ಸ್ಪಷ್ಟ ಬಹುಮತ ಸಿಕ್ಕರೆ ದಲಿತ ಮುಖ್ಯಮಂತ್ರಿ, ಎಚ್ ಡಿ ಕುಮಾರಸ್ವಾಮಿ ಮಹತ್ತರ ಘೋಷಣೆ!

Edited By: ಅರುಣ್​ ಕುಮಾರ್​ ಬೆಳ್ಳಿ

Updated on: Dec 02, 2022 | 2:28 PM

ಸುಮಾರು 40 ವರ್ಷಗಳ ಹಿಂದೆ ಪಕ್ಷದ ಪಿತಾಮಹ ಮತ್ತು ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ಅವರು ಹಾಸನ ಜಿಲಾ ಪಂಚಾಯತ್​ನಲ್ಲಿ ದಲಿತ ಅಭ್ಯರ್ಥಿಗೆ ಅಧ್ಯಕ್ಷ ಪಟ್ಟ ಕಟ್ಟಿದ್ದನ್ನು ಕುಮಾರಸ್ವಾಮಿ ನೆನಪಿಸಿಕೊಂಡರು.

ತುಮಕೂರು: ನಗರದಲ್ಲಿ ಶುಕ್ರವಾರ ದೊಡ್ಡ ಘೋಷಣೆಯೊಂದನ್ನು ಮಾಡಿದ ಜೆಡಿ(ಎಸ್) ಮುಖಂಡ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ತಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕರೆ ದಲಿತ ನಾಯಕನನ್ನು (Dalit leader) ಮುಖ್ಯಮಂತ್ರಿ ಮಾಡಲು ಹಿಂಜರಿಯುವುದಿಲ್ಲ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅವರು ಸುಮಾರು 40 ವರ್ಷಗಳ ಹಿಂದೆ ಪಕ್ಷದ ಪಿತಾಮಹ ಮತ್ತು ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ (HD Devegowda) ಅವರು ಹಾಸನ ಜಿಲ್ಲಾ ಪಂಚಾಯತ ಚುನಾವಣೆ ನಂತರ ದಲಿತ ಅಭ್ಯರ್ಥಿಗೆ ಅಧ್ಯಕ್ಷ ಪಟ್ಟ ಕಟ್ಟಿದ್ದನ್ನು ನೆನಪಿಸಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact

TV9 Kannada

Read More