AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ -HDK ಟಾಂಗ್​

ಕಾಂಗ್ರೆಸ್​ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ.

ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ -HDK ಟಾಂಗ್​
ಹೆಚ್​.ಡಿ. ಕುಮಾರಸ್ವಾಮಿ
sandhya thejappa
| Edited By: |

Updated on: Dec 10, 2020 | 2:50 PM

Share

ಬೆಂಗಳೂರು:ಭೂ ಸುಧಾರಣಾ ಕಾಯ್ದೆಗೆ ಸಂಬಂಧಿಸಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಆರೋಪಿಸಿದ್ದಾರೆ.

ಕಾಂಗ್ರೆಸ್​ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ. ರೈತ ನಾಯಕರ ಮುಖಾಂತರ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಜೊತೆಗೆ ಕಾಂಗ್ರೆಸ್, ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ರೈತರಿಗಾಗಿ ಹೋರಾಡುವ ಪಕ್ಷ ಜೆಡಿಎಸ್’ ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್ ಮಾತ್ರ. ಜೆಡಿಎಸ್ ರಾಜಕೀಯ ಪಕ್ಷ ಮಾತ್ರವಲ್ಲ. ಅದು ರೈತರಿಗಾಗಿ ಹೋರಾಡುವ ರೈತ ಸಂಘವೂ ಹೌದು ಎಂಬುದನ್ನು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ ಎಂದು ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದ್ದೆ ಎಂದಿದ್ದಾರೆ.

2013-14ರ ವೇಳೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನಕ್ಕೆ ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ ₹25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು? ಎಂದು ಪ್ರಶ್ನಿಸಿದ್ದಾರೆ.

JDSಗೆ ಮರುಜನ್ಮ ನೀಡಿದ್ದೆವು.. ಆದ್ರೆ ಅವರು ‘ಕೈ’ ಹಿಡಿದು ಹಾಳಾಗಿ ಹೋದ್ರು: ರೇಣುಕಾಚಾರ್ಯ ಟಾಂಗ್

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ