
ಬೆಂಗಳೂರು: ರಾಜರಾಜೇಶ್ವರಿನಗರದ ಉಪಚುನಾವಣೆಗೆ ಹಾದಿ ಸುಗಮವಾದ ಬೆನ್ನಲ್ಲೇ JDS ತನ್ನ ಅಭ್ಯರ್ಥಿ ಹೆಸರನ್ನು ಸಹ ಸೂಚಿಸಿದೆ. ಅಭ್ಯರ್ಥಿಯ ಹೆಸರನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ನಾಳೆ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸ್ತಾರೆ. ಜ್ಞಾನಭಾರತಿ ಕೃಷ್ಣಮೂರ್ತಿ ನಮ್ಮ ಪಕ್ಷದ ಕಾರ್ಯಕರ್ತ. ಸ್ವಂತ ದುಡಿಮೆಯಿಂದ ಕೃಷ್ಣಮೂರ್ತಿ ಬೆಳೆದು ಬಂದಿದ್ದಾರೆ. ಹೀಗಾಗಿ, ಅವರಿಗೆ ಟಿಕೆಟ್ ಕೊಡುತ್ತಿದ್ದೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
‘ಸ್ನೇಹವೇ ಬೇರೆ ಚುನಾವಣೆ ಬೇರೆ’
ನಾನು ಸಿನಿಮಾ ರಂಗದಿಂದ ಬಂದವನು. ಮುನಿರತ್ನ ಕೂಡ ಸಿನಿಮಾ ಕ್ಷೇತ್ರದವರು. ಹೀಗಾಗಿ, ನನ್ನ ಹಾಗೂ ಮುನಿರತ್ನ ಮಧ್ಯೆ ಸ್ನೇಹ ಇದೆ. ಆದರೆ ಸ್ನೇಹವೇ ಬೇರೆ ಚುನಾವಣೆ ಬೇರೆ. ಚುನಾವಣೆ ಸಂದರ್ಭದಲ್ಲಿ ಅದು ಅನ್ವಯಿಸಲ್ಲ. ಚುನಾವಣೆ ವೇಳೆ ಕೆಲವರು ಅಪಪ್ರಚಾರ ಮಾಡುತ್ತಾರೆ. ಹೀಗಾಗಿ, ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಒಳಗಾಗಬಾರದು. ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
Published On - 3:19 pm, Tue, 13 October 20