AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾರಿಗೆ ಮುಷ್ಕರದಲ್ಲಿ ಭಾಗಿಯಾಗೋಕೆ ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದ್ರೂ ಹಾಕಲು ಹೇಳೋದಲ್ವಾ!’

ಸಾರಿಗೆ ನೌಕರರ ಹೋರಾಟದಲ್ಲಿ ಭಾಗಿಯಾಗಲು ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದರೂ ಹಾಕೋಬೇಕು ಅಂತಾ ಸರ್ಕಾರ ಹೇಳೋದಲ್ವಾ! ಹಸಿರು ಶಾಲ್ ಹಾಕಿಕೊಂಡು ಸಾರಿಗೆ ಇಲಾಖೆ ನೌಕರರ ಹೋರಾಟದಲ್ಲಿ ಭಾಗಿಯಾಗ್ತಾರೆ ಎಂದು ರೇವಣ್ಣ ವ್ಯಂಗ್ಯವಾಡಿದರು.

‘ಸಾರಿಗೆ ಮುಷ್ಕರದಲ್ಲಿ ಭಾಗಿಯಾಗೋಕೆ ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದ್ರೂ ಹಾಕಲು ಹೇಳೋದಲ್ವಾ!’
H.D.ರೇವಣ್ಣ (ಎಡ); ಕೋಡಿಹಳ್ಳಿ ಚಂದ್ರಶೇಖರ್​ (ಬಲ)
KUSHAL V
|

Updated on: Dec 15, 2020 | 5:58 PM

Share

ಹಾಸನ: ಜಿಲ್ಲೆಯ ಆಸ್ಪತ್ರೆಗಳಲ್ಲಿ ವೈದ್ಯರೇ ಇಲ್ಲ. ವೈದ್ಯರನ್ನು ನೇಮಿಸುವಂತೆ ಹೇಳಿ ಹೇಳಿ ಸಾಕಾಗಿದೆ. ಕೂಡಲೇ ವೈದ್ಯರನ್ನು ನೇಮಿಸುವಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಗ್ರಹಿಸಿದರು. ಜೊತೆಗೆ, ವಿಧಾನಪರಿಷತ್‌ನಲ್ಲಿ ನಡೆದ ಗಲಾಟೆ ಬಗ್ಗೆ ಮಾತನಾಡಲ್ಲ. ಇದರ ಬಗ್ಗೆ ರಾಜ್ಯದ ಜನರೇ ನಿರ್ಧಾರ ಮಾಡಲಿ ಎಂದು ಹೇಳಿ ಸುಮ್ಮನಾದರು.

ಆದರೆ, ಸಾರಿಗೆ ನೌಕರರ ಮುಷ್ಕರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಭಾಗಿಯಾದ ವಿಚಾರವಾಗಿ ರೇವಣ್ಣ ಫುಲ್​ ಬ್ಯಾಟಿಂಗ್​ ಮಾಡಿದ್ದಾರೆ. ಸಹೋದರನ ಮೇಲೆ ಟೀಕೆ ಮಾಡಿದ ಕಾರಣಕ್ಕೋ ಏನೋ ಗೊತ್ತಿಲ್ಲ, ಆದರೆ ಮಾಜಿ ಸಚಿವರು ಕೋಡಿಹಳ್ಳಿಗೆ ಟಾಂಗ್​ ಕೊಡೋಕೆ ಮುಂದಾದರು.

ಸಾರಿಗೆ ನೌಕರರ ಹೋರಾಟದಲ್ಲಿ ಭಾಗಿಯಾಗಲು ಕನಿಷ್ಠ ಪಕ್ಷ ಖಾಕಿ ಬಟ್ಟೆಯಾದರೂ ಹಾಕೋಬೇಕು ಅಂತಾ ಅವರಿಗೆ ಸರ್ಕಾರ ಹೇಳೋದಲ್ವಾ! ಹಸಿರು ಶಾಲು ಹಾಕಿಕೊಂಡು ಅವರು ಸಾರಿಗೆ ಇಲಾಖೆ ನೌಕರರ ಹೋರಾಟದಲ್ಲಿ ಭಾಗಿಯಾಗ್ತಾರೆ ಎಂದು ರೇವಣ್ಣ ವ್ಯಂಗ್ಯವಾಡಿದರು.

ರೈತರು ಸಂಕಷ್ಟದಲ್ಲಿ ಇದ್ದಾರೆ ಅವರ ಬಗ್ಗೆ ಯಾರೂ ಮಾತನಾಡಲ್ಲ. ಸರ್ಕಾರ ಇಂತಹವರ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳಬೇಕು. ಸಾರಿಗೆ ಇಲಾಖೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಮಾಡಿ ಎಂದು ಕೇಳ್ತಾರೆ. ಹಾಗಾದ್ರೆ, ನಾಳೆ ಡೈರಿ ನೌಕರರನ್ನು ಸರ್ಕಾರಿ‌ ನೌಕರರನ್ನಾಗಿ ಮಾಡ್ತೀರಾ? ಎಂದು ಪ್ರಶ್ನಿಸಿದರು. ಅವರಿಗೆ ಏನು ಸೌಲಭ್ಯ ಕೊಡಬೇಕೋ ಅದನ್ನ ಕೊಡಿ. ಅದು ಬಿಟ್ಟು ಏನೇನೋ ಕೇಳಬಾರದು ಎಂದು ರೇವಣ್ಣ ಕೋಡಿಹಳ್ಳಿಗೆ ಟಾಂಗ್​ ಕೊಟ್ಟರು.

ಕೋಡಿಹಳ್ಳಿ ಚಂದ್ರಶೇಖರ್​ ಹಸಿರು ಟವೆಲ್​ ಬಿಟ್ಟು ರಾಜಕಾರಣಿಯಾಗಲಿ: ಬಡಗಲಪುರ ನಾಗೇಂದ್ರ ವ್ಯಂಗ್ಯ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ