ಮಗನ ಸೋಲನ್ನು ನೆನೆದು ಭಾವುಕರಾದ ಹೆಚ್‌ಡಿಕೆ
ಆಯೇಷಾ ಬಾನು
|

Updated on: Nov 22, 2020 | 10:04 AM

Share

ಮಂಡ್ಯ: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮಗನ ಸೋಲನ್ನು ಮರೆತಿಲ್ಲ. ಜಿಲ್ಲೆಯ ಮದ್ದೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಮಗನ ಸೋಲು ನೆನೆದು ಭಾವುಕರಾಗಿದ್ದಾರೆ. ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬ್ಯಾಡರಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಮಗನ ಸೋಲನ್ನು ನೆನಪಿಸಿಕೊಂಡು‌ ಭಾವುಕರಾದ್ರು. ನಿಖಿಲ್‌ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದ್ರೆ ಎಲ್ಲರೂ ಸೇರಿ ನಿಖಿಲ್‌ನನ್ನು ಚುನಾವಣೆಗೆ ನಿಲ್ಲಿಸಿದ್ರು. ಎಲ್ಲರೂ ಸೇರಿ ನಮ್ಮನ್ನ ಸೋಲಿಸಬೇಕೆಂದು ಸೋಲಿಸಿದ್ರು. ಎಲ್ಲರೂ ಸೇರಿ ನಮ್ಮನ್ನು ಮುಗಿಸಿಬಿಟ್ಟರು. ಆದರೂ ನಮಗೆ ಮಂಡ್ಯ ಜಿಲ್ಲೆಯ ಬಗ್ಗೆ ಬೇಸರವಿಲ್ಲ. ಮಂಡ್ಯ ಜಿಲ್ಲೆಯ ಜನರು ಮುಗ್ಧರು ಎಲ್ಲರನ್ನೂ ನಂಬುತ್ತಾರೆ. ಮಂಡ್ಯವನ್ನು ಹೆಚ್‌ಡಿಡಿ ಕುಟುಂಬ ಎಂದೂ ಮರೆಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಮನಸ್ಸಿನ ಕೊರಗನ್ನು ಬಿಚ್ಚಿಟ್ರು.

ನಾನು ರಾಜಕೀಯದಿಂದ ನಿವೃತ್ತಿಯಾಗಬೇಕೆಂದುಕೊಂಡಿದ್ದೆ. ಆದ್ರೆ ಜನರು ನಮಗೆ ತೋರಿಸುವ ಪ್ರೀತಿ ನೋಡಿದಾಗ ನಿವೃತ್ತಿಯಾದ್ರೆ ಅವರಿಗೆ ಅನ್ಯಾಯ ಮಾಡಿದಂತೆ ಅನಿಸುತ್ತೆ. ಈ ಕಾರಣಕ್ಕಾಗಿಯೇ ರಾಜಕೀಯದಲ್ಲಿ ಮುಂದುವರಿದಿದ್ದೇನೆ. ವೈಯುಕ್ತಿಕವಾಗಿ ರಾಜಕೀಯದಲ್ಲಿ ಮುಂದುವರೆಯುವ ಆಸೆ ಇಲ್ಲ ಎಂದು ಹೇಳಿದ್ರು.

ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು