AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಬಾಂಬ್ ಪತ್ತೆ ಅಣಕು ಪ್ರದರ್ಶನದಂತಿತ್ತು -ಹೆಚ್​ಡಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿನ್ನೆ ಬಾಂಬ್ ಪತ್ತೆಯಾಗಿ ಭಾರೀ ಸಂಚಲನ ಸೃಷ್ಟಿಸಿತ್ತು. ನಿನ್ನೆ ಬೆಳಗ್ಗೆ ಪತ್ತೆಯಾಗಿದ್ದ ಬಾಂಬ್​ ಅನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ನಿರ್ಜನ ಪ್ರದೇಶಕ್ಕೆ ಸುರಕ್ಷಿತವಾಗಿ ಕೊಂಡೊಯ್ದು ಸ್ಫೋಟಗೊಳಿಸಿದ್ದಾರೆ. ಈ ಸಂಬಂಧ ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಟಾಕಿಗೆ ತುಂಬುವ ಪೌಡರ್ ತುಂಬಿದ್ರು: ಕಬ್ಬಿಣದ ಬಾಕ್ಸ್​ನಲ್ಲಿ ಪಟಾಕಿಗೆ ತುಂಬುವ ಪೌಡರ್ ತುಂಬಿದ್ರು. ಅದರಲ್ಲಿ ಕಟ್ ಆಗಿರುವ ವೈರ್ […]

ಮಂಗಳೂರಿನಲ್ಲಿ ಬಾಂಬ್ ಪತ್ತೆ ಅಣಕು ಪ್ರದರ್ಶನದಂತಿತ್ತು -ಹೆಚ್​ಡಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 21, 2020 | 8:19 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿನ್ನೆ ಬಾಂಬ್ ಪತ್ತೆಯಾಗಿ ಭಾರೀ ಸಂಚಲನ ಸೃಷ್ಟಿಸಿತ್ತು. ನಿನ್ನೆ ಬೆಳಗ್ಗೆ ಪತ್ತೆಯಾಗಿದ್ದ ಬಾಂಬ್​ ಅನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ನಿರ್ಜನ ಪ್ರದೇಶಕ್ಕೆ ಸುರಕ್ಷಿತವಾಗಿ ಕೊಂಡೊಯ್ದು ಸ್ಫೋಟಗೊಳಿಸಿದ್ದಾರೆ. ಈ ಸಂಬಂಧ ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಪಟಾಕಿಗೆ ತುಂಬುವ ಪೌಡರ್ ತುಂಬಿದ್ರು: ಕಬ್ಬಿಣದ ಬಾಕ್ಸ್​ನಲ್ಲಿ ಪಟಾಕಿಗೆ ತುಂಬುವ ಪೌಡರ್ ತುಂಬಿದ್ರು. ಅದರಲ್ಲಿ ಕಟ್ ಆಗಿರುವ ವೈರ್ ಇತ್ತು. ದೊಡ್ಡ ಕಂಟೈನರ್ ತಂದು ಮೂಟೆ ಮಧ್ಯೆ ಅದನ್ನು ಇಟ್ಟು ನಾಟಕ ಮಾಡಿದ್ದಾರೆ. ವೈರ್ ಎಳೆಯುವ ನಾಟಕ ಎಲ್ಲಾ ನಿನ್ನೆ ನಡೆದಿದೆ. ಈ ಘಟನೆಯನ್ನು ಗಮನಿಸಿದಾಗ ಅಣಕು ಪ್ರದರ್ಶನ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದು ಆರ್​ಎಸ್​ಎಸ್​ ಕಂಪನಿಯ ಸರ್ಕಾರ ಅಲ್ಲ, ವಿಹೆಚ್​ಪಿ ನಡೆಸುತ್ತಿರುವ ಸರ್ಕಾರವೂ ಅಲ್ಲ. ಹಾಗಾಗಿ ಈ ಸರ್ಕಾರದ ಬೆನ್ನಿಗೆ ನಿಂತು ಕೆಲಸ ಮಾಡುತ್ತಿವೆ ಎಂದು ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಸಮ್ಮಿಶ್ರ ಸರ್ಕಾರ ಇದ್ದ ವೇಳೆ ಮಂಗಳೂರು ಶಾಂತವಾಗಿತ್ತು. ಇದೀಗ ಮಂಗಳೂರಲ್ಲಿ ಆತಂಕಕಾರಿ ಬೆಳವಣಿಗೆಗಳು ನಡೆಯುತ್ತಿದೆ. ಸಿಎಎ, ಎನ್​ಆರ್​ಸಿ ಜಾರಿಯಿಂದ ಶಾಂತಿಗೆ ಭಂಗ ಉಂಟಾಗಿದೆ. ಡಿ.19ರ ನಂತರದ ಘಟನೆಗಳಿಂದ ಜನರಲ್ಲಿ ಪರಸ್ಪರ ವಿಶ್ವಾಸ ಮರೆಯಾಗಿದೆ. ಮತ್ತೆ ಆತಂಕ ಉಂಟು ಮಾಡುವ ದಿನಗಳು ಮರುಕಳಿಸುತ್ತಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹೆಚ್​ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ: CAA ವಿರುದ್ಧದ ಹೋರಾಟ ಮಂಗಳೂರಲ್ಲಿ ತೀವ್ರಗೊಂಡಿದೆ. ಹೀಗಾಗಿ ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಯೋತ್ಪಾದನ ಕೃತ್ಯಗಳನ್ನು ಬೆಂಬಲಿಸಲಾಗುತ್ತಿದೆ. ಮೈತ್ರಿ ಸರ್ಕಾರ ಇದ್ದಾಗ ಸುವ್ಯವಸ್ಥೆ ಇತ್ತು. ಬಿಜೆಪಿ ಅಧಿಕಾರಕ್ಕೇರಿದ ನಂತರ ಹಿಂಸೆಗಳು ಆಗುತ್ತಿವೆ. CAA ಕಾನೂನು ಜಾರಿ‌ ಮಾಡಲು ಹೊರಟಾಗ ಅಶಾಂತಿ ವಾತಾವರಣ ಸೃಷ್ಟಿಸಲಾಗಿದೆ. ಬಾಂಬ್ ಪತ್ತೆಯಾಗಿರುವ ಬಗ್ಗೆ ಆದಷ್ಟು ಬೇಗನೆ ತನಿಖೆ ಮುಗಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Published On - 5:07 pm, Tue, 21 January 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ