ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಆಗ್ರಹಿಸಿದ್ದಾರೆ. 

ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ
ಡಾ. ಕೆ ಸುಧಾಕರ್​
ಸಾಧು ಶ್ರೀನಾಥ್​

Updated on: Mar 24, 2021 | 12:16 PM

ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ನಾನೂ ಸೇರಿದಂತೆ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಲಿ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಾ ಪಂಥಾಹ್ವಾನ ನೀಡಿದ್ದಾರೆ.

ಮುಖ್ಯಮಂತ್ರಿ ಆಗಿದ್ದಾಗ ಯಾರು ಯಾರು ಏನೇನು ಮಾಡಿದ್ದರು? ಎಂದು ಎಲ್ಲದರ ಬಗ್ಗೆಯೂ ತನಿಖೆಯಾಗಲಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಎಂದು ಡಾ.ಕೆ.ಸುಧಾಕರ್ ಪ್ರಶ್ನೆ ಎತ್ತಿದ್ದಾರೆ. ಹೀಗಾಗಿ 224 ಶಾಸಕರ ಬಗ್ಗೆ ಕೂಡ ತನಿಖೆಯಾಗಲಿ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಗ್ರಹಿಸಿದ್ದಾರೆ.

ಎಲ್ಲಾ ಮಂತ್ರಿಗಳದ್ದು ಶಾಸಕರದ್ದು ವಿರೋಧ ಪಕ್ಷಗಳವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ. ಸಮಾಜಕ್ಕೆ ಇವರೆಲ್ಲರೂ ಕೂಡ ಮಾದರಿಯಾಗಿದ್ದಾರೆ. ಆದರೆ ಇವರೆಲ್ಲರೂ ಕೂಡ ಒಪ್ಪಿಕೊಳ್ಳಲಿ. 224 ಶಾಸಕರ ಬಗ್ಗೆಯೂ ಕೂಡ ತನಿಖೆಯಾಗಲಿ ಎಂದು ಸುಧಾಕರ್ ಆಗ್ರಹಿಸಿದ್ದಾರೆ.

YouTube video player

Published On - 11:29 am, Wed, 24 March 21

Follow Us