AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಮದ್ದು: ಹೆಸರು ಬಜೆ ಬೇರು.. ಇದರ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭ ಹತ್ತು ಹಲವಾರು!

ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ  ಔಷಧವಾಗಿ ಇದನ್ನು ಬಳಸುತ್ತಾರೆ. ರುಚಿಯಲ್ಲಿ ಸ್ವಲ್ಪ ಖಾರ. ಆದರೆ, ಇದರಿಂದ ಹೊರಹೊಮ್ಮುವ ಸುವಾಸನೆ ಮಾತ್ರ ಸೂಪರ್​!

ಮನೆಮದ್ದು: ಹೆಸರು ಬಜೆ ಬೇರು.. ಇದರ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭ ಹತ್ತು ಹಲವಾರು!
ಬಜೆ ಬೇರು
shruti hegde
| Edited By: |

Updated on: Nov 29, 2020 | 7:08 PM

Share

ಬಜೆ ಸಸ್ಯ ಮಲೆನಾಡಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ . ಅಧಿಕ ನೀರನ್ನು ಹೀರಿಕೊಳ್ಳುವ ಈ ಸಸ್ಯ ಭದ್ರವಾಗಿ ಬೇರೂರುತ್ತದೆ. ಜೊತೆಗೆ, ಮನೆ ಮದ್ದಾಗಿ ಬಳಸುವ ಈ ಗಿಡ ಬಜೆ ಬೇರು ಎಂಬ ಹೆಸರಿನಿಂದ ಜನಪ್ರಿಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ  ಔಷಧವಾಗಿ ಇದನ್ನು ಬಳಸುತ್ತಾರೆ. ರುಚಿಯಲ್ಲಿ ಸ್ವಲ್ಪ ಖಾರ. ಆದರೆ, ಇದರಿಂದ ಹೊರಹೊಮ್ಮುವ ಸುವಾಸನೆ ಮಾತ್ರ ಸೂಪರ್​!

ಅಂದ ಹಾಗೆ, ಈ ಬೇರಲ್ಲಿರುವ ಲಾಭ ಮಾತ್ರ ಹತ್ತಾರು. ಅವುಗಳಲ್ಲಿ ಆರೋಗ್ಯಕ್ಕೆ ಅತ್ಯಂತ ಲಾಭದಾಯಕವಾದದ್ದನ್ನು ನೋಡುವುದಾದರೇ..

1. ಉತ್ತಮ ಜೀರ್ಣಕ್ರಿಯೆ: ಬಜೆ ಬೇರನ್ನು ತಿಂಗಳಿಗೆ 2 ಬಾರಿ ತೇಯ್ದು ಒಂದು ಚಮಚ ಸೇವಿಸುವುದರಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ಜೊತೆಗೆ, ಹೊಟ್ಟೆ ನೋವು, ಜಂತು ಹುಳು ಈ ರೀತಿಯ ಸಮಸ್ಯೆಗಳ ನಿವಾರಣೆಗೆ ಬಜೆ ಬೇರು ಬಹಳ ಪರಿಣಾಮಕಾರಿ.

2.ಚಿಕ್ಕ ಮಕ್ಕಳಲ್ಲಿ ಮಾತು ಶುದ್ಧತೆ: ಮಕ್ಕಳ ಉಚ್ಛಾರಣೆಯಲ್ಲಿ ತೊದಲು ಕಂಡುಬಂದರೆ ಪ್ರತಿದಿನ ಬಜೆ ಬೇರನ್ನು ತೇಯ್ದು ಕೊಡುವುದರಿಂದ ಮಾತಿನಲ್ಲಿ ಶುದ್ಧತೆ ಕಂಡುಬರುತ್ತದೆ. ಕೇವಲ ಮಕ್ಕಳಲ್ಲದೆ ವಯಸ್ಕರೂ ಸಹ ಈ ಬೇರನ್ನು ಸೇವಿಸುವ ಮೂಲಕ ಸ್ಪಷ್ಟವಾಗಿ ಉಚ್ಛರಿಸಬಹುದಾಗಿದೆ.

3.ಶ್ವಾಸಕೋಶ ಸಂಬಂಧಿ ಸಮಸ್ಯೆಗೆ ಪರಿಹಾರ: ಉಸಿರಾಟ ಕ್ರಿಯೆ, ಕೆಮ್ಮು, ಕಫದಂತಹ ಸಮಸ್ಯೆಗಳಿಗೆ ಬಜೆ ಬೇರನ್ನು ಕುಟ್ಟಿ, ಪುಟಿ ಮಾಡಿ, ನೀರಿನಲ್ಲಿ ಕುದಿಸಿ, ಕಷಾಯ ಮಾಡಿ ಸೇವಿಸುವುದು ಉತ್ತಮ. ನೆಗಡಿ(ಶೀತ), ಜ್ವರದ ಸಮಸ್ಯೆಗಳಿಗೂ ಬಜೆ ಬೇರಿನ ಕಷಾಯ ಅತ್ಯಂತ ಪರಿಣಾಮಕಾರಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್