AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷವಾದ್ರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ.. ಇದು ST ಸಮುದಾಯಕ್ಕೆ ಅನ್ಯಾಯ: ರೇವಣ್ಣ

ಹಾಸನ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಸಚಿವ HD ರೇವಣ್ಣ ಆರೋಪಿಸಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ನೀಡಿ ಬಿಜೆಪಿ ಸದಸ್ಯ ಮೋಹನ್ ಆಯ್ಕೆಯಾದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ST ಮೀಸಲಾತಿ ಕ್ಷೇತ್ರವಾಗಿರುವ ಹಾಸನ ನಗರಸಭೆ 34ನೇ ವಾರ್ಡ್‌ನಿಂದ ಆಯ್ಕೆಯಾಗಿದ್ದಾರೆ. ಈ ಬಗ್ಗೆ ದೂರು ನೀಡಿ 2 ವರ್ಷವಾದ್ರೂ ಕ್ರಮಕೈಗೊಂಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಮಾಜಿ ಸಚಿವ HD ರೇವಣ್ಣ ಆರೋಪಿಸಿದ್ದಾರೆ. ಈಗ ಹಾಸನ ನಗರಸಭೆ ಅಧ್ಯಕ್ಷ ಸ್ಥಾನ STಗೆ ಮೀಸಲು. ಹೀಗಾಗಿ, ಬಿಜೆಪಿ ಸದಸ್ಯ […]

2 ವರ್ಷವಾದ್ರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ.. ಇದು ST ಸಮುದಾಯಕ್ಕೆ ಅನ್ಯಾಯ: ರೇವಣ್ಣ
KUSHAL V
| Edited By: |

Updated on: Oct 15, 2020 | 2:41 PM

Share

ಹಾಸನ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಸಚಿವ HD ರೇವಣ್ಣ ಆರೋಪಿಸಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ನೀಡಿ ಬಿಜೆಪಿ ಸದಸ್ಯ ಮೋಹನ್ ಆಯ್ಕೆಯಾದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ST ಮೀಸಲಾತಿ ಕ್ಷೇತ್ರವಾಗಿರುವ ಹಾಸನ ನಗರಸಭೆ 34ನೇ ವಾರ್ಡ್‌ನಿಂದ ಆಯ್ಕೆಯಾಗಿದ್ದಾರೆ. ಈ ಬಗ್ಗೆ ದೂರು ನೀಡಿ 2 ವರ್ಷವಾದ್ರೂ ಕ್ರಮಕೈಗೊಂಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಮಾಜಿ ಸಚಿವ HD ರೇವಣ್ಣ ಆರೋಪಿಸಿದ್ದಾರೆ.

ಈಗ ಹಾಸನ ನಗರಸಭೆ ಅಧ್ಯಕ್ಷ ಸ್ಥಾನ STಗೆ ಮೀಸಲು. ಹೀಗಾಗಿ, ಬಿಜೆಪಿ ಸದಸ್ಯ ಮೋಹನ್ ಅಧ್ಯಕ್ಷರಾಗುತ್ತಾರೆ. ಆದರೆ, ಇದರಿಂದ ST ಸಮುದಾಯಕ್ಕೆ ಅನ್ಯಾಯವಾಗಲಿದೆ ಎಂದು ರೇವಣ್ಣ ಹೇಳಿದ್ದಾರೆ. ಮೋಹನ್​ ತಮ್ಮ ಶಾಲಾ ದಾಖಲೆಗಳನ್ನ ತಿದ್ದಿ ST ಪ್ರಮಾಣಪತ್ರ ಸಲ್ಲಿಸಿ ಆಯ್ಕೆಯಾಗಿದ್ದಾರೆ. ಇವರ ತಂದೆಯ ಶಾಲಾ ದಾಖಲೆಗಳಲ್ಲಿ ಮರಾಠಾ ಎಂದು ಇದ್ದು ಇದು ಪ್ರವರ್ಗ 3 Bಗೆ ಸೇರುತ್ತದೆ. ಆದರೆ ಅವರು ತಮ್ಮ ಜಾತಿ ಕಲಂ ತಿದ್ದಿ ಮಹಾರಾಷ್ಟ್ರ ಗೊಂಡಾ ಸಮುದಾಯ ಎಂದು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ರೇವಣ್ಣ ಆರೋಪಿಸಿದ್ದಾರೆ.

‘ಎರಡು ವರ್ಷವಾದ್ರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ’ ಈ ಬಗ್ಗೆ ಕ್ರಮ ಕೈಗೊಳ್ಳಲು ದೂರು ನೀಡಿ ಎರಡು ವರ್ಷವಾದ್ರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಸದಸ್ಯ ಮೋಹನ್ ವಿರುದ್ಧ FIR ದಾಖಲಾಗಬೇಕಾಗಿತ್ತು. ಆದ್ರೆ ಈ ಕಡತವನ್ನ ಅಧಿಕಾರಿಗಳು ಏಕೆ ಇತ್ಯರ್ಥ‌ ಮಾಡಿಲ್ಲ ಎಂದು ರೇವಣ್ಣ ಪ್ರಶ್ನಿಸಿದ್ದಾರೆ.

ಈ ಕೂಡಲೇ ಈ ಅರ್ಜಿಯನ್ನ ಜಿಲ್ಲಾಡಳಿತ ಇತ್ಯರ್ಥ ಮಾಡಬೇಕು. ಸುಳ್ಳು ದಾಖಲೆ ನೀಡಿ ಪಡೆದಿರೋ ಜಾತಿ ಪ್ರಮಾಣ ಪತ್ರ ರದ್ದು ಮಾಡಬೇಕು. ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಈ ಪ್ರಕರಣದಲ್ಲಿ ಕ್ರಮ ಆಗೋವರೆಗೂ ಹೋರಾಟ ಮಾಡುತ್ತೇವೆ. ಜೊತೆಗೆ, ನಾಳೆ ನಡೆಯೋ‌ ನಗರಸಭೆ ಅಧ್ಯಕ್ಷರ ಚುನಾವಣೆ ವೇಳೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ HD ರೇವಣ್ಣ ಆಗ್ರಹಿಸಿದ್ದಾರೆ.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?