ನಿಮ್ಮಂತೆ ರಾಸಲೀಲೆ ಮಾಡೋಕ್ಕಲ್ಲ ಪಂಚತಾರಾ ಹೋಟೆಲ್‌ನಲ್ಲಿ ಇದ್ದಿದ್ದು: HDK

ಮೈಸೂರು: ನಾನು ಸರ್ಕಾರದ ಮನೆ ತೆಗೆದುಕೊಂಡಿರದ ಕಾರಣ ಪಂಚತಾರಾ ಹೋಟೆಲ್‌ನಲ್ಲಿ ರೂಂ ಮಾಡಿದ್ದೆ. ಹೀಗಾಗಿ ಪಂಚತಾರಾ ಹೋಟೆಲ್‌ನಲ್ಲಿದ್ದೆ. ನಿಮ್ಮಂತೆ ರಾಸಲೀಲೆ ಮಾಡುವುದಕ್ಕಲ್ಲ ಎಂದು ಮಾಜಿ ಹೆಚ್​ ಡಿ ಕುಮಾರಸ್ವಾಮಿ ಗುಟುರು ಹಾಕಿದ್ದಾರೆ. KSRTC ಬಸ್ ಸ್ಕ್ರ್ಯಾಪ್ ಟೆಂಡರ್ ಕೊಡ್ಸಿ ಅಂತಾ ಬಂದಿದ್ದ: ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಹೆಚ್. ವಿಶ್ವನಾಥ್ ಬಗ್ಗೆ ತೀವ್ರ ಗರಂ ಆಗಿರುವ ಕುಮಾರಸ್ವಾಮಿ, ವಿಶ್ವನಾಥ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಈ ವಿಶ್ವನಾಥ್ ಎಷ್ಟು ದಿನ ನನ್ನ ಮನೆಗೆ ಬಂದು ತಿಂಡಿ ತಿಂದಿಲ್ಲ. […]

ನಿಮ್ಮಂತೆ ರಾಸಲೀಲೆ ಮಾಡೋಕ್ಕಲ್ಲ ಪಂಚತಾರಾ ಹೋಟೆಲ್‌ನಲ್ಲಿ ಇದ್ದಿದ್ದು: HDK
ಸಾಧು ಶ್ರೀನಾಥ್​

Updated on: Nov 28, 2019 | 1:37 PM

ಮೈಸೂರು: ನಾನು ಸರ್ಕಾರದ ಮನೆ ತೆಗೆದುಕೊಂಡಿರದ ಕಾರಣ ಪಂಚತಾರಾ ಹೋಟೆಲ್‌ನಲ್ಲಿ ರೂಂ ಮಾಡಿದ್ದೆ. ಹೀಗಾಗಿ ಪಂಚತಾರಾ ಹೋಟೆಲ್‌ನಲ್ಲಿದ್ದೆ. ನಿಮ್ಮಂತೆ ರಾಸಲೀಲೆ ಮಾಡುವುದಕ್ಕಲ್ಲ ಎಂದು ಮಾಜಿ ಹೆಚ್​ ಡಿ ಕುಮಾರಸ್ವಾಮಿ ಗುಟುರು ಹಾಕಿದ್ದಾರೆ.

KSRTC ಬಸ್ ಸ್ಕ್ರ್ಯಾಪ್ ಟೆಂಡರ್ ಕೊಡ್ಸಿ ಅಂತಾ ಬಂದಿದ್ದ:
ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಹೆಚ್. ವಿಶ್ವನಾಥ್ ಬಗ್ಗೆ ತೀವ್ರ ಗರಂ ಆಗಿರುವ ಕುಮಾರಸ್ವಾಮಿ, ವಿಶ್ವನಾಥ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಈ ವಿಶ್ವನಾಥ್ ಎಷ್ಟು ದಿನ ನನ್ನ ಮನೆಗೆ ಬಂದು ತಿಂಡಿ ತಿಂದಿಲ್ಲ. ಅವತ್ತು ನನ್ನ ಮನೆಗೆ ಬಂದಿದ್ದಲ್ಲಪ್ಲ ಕ್ಷೇತ್ರದ ಕೆಲಸ ಮಾಡಿಕೊಡಿ ಅಂತ ಕೇಳಿದ್ರಾ? ನನ್ ಮನೆಗೆ ಬಂದಿದ್ದು KSRTC ಬಸ್ ಸ್ಕ್ರ್ಯಾಪ್ ಟೆಂಡರ್ ಕೊಡಿಸಿ ಅಂತ ಕೇಳುವುದಕ್ಕೆ. ಅದರಲ್ಲಿ ಬರೋ ಕಮಿಷನ್‌ಗಾಗಿ ನನ್ನ ಮನೆ ಬಳಿ ಬಂದಿದ್ರು. KSRTC ಎಂಡಿಗೆ ಕರೆ ಮಾಡಿ ಅಂತ ನನ್ ಮನೆಗೆ ಬಾಗಿಲಿಗೆ ಬಂದಿರಲಿಲ್ವಾ ಕೇಳಿ? ಎಂದು ವಿಶ್ವನಾಥ್‌ರನ್ನ ಉಲ್ಲೇಖಿಸಿ ಹೆಚ್‌ಡಿಕೆ ಪ್ರಶ್ನೆ ಹಾಕಿದರು.

ನನ್ನ ಬಳಿ ಆಡಬೇಡ‌:
ನನ್ನ ಬಗ್ಗೆ ಲಘುವಾಗಿ ಮಾತನಾಡುವುದಕ್ಕೆ ಮುನ್ನ ಎಚ್ಚರಿಕೆಯಿಂದಿರಿ. ಬೇರೆಯವರ ಬಳಿ ಆಟವಾಡಿದ ರೀತಿ ನನ್ನ ಬಳಿ ಆಡಬೇಡ‌. ಹುಣಸೂರು ಜಿಲ್ಲೆ ವಿಚಾರ ನನ್ನ ಬಳಿ ಪ್ರಸ್ತಾಪವೇ ಮಾಡಿಲ್ಲ. ಅವರು ನನ್ನ ಭೇಟಿ ಮಾಡೋದಿರಲಿ ನಾನೇ ಅವರನ್ನ ಜಯದೇವ ಆಸ್ಪತ್ರೆಗೆ ಹೋಗಿ ಭೇಟಿ ಮಾಡಿದ್ದೇನೆ. ಚಂಗಿಪಿಂಗಿ ವ್ಯವಹಾರದ ಮೂಲಕ ರಾಜಕಾರಣ ಮಾಡಿದ್ದೀಯಾ. ಅದಕ್ಕೆಲ್ಲ ಹುಣಸೂರು ಜನ ಅಂತಿಮ ಹಾಡ್ತಾರೆ ಎಂದು ಹುಣಸೂರು ಅಖಾಡದಲ್ಲಿ ಹಳ್ಳಿಹಕ್ಕಿಗೆ ಹೆಚ್‌ಡಿಕೆ ಕುಟುಕಿದರು.

Published On - 1:37 pm, Thu, 28 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us