AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬನ್ ಪಾರ್ಕ್​ ವಾಯು ವಿಹಾರಕ್ಕೆ ನಾಯಿನ್ನ ಕರೆದೊಯ್ಯುವ ಮುನ್ನ ನಿಮ್ಮ ಬಳಿ ಇವೆಲ್ಲ ಇರಲೇಬೇಕು, ಎಚ್ಚರಾ!

ಕಬ್ಬನ್ ಪಾರ್ಕ್ ವಾಯು ವಿಹಾರಕ್ಕೆ ಬರುವಾಗ ತಮ್ಮ ತಮ್ಮ ಮುದ್ದಿನ ನಾಯಿಗಳನ್ನು ಜೊತೆಯಲ್ಲಿ ತರುವವರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ತೋಟಗಾರಿಕೆ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಉದ್ಯಾನವನಕ್ಕೆ ಸಾಕು ನಾಯಿಗಳನ್ನು ಕರೆತರುವ ಜೊತೆಯಲ್ಲಿ ಅದರ ಆರೋಗ್ಯ ಪ್ರಮಾಣಪತ್ರ ಕಡ್ಡಾಯವಾಗಿ ತರಬೇಕು. ನಿಯಮ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ವಾಕ್ ಮಾಡಲು ಹೊರಗಡೆ ಹೋದಾಗ ನಾಯಿಗಳನ್ನು ಕರೆದೊಯ್ಯುವುದು ಸಹಜ. ಆದರೆ ಕೆಲವೊಮ್ಮೆ ಇದರಿಂದ ಜನರಿಗೆ ನಾನಾ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ ಗೆ […]

ಕಬ್ಬನ್ ಪಾರ್ಕ್​ ವಾಯು ವಿಹಾರಕ್ಕೆ ನಾಯಿನ್ನ ಕರೆದೊಯ್ಯುವ ಮುನ್ನ ನಿಮ್ಮ ಬಳಿ ಇವೆಲ್ಲ ಇರಲೇಬೇಕು, ಎಚ್ಚರಾ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 10, 2020 | 1:23 PM

Share

ಕಬ್ಬನ್ ಪಾರ್ಕ್ ವಾಯು ವಿಹಾರಕ್ಕೆ ಬರುವಾಗ ತಮ್ಮ ತಮ್ಮ ಮುದ್ದಿನ ನಾಯಿಗಳನ್ನು ಜೊತೆಯಲ್ಲಿ ತರುವವರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ತೋಟಗಾರಿಕೆ ಇಲಾಖೆ ಆದೇಶವೊಂದನ್ನು ಹೊರಡಿಸಿದೆ. ಉದ್ಯಾನವನಕ್ಕೆ ಸಾಕು ನಾಯಿಗಳನ್ನು ಕರೆತರುವ ಜೊತೆಯಲ್ಲಿ ಅದರ ಆರೋಗ್ಯ ಪ್ರಮಾಣಪತ್ರ ಕಡ್ಡಾಯವಾಗಿ ತರಬೇಕು. ನಿಯಮ ಉಲ್ಲಂಘನೆಯಾದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸಾಮಾನ್ಯವಾಗಿ ವಾಕ್ ಮಾಡಲು ಹೊರಗಡೆ ಹೋದಾಗ ನಾಯಿಗಳನ್ನು ಕರೆದೊಯ್ಯುವುದು ಸಹಜ. ಆದರೆ ಕೆಲವೊಮ್ಮೆ ಇದರಿಂದ ಜನರಿಗೆ ನಾನಾ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ ಗೆ ಹೋಗುವವರಿಗೆ ಹೊಸ ನಿರ್ಬಂಧನೆಗಳನ್ನು ತೋಟಗಾರಿಕೆ ಇಲಾಖೆ ಜಾರಿಗೊಳಿಸಿದೆ.

ನಿಯಮಗಳೇನು: ನಾಯಿಗಳಿಗೆ ಮುಖಗವಸು (ಮಾಸ್ಕ್) ಮತ್ತು ಲಸಿಕೆ ಹಾಕಿಸಿ, ಜೊತೆಗೆ ಆರೋಗ್ಯ ಪ್ರಮಾಣಪತ್ರ ತಂದರೆ ಪಾರ್ಕ್ ಒಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ನಾಯಿಯ ಕೊರಳು ಪಟ್ಟಿಗೆ ಸಿಲುಕಿಸುವ ಚೈನ್ ನನ್ನು ಮಾಲಿಕರು ಹಿಡಿತದಲ್ಲಿರಿಸಿಕೊಳ್ಳಬೇಕು.

ಉದ್ಯಾನವನದ ಒಳಗೆ ನಾಯಿಗಳು ಮಲ ಹಾಗೂ ಮೂತ್ರ ವಿಸರ್ಜನೆ ಮಾಡಿದರೆ ಸಂಬಂಧಪಟ್ಟ ಮಾಲಿಕರೇ ಶುಚಿಗೊಳಿಸಬೇಕು. ನಿಯಮಗಳನ್ನು ನಿರ್ಲಕ್ಷಿಸಿಸುವ ಮಾಲಿಕರಿಗೆ ಇಂತಿಷ್ಟು ದಂಡ ಹಾಕುವುದು ಅಂತಾನೂ ನಿಗದಿಯಾಗಿದೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!