AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ -HDK ಟಾಂಗ್​

ಕಾಂಗ್ರೆಸ್​ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ.

ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ -HDK ಟಾಂಗ್​
ಹೆಚ್​.ಡಿ. ಕುಮಾರಸ್ವಾಮಿ
Follow us
sandhya thejappa
| Updated By: KUSHAL V

Updated on: Dec 10, 2020 | 2:50 PM

ಬೆಂಗಳೂರು:ಭೂ ಸುಧಾರಣಾ ಕಾಯ್ದೆಗೆ ಸಂಬಂಧಿಸಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಆರೋಪಿಸಿದ್ದಾರೆ.

ಕಾಂಗ್ರೆಸ್​ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ. ರೈತ ನಾಯಕರ ಮುಖಾಂತರ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಜೊತೆಗೆ ಕಾಂಗ್ರೆಸ್, ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ರೈತರಿಗಾಗಿ ಹೋರಾಡುವ ಪಕ್ಷ ಜೆಡಿಎಸ್’ ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್ ಮಾತ್ರ. ಜೆಡಿಎಸ್ ರಾಜಕೀಯ ಪಕ್ಷ ಮಾತ್ರವಲ್ಲ. ಅದು ರೈತರಿಗಾಗಿ ಹೋರಾಡುವ ರೈತ ಸಂಘವೂ ಹೌದು ಎಂಬುದನ್ನು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ ಎಂದು ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದ್ದೆ ಎಂದಿದ್ದಾರೆ.

2013-14ರ ವೇಳೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನಕ್ಕೆ ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ ₹25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು? ಎಂದು ಪ್ರಶ್ನಿಸಿದ್ದಾರೆ.

JDSಗೆ ಮರುಜನ್ಮ ನೀಡಿದ್ದೆವು.. ಆದ್ರೆ ಅವರು ‘ಕೈ’ ಹಿಡಿದು ಹಾಳಾಗಿ ಹೋದ್ರು: ರೇಣುಕಾಚಾರ್ಯ ಟಾಂಗ್

ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ವಿಜಯಪುರಕ್ಕೆ ಯತ್ನಾಳ್ ನೀಡಿರುವ ಕೊಡುಗೆ ಏನು? ಶಿವಾನಂದ ಪುತ್ರ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ