AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ASI ಆಗಬೇಕಿದ್ದ ಹೆಡ್ ಕಾನ್ಸ್​​ಟೇಬಲ್​ ಅಪಘಾತದಲ್ಲಿ ಸಾವು, ಈಡೇರಲಿಲ್ಲ ಅವರ 25 ವರ್ಷದ ಕನಸು

ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ASI ಆಗಿ ಬಡ್ತಿ ಪಡೆಯಬೇಕಾಗಿದ್ದ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರೇಗೌಜ ಗ್ರಾಮದ ಬಳಿ ನಡೆದಿದೆ.

ಇಂದು ASI ಆಗಬೇಕಿದ್ದ ಹೆಡ್ ಕಾನ್ಸ್​​ಟೇಬಲ್​ ಅಪಘಾತದಲ್ಲಿ ಸಾವು, ಈಡೇರಲಿಲ್ಲ ಅವರ 25 ವರ್ಷದ ಕನಸು
ಆಯೇಷಾ ಬಾನು
| Edited By: |

Updated on: Dec 03, 2020 | 11:45 AM

Share

ಚಿಕ್ಕಮಗಳೂರು: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಂದು ASI ಆಗಿ ಬಡ್ತಿ ಪಡೆಯಬೇಕಾಗಿದ್ದ ಹೆಡ್ ಕಾನ್ಸ್​​ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರೇಗೌಜ ಗ್ರಾಮದ ಬಳಿ ನಡೆದಿದೆ. 50 ವರ್ಷದ ಸಿದ್ದರಾಮಪ್ಪ ಮೃತ ದುರ್ದೈವಿ.

ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದರಾಮಪ್ಪ ಚಿಕ್ಕಮಗಳೂರು ನಗರದಲ್ಲಿ ವಾಸವಿದ್ದರು. ನಿನ್ನೆ ರಾತ್ರಿ ಕರ್ತವ್ಯ ಮುಗಿಸಿ ಚಿಕ್ಕಮಗಳೂರು ನಗರಕ್ಕೆ ಬೈಕ್​ನಲ್ಲಿ ಹಿಂದಿರುಗುವಾಗ ತಾಲೂಕಿನ ಹಿರೇಗೌಜ ಬಳಿ ಸಿದ್ದರಾಮಪ್ಪನವರಿಗೆ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ASI ಸಮವಸ್ತ್ರ ಕೂಡ ಸಿದ್ದ ಮಾಡಿಕೊಂಡಿದ್ದರು: ಈ ಪರಿಣಾಮ ರಸ್ತೆಯಲ್ಲೇ ಹೆಡ್ ಕಾನ್ಸ್​​ಟೇಬಲ್ ಮೃತಪಟ್ಟಿದ್ದಾರೆ. ಮೂಲತಃ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ನಿವಾಸಿಯಾದ ಸಿದ್ದರಾಮಪ್ಪ 25 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು ಇಂದು ಎಎಸ್ಐ ಆಗಿ ಬಡ್ತಿ ಪಡೆಯಬೇಕಿತ್ತು. ಪ್ರಮೋಷನ್ ಸಿಕ್ಕ ಖುಷಿಯಲ್ಲಿ ಎಎಸ್ಐ ಸಮವಸ್ತ್ರ ಕೂಡ ಸಿದ್ದ ಮಾಡಿಕೊಂಡಿದ್ದರು.

ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಿಲ್ಲೆಯ ವಿವಿಧ ಠಾಣೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ಎಎಸ್ಐ ಆಗಬೇಕಿದ್ದ ಸಿಬ್ಬಂದಿಯನ್ನ ಕಳೆದುಕೊಂಡ ಇಲಾಖೆ ಸಿಬ್ಬಂದಿ ಮರುಗಿದ್ದಾರೆ. ಸುದೀರ್ಘ 25 ವರ್ಷ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ್ದು ಎಎಸ್ಐ ಆಗಿ ಬಡ್ತಿ ಹೊಂದಬೇಕು, ಕೆಲಸ ಮಾಡಬೇಕು ಅನ್ನೋ ಸಿದ್ದರಾಮಪ್ಪ ಕನಸು ಕೊನೆಗೂ ನನಸಾಗದಿರುವುದು ನಿಜಕ್ಕೂ ದುರಂತವೇ ಸರಿ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್