AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಗೌಡ್ರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ.. ನಿನಗೇನು ಗೊತ್ತು ಅವರ ಇತಿಹಾಸ? -HDK ಏಕವಚನದಲ್ಲಿ ವಾಗ್ದಾಳಿ

ದೇವೇಗೌಡರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ. ಹೇಮಾವತಿ ನದಿ ಈಜಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ನಿನಗೆ ಏನು ಗೊತ್ತು ದೇವಗೌಡರ ಇತಿಹಾಸ?

ದೊಡ್ಡಗೌಡ್ರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ.. ನಿನಗೇನು ಗೊತ್ತು ಅವರ ಇತಿಹಾಸ? -HDK ಏಕವಚನದಲ್ಲಿ ವಾಗ್ದಾಳಿ
H.D.ಕುಮಾರಸ್ವಾಮಿ(ಎಡ); ಸಿದ್ದರಾಮಯ್ಯ (ಬಲ)
KUSHAL V
|

Updated on: Dec 12, 2020 | 1:31 PM

Share

ಬೆಂಗಳೂರು: ಇತ್ತೀಚೆಗೆ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ನನ್ನ ಹಾಗೂ ನನ್ನ ತಂದೆ ವಿರುದ್ಧ ಏಕವಚಕದಲ್ಲಿ ಮಾತಾಡಿದ್ದಾರೆ. ನಾನೂ ಸಹ ನಿಮ್ಮ ಬಗ್ಗೆ ಏಕವಚನದಲ್ಲಿಯೇ ಮಾತನಾಡ್ಲಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನೀನು ಯಾಕಪ್ಪ ಆದಾಯ ಮಿತಿ 25 ಲಕ್ಷಕ್ಕೆ ಏರಿಕೆ ಮಾಡಿದೆ? ಎಂದು ಕುಮಾರಸ್ವಾಮಿ ಇದೇ ವೇಳೆ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ನಿನಗೆ ಏನು ಗೊತ್ತು ದೇವಗೌಡರ ಇತಿಹಾಸ? ದೇವೇಗೌಡರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ. ಹೇಮಾವತಿ ನದಿ ಈಜಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ನಿನಗೆ ಏನು ಗೊತ್ತು ದೇವಗೌಡರ ಇತಿಹಾಸ? ಎಂದು ಸಿದ್ದರಾಮಯ್ಯಗೆ ಖಾರವಾಗಿ ಪ್ರಶ್ನಿಸಿದರು.

ನಾನು ಬೇನಾಮಿ ವ್ಯವಹಾರ ಮಾಡಿದ್ದು ನೀವು ಅದನ್ನು ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ನಾನು ನಿಮಗಿಂತ ದೊಡ್ಡ ಧ್ವನಿಯಲ್ಲಿ ಮಾತನಾಡಬಲ್ಲೆ. ನೀವು ಸಿಎಂ ಆಗಿದ್ದಾಗ ಲೀ ಮೆರಿಡಿಯನ್ ಹೋಟೆಲ್‌ನಲ್ಲಿ ಶುಗರ್ ಫ್ಯಾಕ್ಟರಿ ಕ್ಲಬ್ ನಡೆಸುತ್ತಿದ್ದವರು ಯಾರು? ನಿನ್ನ ಹಾಗೆ ನಾನು ಮಾಡಿಲ್ಲ ಸಿದ್ದರಾಮಯ್ಯ ಎಂದು ಕುಮಾರಸ್ವಾಮಿ ಏಕವಚನದಲ್ಲೇ ಮಾತನಾಡಿದರು.

ನೀನು ದೇವೇಗೌಡರ ಮುಂದೆ ಬಂದು ಕಣ್ಣೀರು ಹಾಕಿದ್ದೆ ಅಪ್ಪನಿಂದ ಮಕ್ಕಳವರೆಗೆ ಕಣ್ಣೀರು ಹಾಕುವುದು ಸಂಸ್ಕೃತಿ ಅಂತಾರೆ. ನೀನು ಡಿಸಿಎಂ ಆಗಿ ಸೋತ ನಂತರ ದೇವೇಗೌಡರ ಮುಂದೆ ಬಂದು ಕಣ್ಣೀರು ಹಾಕಿದ್ದೆ. ನಾವು ಜನರ ಕಷ್ಟ ನೋಡಿ ಕಣ್ಣೀರು ಹಾಕುತ್ತೇವೆ. ನೀನು ರೀ ಡೂ ಮಾಡಿಕೊಟ್ಟಿದ್ದು ಯಾರ ಒಳ್ಳೆಯದಕ್ಕೆ ಎಂದು ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದರು.

HD ಕುಮಾರಸ್ವಾಮಿಗೆ ನಾಚಿಕೆಯಾಗಬೇಕು -ಸಿದ್ದರಾಮಯ್ಯ ಕೆಂಡಾಮಂಡಲ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ