ಹೌದಾ! ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರಾ?

ಬೆಂಗಳೂರು: ಹೆಚ್​.ಡಿ.ದೇವೇಗೌಡರ ಮುಂದೆ ಸೋಮಣ್ಣ ಬಚ್ಚಾ. ಸೋಮಣ್ಣ ಯಾರ್ಯಾರಿಗೆ ಯಾವಾಗೆಲ್ಲಾ ಕಾಲಿಗೆ ಬಿದ್ದಿದ್ದಾರೆ ಅನ್ನೋದು ಗೊತ್ತಿದೆ. ನಿಮಗೆ ದೇವೇಗೌಡರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ವಯಸ್ಸಿನಲ್ಲೂ ದೇವೇಗೌಡರು ಪಕ್ಷಕ್ಕಾಗಿ ಹೋರಾಟ ಮಾಡ್ತಾ ಇದ್ದಾರೆ. ಕೊನೆಯವರೆಗೂ ಅನ್ಯಾಯಗಳ ವಿರುದ್ಧ ದೇವೇಗೌಡರು ಹೋರಾಟ ಮಾಡ್ತಾರೆ. ಅವರು ಸೋಲು ಗೆಲುವು ಎರಡೂ ನೋಡಿದ್ದಾರೆ. ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರು. ಸೋಮಣ್ಣ ಯಾರ್ಯಾರ ಕಾಲಿಗೋ ಬೀಳ್ತಾರೆ. ಅವತ್ತಿನ ದಿನಗಳಲ್ಲಿ […]

ಹೌದಾ! ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರಾ?
ಸಾಧು ಶ್ರೀನಾಥ್​

Updated on: Nov 29, 2019 | 1:20 PM

ಬೆಂಗಳೂರು: ಹೆಚ್​.ಡಿ.ದೇವೇಗೌಡರ ಮುಂದೆ ಸೋಮಣ್ಣ ಬಚ್ಚಾ. ಸೋಮಣ್ಣ ಯಾರ್ಯಾರಿಗೆ ಯಾವಾಗೆಲ್ಲಾ ಕಾಲಿಗೆ ಬಿದ್ದಿದ್ದಾರೆ ಅನ್ನೋದು ಗೊತ್ತಿದೆ. ನಿಮಗೆ ದೇವೇಗೌಡರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ವಯಸ್ಸಿನಲ್ಲೂ ದೇವೇಗೌಡರು ಪಕ್ಷಕ್ಕಾಗಿ ಹೋರಾಟ ಮಾಡ್ತಾ ಇದ್ದಾರೆ. ಕೊನೆಯವರೆಗೂ ಅನ್ಯಾಯಗಳ ವಿರುದ್ಧ ದೇವೇಗೌಡರು ಹೋರಾಟ ಮಾಡ್ತಾರೆ. ಅವರು ಸೋಲು ಗೆಲುವು ಎರಡೂ ನೋಡಿದ್ದಾರೆ. ಸೋಮಣ್ಣ ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ದರು. ಸೋಮಣ್ಣ ಯಾರ್ಯಾರ ಕಾಲಿಗೋ ಬೀಳ್ತಾರೆ. ಅವತ್ತಿನ ದಿನಗಳಲ್ಲಿ ಏನೇನು ಮಾಡಿದ್ದಾರೆಂದು ನೆನಪಿಸಿಕೊಳ್ಳಲಿ. ಅವರ ಹಾಗೆ ಪಕ್ಷದಲ್ಲಿ ಬೆಳೆದು ಆ ಮೇಲೆ ಪಕ್ಷಕ್ಕೆ ದ್ರೋಹ ಮಾಡಿಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸತ್ತವರ ಮನೆಯಲ್ಲೂ ಡಿವಿಎಸ್ ನಗ್ತಾರೆ:
ಕೇಂದ್ರ ಸಚಿವ ಸದಾನಂದ ಗೌಡರು ಸತ್ತ ಮನೆಗೆ ಹೋಗಿ ನಗ್ತಾರೆ. ಹೀ ಅಂತಾ ನಗ್ತಾ ಇರ್ತಾರೆ. ಅದಕ್ಕೆ ಸತ್ತವರ ಮನೆಗೆ ಕರ್ಕೊಂಡು ಹೋಗ್ಬೇಡಿ ಅಂತ ನಾನು ಹೇಳಿದ್ದೇನೆ. ಅಲ್ಲೂ ಹೋಗಿ ಸತ್ತಿದ್ದಾರಾ ಅಂತ ನಗ್ತಾ ಕೇಳ್ತಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

Published On - 1:19 pm, Fri, 29 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us